Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ-ಬೆಂಗಳೂರು ನಡುವಿನ ವಿಮಾನ ಸಂಚಾರ...

ಕಲಬುರಗಿ-ಬೆಂಗಳೂರು ನಡುವಿನ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಸಂಸದ ರಾಧಾಕೃಷ್ಣ ದೊಡ್ಡಮನಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 Nov 2025 6:08 PM IST
share
ಕಲಬುರಗಿ-ಬೆಂಗಳೂರು ನಡುವಿನ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಸಂಸದ ರಾಧಾಕೃಷ್ಣ ದೊಡ್ಡಮನಿ ಒತ್ತಾಯ

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ತಕ್ಷಣ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜಾರಪು ಅವರನ್ನು ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದರು ಕಲಬುರಗಿಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವುದು ಅವಶ್ಯಕವಾಗಿರುವ ಬಗ್ಗೆ ಮನವರಿಕೆ ಮಾಡಿದರು.

ಸ್ಟಾರ್ ಏರ್ ಲೈನ್ಸ್ ಸಂಸ್ಥೆ ಕಲಬುರಗಿಯಿಂದ ತನ್ನ ವಿಮಾನಯಾನ ಕಾರ್ಯಚರಣೆಯನ್ನು ಸ್ಥಗಿತಗೊಳಿಸಿದೆ. ಇದರಿಂದ‌ ಕಲಬುರಗಿ ಅಷ್ಟೇ ಅಲ್ಲದೇ ಸುತ್ತಮುತ್ತಲಿನ ಭಾಗಗಳ ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗಿದೆ ಎಂದು ರಾಧಾಕೃಷ್ಣ ದೊಡ್ಡಮನಿ ಅವರು ಹೇಳಿದ್ದಾರೆ.

ಕಲಬುರಗಿಯು ಕಲ್ಯಾಣ ಕರ್ನಾಟಕದ ಪ್ರಮುಖ ವ್ಯಾಣಿಜ್ಯ ಕೇಂದ್ರವಾಗಿದ್ದು, ಅದರ ಜೊತೆಗೆ ವಿಭಾಗೀಯ ಕೇಂದ್ರವಾಗಿದೆ. ಜಿಲ್ಲೆಯಲ್ಲಿ ಕೇಂದ್ರೀಯ ವಿವಿ ಸೇರಿದಂತೆ ನಾಲ್ಕು ವಿವಿಗಳಿದ್ದು, ಪ್ರಮುಖ ಶಿಕ್ಷಣ ಸಂಸ್ಥೆಗಳಿವೆ. ಸಾರ್ವಜನಿಕರು ಬೆಂಗಳೂರಿನೊಂದಿಗೆ ವ್ಯಾಪಾರ ಉದ್ಯೋಗ ಸೇರಿದಂತೆ ಶೈಕ್ಷಣಿಕ ಅವಶ್ಯಕತೆಗಳಿಗೆ ನಿರಂತರವಾಗಿ ಪ್ರಯಾಣ ಮಾಡುತ್ತಿದ್ದು, ಇದೀಗ ವಿಮಾನ ಸಂಚಾರ ಸ್ಥಗಿತಗೊಂಡಿದ್ದರಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಕಲಬುರಗಿಯಿಂದ ಬೆಂಗಳೂರಿಗೆ ವಿಮಾನ ಸಂಚಾರ ಪುನಃ ಆರಂಭಿಸುವಂತೆ ಸಚಿವರಿಗೆ ಒತ್ತಾಯಿಸಿದರು.

ಕಲಬುರಗಿಯಿಂದ ಮುಂಬೈ ಹಾಗೂ ನವದೆಹಲಿ ವಿಮಾನ ಸಂಚಾರ ಪ್ರಾರಂಭಿಸುವಂತೆ ಇದೇ ಸಂದರ್ಭದಲ್ಲಿ ಸಂಸದರು ವಿಮಾನಯಾನ ಸಚಿವರನ್ನು ಕೋರಿದರು.

ಸಂಸದರ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮೊಬೈಲ್ ಮೂಲಕ ಮಾತನಾಡಿ, ವಿಮಾನಯಾನ ಪುನಃ ಆರಂಭಿಸುವ ಕುರಿತು ಕೂಡಲೇ ಕ್ರಮವಹಿಸುವಂತೆ ಸೂಚಿಸಿದರು.

ನಂತರ, ಸಂಸದರೊಂದಿಗೆ ಮಾತನಾಡಿದ ಸಚಿವರು, ದೆಹಲಿಗೆ ವಾಪಸ್ ತೆರಳಿದ ನಂತರ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಸಂಸದರಾದ ಜಿ.ಕುಮಾರ ನಾಯಕ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X