Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೇಂದ್ರ ಬಜೆಟ್‌ನಲ್ಲಿ ಕಲಬುರಗಿಯ...

ಕೇಂದ್ರ ಬಜೆಟ್‌ನಲ್ಲಿ ಕಲಬುರಗಿಯ ಬೇಡಿಕೆಗಳ ಈಡೇರಿಕೆಗೆ ಮುತ್ತಣ್ಣ ಎಸ್.ನಡಗೇರಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Jan 2026 7:38 PM IST
share
ಕೇಂದ್ರ ಬಜೆಟ್‌ನಲ್ಲಿ ಕಲಬುರಗಿಯ ಬೇಡಿಕೆಗಳ ಈಡೇರಿಕೆಗೆ ಮುತ್ತಣ್ಣ ಎಸ್.ನಡಗೇರಿ ಆಗ್ರಹ
"ಕೇಂದ್ರ ಸರಕಾರವು ಕಲ್ಯಾಣ ಕರ್ನಾಟಕ ಭಾಗದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ"

ಕಲಬುರಗಿ : ಕೇಂದ್ರ ಸರ್ಕಾರದ ಮುಂದಿನ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಕಲಬುರಗಿ ಜಿಲ್ಲೆಯ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕಲ್ಯಾಣ ನಾಡು ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್.ನಡಗೇರಿ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹನ್ನೊಂದು ವರ್ಷಗಳಿಂದ ಕೇಂದ್ರ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದ್ದು, ವಿಶೇಷವಾಗಿ ಕಲಬುರಗಿ ಜಿಲ್ಲೆಗೆ ಅಭಿವೃದ್ಧಿ ವಿಷಯದಲ್ಲಿ ಅನ್ಯಾಯವಾಗಿದೆ. ಇನ್ನೂ ಮುಂದಾದರೂ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡುವ ಮೂಲಕ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಕಲಬುರಗಿಯು ಅಭಿವೃದ್ಧಿ, ಹೊಸ ಯೋಜನೆಗಳ ಘೋಷಣೆಗಳ ವಿಷಯಗಳಲ್ಲಿ ಅತೀ ಹಿಂದುಳಿದಿದೆ, ಇಲ್ಲಿ "ಸಬ್ ಕಾ ಸಾಥ್, ಕೇವಲ ಕಲಬುರಗಿ ಕಾ ಬರ್ಬಾದ್" ಎನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿ ಜಿಲ್ಲೆಯ ಇಎಸ್‌ಐಸಿ ಆಸ್ಪತ್ರೆಯನ್ನು ಏಮ್ಸ್ (AIIMS) ಆಗಿ ಮೇಲ್ದರ್ಜೆಗೆ ಏರಿಸಬೇಕು ಎನ್ನುವುದು ಪ್ರಮುಖ ಬೇಡಿಕೆಯಾಗಿದೆ. 2018ರ ಪಾರ್ಲಿಮೆಂಟರಿ ಅಕೌಂಟ್ಸ್ ಕಮಿಟಿ ವರದಿ, 2020ರ ಮದ್ರಾಸ್ ಹೈಕೋರ್ಟ್ ತೀರ್ಪು ಹಾಗೂ ನಂಜುಂಡಪ್ಪ ಸಮಿತಿ ಶಿಫಾರಸ್ಸಿನಂತೆ ಹಿಂದುಳಿದ ಪ್ರದೇಶವಾದ ಕಲಬುರಗಿಯಲ್ಲಿ ಏಮ್ಸ್ ಸ್ಥಾಪನೆ ಅಗತ್ಯವಿದೆ ಎಂದು ತಿಳಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020ರಲ್ಲಿ ಈ ಕುರಿತು ಕೇಂದ್ರಕ್ಕೆ ಪತ್ರ ಬರೆದಿದ್ದರೂ ಇದುವರೆಗೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸೇಡಂ ರಸ್ತೆಯಲ್ಲಿರುವ ಇಎಸ್‌ಐಸಿ ಆಸ್ಪತ್ರೆ ಸಂಕೀರ್ಣದಲ್ಲಿ ಈಗಾಗಲೇ ಸುಸಜ್ಜಿತ ಆಸ್ಪತ್ರೆ, ವೈದ್ಯಕೀಯ, ಪ್ಯಾರಾಮೆಡಿಕಲ್, ಡೆಂಟಲ್ ಮತ್ತು ನರ್ಸಿಂಗ್ ಕಾಲೇಜುಗಳು ಇದ್ದು, ಹೆಚ್ಚುವರಿ ಭೂಮಿಯೂ ಲಭ್ಯವಿದೆ. ಈಗಿರುವ ಮೂಲಸೌಕರ್ಯವನ್ನು ಏಮ್ಸ್ ಆಗಿ ಮೇಲ್ದರ್ಜೆಗೆ ಏರಿಸಿದರೆ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಅವರು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲೂ ಕಲಬುರಗಿ ಜಿಲ್ಲೆ ಕಡೆಗಣಿಸಲಾಗಿದೆ ಎಂದು ಆರೋಪಿಸಿದ ಅವರು, ಬೀದರ್–ಕಲಬುರಗಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿ 50, ಕಲಬುರಗಿ–ರಾಯಚೂರು ರಾಷ್ಟ್ರೀಯ ಹೆದ್ದಾರಿ 150 ಸೇರಿದಂತೆ ಪ್ರಮುಖ ಮಾರ್ಗಗಳನ್ನು ನಾಲ್ಕು ಪಥದ ಹೆದ್ದಾರಿಗಳಾಗಿ ಅಭಿವೃದ್ಧಿಪಡಿಸಬೇಕು ಎಂದು ಬೇಡಿಕೆ ಇಟ್ಟಿರುವ ಮುತ್ತಣ್ಣ ಅವರು, ಕಲಬುರಗಿ ನಗರಕ್ಕೆ ಎರಡನೇ ವರ್ತುಲ ರಸ್ತೆ ನಿರ್ಮಾಣಕ್ಕೂ ಒತ್ತಾಯಿಸಿದರು.

ರೈಲು ಸೇವೆಗಳ ಕುರಿತು ಮಾತನಾಡಿದ ಅವರು, 2014ರಲ್ಲಿ ಶಂಕುಸ್ಥಾಪನೆಯಾಗಿರುವ ಕಲಬುರಗಿ ರೈಲ್ವೆ ವಿಭಾಗವನ್ನು ತಕ್ಷಣ ಆರಂಭಿಸಬೇಕು ಎಂದು ಆಗ್ರಹಿಸಿದರು. ಕಲಬುರಗಿ–ಲಾತೂರ ಹೊಸ ರೈಲು ಮಾರ್ಗಕ್ಕೆ ಅನುದಾನ ನೀಡಬೇಕು ಹಾಗೂ ಕಲಬುರಗಿಯಿಂದ ಬೆಂಗಳೂರು–ಮೈಸೂರು ಮತ್ತು ಮಂಗಳೂರು ಮಾರ್ಗಗಳಿಗೆ ಹೊಸ ರೈಲು ಸೇವೆ ಆರಂಭಿಸಬೇಕೆಂದು ಹೇಳಿದರು.

ಇದೇ ವೇಳೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಉಡಾನ್ ಯೋಜನೆಯಡಿ ವಿಮಾನ ಸೇವೆಗಳನ್ನು ಪುನರಾರಂಭಿಸಿ ಕನಿಷ್ಠ ಹತ್ತು ವರ್ಷಗಳ ಕಾಲ ವಿಸ್ತರಣೆ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಅನುದಾನ ಕೇಳಲು ನಿಯೋಗವನ್ನು ಕೇಂದ್ರಕ್ಕೆ ಕಳುಹಿಸಬೇಕು. ಈ ನಿಯೋಗದಲ್ಲಿ ಕಲಬುರಗಿ ಜಿಲ್ಲೆಯ ಏಮ್ಸ್, ಹೆದ್ದಾರಿ, ರೈಲ್ವೆ ವಿಭಾಗ ಸೇರಿದಂತೆ ಸಮಗ್ರ ಅಭಿವೃದ್ಧಿ ವಿಷಯಗಳನ್ನು ಮುಂದಿಟ್ಟು ಮಾತುಕತೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಾಬು ಮದನಕರ, ಸಂಘಟಕರಾದ ಜೈಭೀಮ್ ಮಾಳಗೆ, ಮೋಹನ ಸಾಗರ, ನಾಗು ಡೊಂಗರಗಾಂವ್ ಹಾಗೂ ದತ್ತು ಜಮಾದಾರ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X