ಮೈಸೂರು | ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು,ಜೂ.22: ತಂದೆ, ತಾಯಿ ಮತ್ತು ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.
ಶಿವಣ್ಣ, ನಾಗಮ್ಮ ಮತ್ತು ಅವರ ಮಗಳು ರಕ್ಷಿತ ಆತ್ಮಹತ್ಯೆ ಮಾಡಿಕೊಂಡವರು. ರಕ್ಷಿತಳಿಗೆ ವಿವಾಹ ನಿಶ್ಚಯವಾಗಿತ್ತು. ಆದರೆ ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ರಕ್ಷಿತ ಕಳುಹಿಸಿದ ಸಂದೇಶ ಹಾಗೂ ಕೆಲವು ಫೋಟೋಗಳನ್ನು ಇಟ್ಟುಕೊಂಡು ಉಲ್ಲಾಸ್ ಗೌಡ ರಕ್ಷಿತ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಮೆಸೇಜ್ ಮತ್ತು ಫೋಟೋಗಳನ್ನು ಮದುಮಗನಿಗೂ ಕಳುಹಿಸಿದ್ದ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.
ಘಟನಾ ಸ್ಥಳಕ್ಕೆ ವರುಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




