Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೆಕೆಆರ್‌ಡಿಬಿ ಮಂಡಳಿ...

ಕಲಬುರಗಿ | ಕೆಕೆಆರ್‌ಡಿಬಿ ಮಂಡಳಿ ಕಾರ್ಯದರ್ಶಿಯಾಗಿ ನಳಿನ್ ಅತುಲ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ19 Jun 2025 9:52 PM IST
share
ಕಲಬುರಗಿ | ಕೆಕೆಆರ್‌ಡಿಬಿ ಮಂಡಳಿ ಕಾರ್ಯದರ್ಶಿಯಾಗಿ ನಳಿನ್ ಅತುಲ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿಯಾಗಿ 2014ರ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ನಳಿನ್ ಅತುಲ್ ಗುರುವಾರ ಅಧಿಕಾರ ಸ್ವೀಕರಿಸಿದರು.

ಈ ಮೊದಲು ಮಂಡಳಿಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಎಂ.ಸುಂದರೇಶ ಬಾಬು ಅವರನ್ನು ಕೇಂದ್ರ ಸರಕಾರಿ ಸೇವೆಗೆ ನಿಯೋಜನೆ ಮಾಡಿದ್ದರಿಂದ ಅವರಿಂದ ತೆರವಾದ ಸ್ಥಾನಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನಳಿನ್ ಅತುಲ್ ಅವರನ್ನು ಸರಕಾರ ವರ್ಗಾಯಿಸಿತ್ತು.

ಮೂಲತ ಬಿಹಾರ ರಾಜ್ಯದವರಾಗಿರುವ ನಳಿನ್ ಅತುಲ್ ಬಿಟೆಕ್ ಪದವೀಧರರಾಗಿದ್ದಾರೆ. ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಖ್ಯಸ್ಥರಾಗಿ, ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದಲ್ಲದೆ ಕಲಬುರಗಿಯಲ್ಲಿ 2019ರ ಅಕ್ಟೋಬರ್ 22 ರಿಂದ 2022ರ ಜನವರಿ 27ರವರೆಗೆ ಶಾಲಾ ಶಿಕ್ಷಣ ಇಲಾಖೆಯ ಅಪರ ಅಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಕೆಕೆಆರ್‌ಡಿಬಿ ಮಂಡಳಿ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರದ ಬಳಿಕ ಮಾತನಾಡಿದ ನಳಿನ್ ಅತುಲ್, ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರ ಸಲಹೆ ಹಾಗೂ ಪ್ರದೇಶದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಅವರ ಅಭಿಪ್ರಾಯ ಪಡೆದು ರಾಜ್ಯ ಸರಕಾರಿ ಮಂಡಳಿಗೆ ಒದಗಿಸಿರುವ ಅನುದಾನವನ್ನು ಪ್ರದೇಶದ ಒಳಿತಿಗೆ ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಮಂಡಳಿ ಉಪ ಕಾರ್ಯದರ್ಶಿ ಮಂಜುನಾಥ ಸ್ವಾಮಿ ಜಿ.ಎನ್, ಅಪರ ನಿರ್ದೇಶಕಿ ಪ್ರವೀಣಪ್ರಿಯಾ ಡೇವಿಡ್, ವಿಜಯಕುಮಾರ ಪಾಟೀಲ, ಅಕ್ಕನಾಗಮ್ಮ, ಪ್ರಕಾಶ ಕುದರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X