Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪ್ರವಾಹ ಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ...

ಪ್ರವಾಹ ಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ ಏರಿಕೆ, 53 ಕಾಳಜಿ ಕೇಂದ್ರ ಸ್ಥಾಪನೆ: ಕಲಬುರಗಿ ಡಿಸಿ ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ28 Sept 2025 9:43 PM IST
share
ಪ್ರವಾಹ ಪೀಡಿತ ಗ್ರಾಮಗಳ ಸಂಖ್ಯೆ 85ಕ್ಕೆ ಏರಿಕೆ, 53 ಕಾಳಜಿ ಕೇಂದ್ರ ಸ್ಥಾಪನೆ: ಕಲಬುರಗಿ ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಜಿಲ್ಲೆಯಾದ್ಯಂತ ಸತತ ಮಳೆ ಮತ್ತು ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟದರಿಂದ ಉಕ್ಕಿ ಹರಿಯುತ್ತಿರುವ ಭೀಮೆಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳ ಸಂಖ್ಯೆ ರವಿವಾರಕ್ಕೆ 85ಕ್ಕೆ ಏರಿಕೆಯಾಗಿದ್ದು, ಇದೂವರೆಗೆ 53 ಕಾಳಜಿ ತೆರೆದು 6,664 ಜನ ಸಂತ್ರಸ್ತರನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.

ಜಿಲ್ಲೆಯ ಅಫಜಲಪೂರ, ಜೇವರ್ಗಿ, ಕಲಬುರಗಿ, ಚಿತ್ತಾಪುರ, ಚಿಂಚೋಳಿ, ಸೇಡಂ, ಕಾಳಗಿ, ಶಹಾಬಾದ ತಾಲೂಕಿನಾದ್ಯಂತ ಒಟ್ಟಾರೆ 3,050 ಪುರುಷರು, 2,270 ಮಹಿಳೆಯರು, 1,344 ಮಕ್ಕಳು ಸೇರಿದಂತೆ 6,664 ಜನರನ್ನು ರಕ್ಷನೆ ಮಾಡಿ ಹತ್ತಿರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಅವರಿಗೆ ಊಟೋಪಚಾರ, ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ, ಆರೋಗ್ಯ ಇಲಾಖೆಯಿಂದ ನಿಯಮಿತವಾಗಿ ಆರೋಗ್ಯ ತಪಾಸಣೆಯೂ ಮಾಡಲಾಗುತ್ತಿದೆ ಎಂದು ಡಿಸಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಮಳೆಯ ಮುನ್ಸೂಚನೆ ಇರುವ ಕಾರಣ ಸೊನ್ನ ಮತ್ತು ಬೆಣ್ಣೆತೋರಾ ಬ್ಯಾರೇಜಿಗೆ ಬರುವ ನೀರಿನ ಒಳ ಹರಿವಿನ ಪ್ರಮಾಣದಂತೆ ಹೊರ ಹರಿವು ಹೆಚ್ಚಲಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂತ್ರಸ್ತರನ್ನು ರಕ್ಷಣೆಗೆ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ 20 ಸಂಖ್ಯೆ ಬಲ ಹೊಂದಿರುವ ಎನ್.ಡಿ.ಆರ್.ಎಫ್. ತಂಡ ಮತ್ತು ಅಫಜಲಪೂರ ತಾಲೂಕಿನ ಮಣ್ಣೂರನಲ್ಲಿ ಒಂದು ಎಸ್.ಡಿ.ಆರ್.ಎಫ್., ತಂಡ ನಿಯೋಜಿಸಲಾಗಿದೆ. ಇದಲ್ಲದೆ ಇತರೆ ಪ್ರವಾಹ ಪೀಡಿತ ಪ್ರದೇಶದಲ್ಲಿ ಪೊಲೀಸ್, ಗೃಹ ರಕ್ಷಕದಳ, ಅಗ್ನಿಶಾಮಕ ತಂಡಗಳು ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

ಪ್ರವಾಹದ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಈಗಾಗಲೆ ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣೆ ಮತು ಕಾಳಜಿ ಕೇಂದ್ರ ಉಸ್ತುವಾರಿಗೆ 39 ಜನ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದೆ. ಮಾನವ ಹಾನಿ ಮತ್ತು ಪ್ರಾಣಿ ಹಾನಿ ತಡೆಯಲು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಡಿ.ಸಿ. ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.

ಪ್ರವಾಹದಿಂದ ಅಲ್ಲಲ್ಲಿ ರಸ್ತೆ ಹಾನಿ, ಸೇತುವೆ ಮುಳುಗಡೆಯಾಗಿ ರಸ್ತೆ ಸಂಚಾರ ಬಂದ್ ಆಗಿರುವುದರಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ನಿರಂತರ ಮಳೆಯಿಂದ ಅಪಾಯವಿರುವ ಮನೆ ಗೋಡೆ ಸೇರಿದಂತೆ ಇತರೆ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಜಿಲ್ಲಾಡಳಿತ 24 ಗಂಟೆ ಜನರ ರಕ್ಷಣೆಯಲ್ಲಿ ಕಾರ್ಯನಿರತವಾಗಿದೆ ಎಂದಿದ್ದಾರೆ.

ನದಿ ದಂಡೆಗೆ ಹೋಗದಿರಿ:

ಪ್ರವಾಹ ಪರಿಸ್ಥಿತಿಯ ಇಂತಹ ಸಂಕಷ್ಟದ ಸಂದರ್ಭದಲ್ಲಿ ನದಿಯಲ್ಲಿ ಈಜುವುದಾಗಲಿ, ಸ್ಪರ್ಧೆ ಮಾಡುವಂತಹ ಯಾವುದೇ ದುಸ್ಸಾಹಸಕ್ಕೆ ಕೈಹಾಕಬಾರದು. ನದಿ ದಂಡೆಗೆ ಬಟ್ಟೆ ಒಗೆಯಲು, ಕುರಿ-ಆಕಳು ಮೇಯಿಸಲು, ಮೀನುಗಾರರು ಮೀನು ಹಿಡಿಯಲು ಹೋಗಬಾರದು. ಅಪಾಯವಿರುವ ಸೇತುವೆ ಮೇಲೆ ಸಂಚರಿಸಬಾರದು. ನದಿ-ಹಳ್ಳ ದಡದಲ್ಲಿರುವ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರಕ್ಕೆ ಹೋಗಬಾರದು ಮತ್ತು ಸೆಲ್ಫಿ, ಫೋಟೊ ತೆಗೆಯಬಾರದು ಎಂದು ಡಿ.ಸಿ. ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಸಹಾಯವಾಣಿ:

ತುರ್ತು ಪರಿಹಾರಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ತುರ್ತು ಸಂದರ್ಭದಲ್ಲಿ ಈ ಸಹಾಯವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಜಿಲ್ಲಾ ವಿಪ್ಪತ್ತು ನಿರ್ವಹಣಾ ಕೇಂದ್ರ: 08472-278677 ಅಥವಾ 1077, ಕಲಬುರಗಿ ಮಹಾನಗರ ಪಾಲಿಕೆ-08472-241364 ಮತ್ತು 6363544601, ಆಳಂದ-9448135593, ಅಫಜಲಪೂರ-9972874714, ಚಿತ್ತಾಪುರ-9448652111, ಚಿಂಚೋಳಿ-9591499501, ಕಾಳಗಿ-9980034461, ಕಲಬುರಗಿ-8660218494, ಕಮಲಾಪೂರ-9986324648, ಜೇವರ್ಗಿ-7019270898, ಯಡ್ರಾಮಿ-9538559509, ಶಹಾಬಾದ-8152093789 ಹಾಗೂ ಸೇಡಂ-9972473122.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X