Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ವಿದ್ಯಾರ್ಥಿಗಳಿಗೆ ಶಾಲೆಯ...

ವಾಡಿ | ವಿದ್ಯಾರ್ಥಿಗಳಿಗೆ ಶಾಲೆಯ ಶ್ರೇಷ್ಠ ಪ್ರತಿಭೆ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ5 July 2025 7:57 PM IST
share
ವಾಡಿ | ವಿದ್ಯಾರ್ಥಿಗಳಿಗೆ ಶಾಲೆಯ ಶ್ರೇಷ್ಠ ಪ್ರತಿಭೆ ಪುರಸ್ಕಾರ

ಕಲಬುರಗಿ: ಒಂಬತ್ತು ತಿಂಗಳು ಹೊಟ್ಟೆಯಲ್ಲಿ ಹೊತ್ತು ಹೆತ್ತ ಅಮ್ಮನಿಗೆ ಮಮ್ಮಿ ಎಂದು ಕರೆಯಲು ಕಲಿಸುತ್ತದೆ ಆಂಗ್ಲ ಶಿಕ್ಷಣ. ಮಮ್ಮಿ ಎಂದರೆ ಸತ್ತ ಹೆಣ. ಮಕ್ಕಳು ಅಮ್ಮಳನ್ನು ಮಮ್ಮಿ ಎಂದು ಕರೆದು ಸತ್ತ ಹೆಣಕ್ಕೆ ಹೋಲಿಸುವುದು ತರವೇ ಎಂದು ಸಾಹಿತಿ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಪ್ರಶ್ನಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ವಾಡಿ ವಲಯ ಘಟಕದಿಂದ ಶನಿವಾರ ಪಟ್ಟಣದ ಸಂತ ಅಂಬ್ರೋಸ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಹತ್ತನೇ ತರಗತಿಯಲ್ಲಿ ಶೇ.90 ಅಂಕಗಳನ್ನು ಪಡೆದು ಪ್ರತಿಭೆ ಮೆರೆದ ವಿವಿಧ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ‘ಶಾಲೆಯ ಶ್ರೇಷ್ಠ ಪ್ರತಿಭೆ’ ಪ್ರಶಸ್ತಿ ಪುರಸ್ಕಾರ ಪ್ರಧಾನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ಮಾತೃಭಾಷೆ ಕನ್ನಡದಲ್ಲಿ ಅಮ್ಮಾ ಎಂದು ಬಾಯಿತುಂಬ ಹೊಗಳಿದರೆ ಅದರೆ ಸೊಗಸೇಬೇರೆ. ಲಂಡನ್‍ನಲ್ಲಿ ಮಳೆ ಹೆಚ್ಚು ಬೀಳುವುದನ್ನು ಸಹಿಸದೆ ಕವಿಯೊಬ್ಬ ರೇನ್ ರೇನ್ ಗೋ ಅವೆ ಎಂದು ಪದ್ಯ ಬರೆದ. ಅದನ್ನೇ ನಮ್ಮ ಪಠ್ಯದಲ್ಲಿ ಸೇರಿಸಿ ಮಳೆಯೇ ಮಳೆಯೇ ಹೋಗು ಆಕಡೆ ಎಂದು ಕಲಿಸಬೇಕಾದಂತಹ ಪರಸ್ಥಿತಿ ಬಂದಿದೆ. ನಮ್ಮ ರೈತ ಮಳೆಗಾಗಿ ಮುಗಿಲು ನೋಡುತ್ತ ಕುಳಿತಿರುವಾಗ ‘ಬಾರೋ ಬಾರೋ ಮಳೆರಾಯ ತೊಗರಿ ಹೊಲಕ್ಕೆ ನೀರಿಲ್ಲ’ ಎಂಬ ಹೃದಯಗೀತೆ ಪಠ್ಯದಲ್ಲಿರಬೇಕಿದೆ. ಅರ್ಥವಿಲ್ಲದ ರೇನ್ ರೇನ್ ಗೋ ಅವೆ ಪದ್ಯವನ್ನು ಪಠ್ಯದಿಂದ ಕಿತ್ತೊಗೆಯಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಚಿತ್ತಾಪುರ ಬಿಇಒ ಶಶಿಧರ ಬಿರಾದಾರ, ಕನ್ನಡಿಗರಿಗೆ ಮೊದಲು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣದ ಮೇಲೆ ಅಭೀಮಾನ ಮೂಡಬೇಕು. ಯಾವೂದೇ ಭಾಷೆ ಕಲಿತರೂ ಕನ್ನಡ ಭಾಷೆ ಮಾತ್ರ ನಮ್ಮ ಆಡುಭಾಷೆಯಾಗಬೇಕು. ಮೋಬೈಲ್ ಮತ್ತು ಕಂಪ್ಯೂಟರ್ ಬಂದ ಮೇಲೆ ಜನರು ಬರೆಯೋದನ್ನೇ ಮರೆತಿದ್ದಾರೆ. ಕನ್ನಡ ಉಳಿಯಬೇಕು ಬೆಳೆಯಬೇಕು ಎಂದರೆ ಕನ್ನಡ ಪ್ರಬಂಧಗಳನ್ನು ಬರೆಯಿಸುವ ಅಗತ್ಯವಿದೆ. ವಾಡಿ ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಭೆಗಳನ್ನು ಗುರುತಿಸುವುದರ ಜತೆಗೆ ಕನ್ನಡ ಕಟ್ಟುವ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ ಎಂದರು.

ಕಸಾಪ ಅಧ್ಯಕ್ಷ ಸಿದ್ದಯ್ಯಶಾಸ್ತ್ರೀ ನಂದೂರಮಠ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್‍ಪಿ ಶಂಕರಗೌಡ ಪಾಟೀಲ, ಸಂಗೀತ ಕಲಾವಿದ ಮಲ್ಲು ಮಾಸ್ಟರ್ ಭಜಂತ್ರಿ, ಮುಖ್ಯಶಿಕ್ಷಕಿ ಸಿಸ್ಟರ್ ಗ್ರೇಸಿ ಮುಖ್ಯ ಅತಿಥಿಗಳಾಗಿದ್ದರು. ದಯಾನಂದ ಖಜೂರಿ ಪ್ರಾಸ್ತಾವಿಕ ನುಡಿದರು. ಬಿಆರ್‍ಪಿ ಮಲ್ಲಿಕಾರ್ಜುನ ಸೇಡಂ, ಅಂಬೇಡ್ಕರ್ ವಸತಿ ಶಾಲೆಯ ಉದಯ ಧರೆಣ್ಣವರ್, ಕಸಾಪ ಗೌರವ ಕಾರ್ಯದರ್ಶಿ ಚಂದ್ರು ಕರಣಿಕ, ದೇವಿಂದ್ರ ಕರದಳ್ಳಿ, ಮಲ್ಲಿಕಾರ್ಜುನ ಧರ್ಮಾಪುರ, ಜಗನ್ನಾಥ ಹಂದರ್ಕಿ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು. ರವಿ ಕೋಳಕೂರ ಸ್ವಾಗತಿಸಿದರು. ಮಡಿವಾಳಪ್ಪ ಹೇರೂರ ನಿರೂಪಿಸಿದರು. ಬಸವರಾಜ ಕೇಶ್ವಾರ ವಂದಿಸಿದರು. ಜನಕಲಾ ಸಮಿತಿಯ ಶೋಭಾ ನಿಂಬರ್ಗಾ ಅವರ ತಂಡದವರು ಕನ್ನಡಪರ ಹಾಡುಗಳನ್ನು ಹಾಡಿದರು. ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

“ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕನುಸಗಳಿಗೆ ಹತ್ತನೇ ತರಗತಿಯ ಉತ್ತಮ ಅಂಕಗಳೇ ರೆಕ್ಕೆಪುಕ್ಕಗಳಾಗಿ ನಿಲ್ಲುತ್ತವೆ. ಪರೀಕ್ಷೆಯಲ್ಲಿ ಪಡೆಯುವ ಅಂಕಗಳು ಶಿಕ್ಷಣದ ಗುರಿ ಸಾಧನೆಗೆ ಸಹಾಯವಾದರೆ, ಜೀವನದಲ್ಲಿ ಉತ್ತಮ ಮನುಷ್ಯನಾಗಿ ರೂಪುಗೊಳ್ಳಲು ಮಾನವೀಯ ಮೌಲ್ಯಗಳು ಮೆದುಳಿಗೆ ತಾಕುವುದು ಅತ್ಯವಶ್ಯಕ. ಪಠ್ಯದ ಜತೆಗೆ ಸಾಹಿತ್ಯ ಕೃತಿಗಳ ಅಧ್ಯಯನಕ್ಕೂ ವಿದ್ಯಾರ್ಥಿಗಳು ಆಧ್ಯತೆ ನೀಡಬೇಕು. ಕಸಾಪದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮನಸ್ಸುಗಳಿರುವುದು ಖುಷಿ ತಂದಿದೆ”.

-ಶಂಕರಗೌಡ ಪಾಟೀಲ. ಡಿವೈಎಸ್‍ಪಿ, ಉಪ ವಲಯ ಶಹಾಬಾದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X