Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನ.15ರಿಂದ ಸನ್ನತಿಯಿಂದ ಬೆಂಗಳೂರಿಗೆ...

ನ.15ರಿಂದ ಸನ್ನತಿಯಿಂದ ಬೆಂಗಳೂರಿಗೆ ಪಂಚಶೀಲ ಪಾದಯಾತ್ರೆ : ಪೂಜ್ಯ ಭಂತೆ ವರಜ್ಯೋತಿ

ವಾರ್ತಾಭಾರತಿವಾರ್ತಾಭಾರತಿ13 Nov 2024 5:31 PM IST
share
Photo of press meet

ಕಲಬುರಗಿ : ವಿಶ್ವಶಾಂತಿಗಾಗಿ, ಸನ್ನತ್ತಿಯ ಸಮಗ್ರ ಅಭಿವೃದ್ಧಿಗಾಗಿ ಒತ್ತಾಯಿಸಿ ಹಾಗೂ ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಐತಿಹಾಸಿಕ ಕ್ಷೇತ್ರ ಸನ್ನತ್ತಿಯಿಂದ ಬೆಂಗಳೂರು ವಿಧಾನ ಸೌಧದವರೆಗೆ ಪೂಜ್ಯ ಬೋಧಿದತ್ತ ಭಂತೆಯವರ ನೇತೃತ್ವದಲ್ಲಿ 'ಪಂಚಶೀಲ ಪಾದಯಾತ್ರೆ' ಇದೇ ನ.15ರಿಂದ ಪ್ರಾರಂಭಿಸಲಾಗುತ್ತಿದೆ ಎಂದು ಬೀದರ್ನ ಅಣದೂರ ಬುದ್ಧ ವಿಹಾರದ ಪೂಜ್ಯ ಭಂತೆ ವರಜ್ಯೋತಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ಸನ್ನತ್ತಿಯಿಂದ ಬೆಂಗಳೂರು ವಿಧಾನ ಸೌಧದವರೆಗೆ ನಡೆಯಲಿರುವ 70 ದಿನಗಳ ಪಾದಯಾತ್ರೆಯು ಸುಮಾರು 1,000 ಕಿ.ಮೀ. ಕ್ರಮಿಸಲಿದೆ. ರಾಜ್ಯದ 8 ಜಿಲ್ಲೆಗಳನ್ನು ಹಾದು ಹೋಗಲಿರುವ ಈ ಶಾಂತಿ ಪಾದಯಾತ್ರೆಯುದ್ದಕ್ಕೂ ವಿವಿಧ ಗ್ರಾಮಗಳಲ್ಲಿ ಇದರ ಉದ್ದೇಶ ಮತ್ತು ಬೇಡಿಕೆಗಳ ಕುರಿತು ಮನವರಿಕೆ ಮಾಡಿಕೊಡುವುದಲ್ಲದೆ, ಮಹಾತ್ಮಗೌತಮ ಬುದ್ಧರ ಅಸ್ಥಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಪಾದಯಾತ್ರೆ ಉದ್ದಕ್ಕೂ ಬುದ್ಧ, ಅಶೋಕನ ಭಾವಚಿತ್ರಗಳು ರಾರಾಜಿಸಲಿವೆ ಎಂದು ತಿಳಿಸಿದರು.

ಪಾದಯಾತ್ರೆ ವಿಧಾನಸೌಧ ತಲುಪಿದ ಬಳಿಕ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.

ಸನ್ನತ್ತಿ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯನ್ನು ಆಂಧ್ರದ ಬುದ್ದನ ಮಾದರಿಯಲ್ಲಿ ಸುಮಾರು 200 ಎಕರೆ ಪ್ರದೇಶದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸಿ, ಜಾಗತಿಕ ಮಟ್ಟದ ಸೆವೆನ್ ಸ್ಟಾರ್ ಪ್ರವಾಸಿ ತಾಣವನ್ನಾಗಿ ಮಾಡಲು 500 ಕೋಟಿ ರೂ.ಅನುದಾನ ನಿಗದಿಪಡಿಸಬೇಕು. ಫೆ.12ರಂದು ಅಶೋಕನ ಸನ್ನತ್ತಿ ಉತ್ಸವವನ್ನು ಸರಕಾರದ ವತಿಯಿಂದ ಆಚರಿಸಬೇಕು. ಬೌದ್ಧರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರ ಬೌದ್ಧ ಅಭಿವೃದ್ಧಿ ನಿಗಮ ಪ್ರಾರಂಭಿಸಬೇಕು. ಬುದ್ದನ ಜಯಂತಿಯನ್ನು ಬುದ್ಧಪೂರ್ಣಿಮಾ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪೂಜ್ಯ ಭಂತೆ ನಾಗರತ್ನ, ಪೂಜ್ಯ ಭಂತೆ ಧಮ್ಮ ದೀಪ, ಸುರೇಶ ಕಾನೇಕರ್ ಉಪಸ್ಥಿತರಿದ್ದರು.

Tags

BangaloreSannatiKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X