Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮನ್ ಕೀ ಬಾತ್‌ನಲ್ಲಿ ʼಕಲಬುರಗಿ ಖಡಕ್...

ಮನ್ ಕೀ ಬಾತ್‌ನಲ್ಲಿ ʼಕಲಬುರಗಿ ಖಡಕ್ ರೊಟ್ಟಿʼ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ: ಶಶೀಲ್ ನಮೋಶಿ ಹರ್ಷ

ವಾರ್ತಾಭಾರತಿವಾರ್ತಾಭಾರತಿ29 Jun 2025 5:26 PM IST
share
ಮನ್ ಕೀ ಬಾತ್‌ನಲ್ಲಿ ʼಕಲಬುರಗಿ ಖಡಕ್ ರೊಟ್ಟಿʼ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ: ಶಶೀಲ್ ನಮೋಶಿ ಹರ್ಷ

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 123ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೆಯ ಜೋಳದ ರೊಟ್ಟಿಯ ಮಹತ್ವ ಕುರಿತು ಪ್ರಸ್ತಾಪಿಸುವ ಮೂಲಕ ಸಿರಿಧಾನ್ಯಗಳ ಪೈಕಿ ಒಂದಾಗಿರುವ ಜೋಳಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಸೃಷ್ಟಿಯಾಗುವಂತೆ ಮಾಡಿರುವುದು ನಿಜಕ್ಕೂ ಹೆಮ್ಮೆ ತರುವಂತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಮಹಿಳೆಯರು ಸ್ವಸಹಾಯ ಸಂಘ ರಚಿಸಿಕೊಂಡು ಆ ಮೂಲಕ ನಿತ್ಯ 3,000 ಜೋಳದ ರೊಟ್ಟಿಗಳನ್ನು ಸಿದ್ದಪಡಿಸಿ ಬೆಂಗಳೂರಿನಲ್ಲಿ ಮಾರುಕಟ್ಟೆ ಮಾಡುತ್ತಿರುವುದರ ಬಗ್ಗೆ ಪ್ರಧಾನಿಗಳು ಉಲ್ಲೇಖಿಸುವ ಮೂಲಕ ತಮ್ಮ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸ್ತ್ರೀ ಸಬಲೀಕರಣದ ಕುರಿತು ಹೆಚ್ಚು ಕಾಳಜಿಯಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

ಜೋಳದ ರೊಟ್ಟಿಯ ಮಾತಿಗೆ ಬರುವುದಾದರೆ, ಹೆಚ್ಚು ಪೋಷಕಾಂಶಗಳನ್ನು ಹೊಂದಿರುವ ಜೋಳದಲ್ಲಿ ಯಥೇಚ್ಛವಾಗಿ ನಾರಿನ ಅಂಶ (ಫೈಬರ್) ಇರುವುದರಿಂದ ಸುಲಭವಾಗಿ ಜೀರ್ಣಗೊಳ್ಳುವ ಆಹಾರವಾಗಿದ್ದು, ಕರುಳಿನ ಆರೋಗ್ಯಕ್ಕೆ ಪೂರಕವಾಗಿದೆ. ಮೇಲಾಗಿ, ದೇಹದಲ್ಲಿ ಸಕ್ಕರೆ ಅಂಶವು ಸಮತೋಲನ ಪ್ರಮಾಣದಲ್ಲಿರುವಂತೆ ನೋಡಿಕೊಳ್ಳುತ್ತದೆ. ಇದರ ಜೊತೆಗೆ, ಮೆಗ್ನಿಷಿಯಂ, ಕ್ಯಾಲ್ಸಿಯಂ ಹಾಗೂ ಅಗತ್ಯ ಖನಿಜಾಂಶಗಳು ಇರುವುದರಿಂದ ಮೂಳೆಗಳ ಆರೋಗ್ಯಕ್ಕೂ ಜೋಳದ ರೊಟ್ಟಿ ಸಹಕಾರಿಯಾಗಿದೆ ಎಂಬುದು ಈಗಾಗಲೇ ಸಾಬೀತಾಗಿದೆ ಎಂದರು.

ಈ ಕಾರಣಕ್ಕಾಗಿಯೇ ಬೆಂಗಳೂರಿನಲ್ಲಿ ಜೋಳದ ರೊಟ್ಟಿಯ ಕೌಂಟರ್ ಆರಂಭಿಸುವ ಮೂಲಕ ‘ಸಿರಿಧಾನ್ಯದ ಶಕ್ತಿ’ಯ ಮಹತ್ವ ಸಾಬೀತುಪಡಿಸಿರುವ ನಮ್ಮ ಮಹಿಳೆಯರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮನಃಪೂರ್ವಕವಾಗಿ ಅಭಿನಂದಿಸಿದ್ದಾರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags

Shashil Namoshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X