Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :...

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ : ಇಂಜಿನಿಯರ್‌ಗಳಿಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್ ಕರೆ

ವಾರ್ತಾಭಾರತಿವಾರ್ತಾಭಾರತಿ5 July 2026 8:24 PM IST
share
ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ : ಇಂಜಿನಿಯರ್‌ಗಳಿಗೆ ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್ ಕರೆ
►ಕೆಕೆಆರ್‌ಡಿಬಿ ಅಯೋಜನೆಯ ಸಮಗ್ರ ತಾಂತ್ರಿಕ ಕಾರ್ಯಾಗಾರ ►ಕಲ್ಯಾಣ ಕರ್ನಾಟಕ ಪ್ರದೇಶದ ಸುಮಾರು 800 ಇಂಜಿನಿಯರ್ ಗಳು ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ಲೋಕೋಪಯೋಗಿ ಇಲಾಖೆಯ ಈಶಾನ್ಯ ವಲಯದ ಸಹಯೋಗದಲ್ಲಿ ವಿವಿಧ ಇಲಾಖೆಗಳ ಇಂಜಿನಿಯರ್‌ಗಳಿಗೆ ಆಯೋಜಿಸಿದ್ದ ಎರಡು ದಿನಗಳ ಸಮಗ್ರ ತಾಂತ್ರಿಕ ಕಾರ್ಯಾಗಾರ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ನಗರದ ಜೆಸ್ಟ್ ಕ್ಲಬ್‌ನಲ್ಲಿ ನಡೆದ ಕಾರ್ಯಾಗಾರದಲ್ಲಿ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ವಿವಿಧ ಇಲಾಖೆಗಳ ಸುಮಾರು 800 ಇಂಜಿನಿಯರ್‌ಗಳು ಭಾಗವಹಿಸಿ ಕ್ರಿಯಾ ಯೋಜನೆ ಸಿದ್ಧತೆ, ಕಾಮಗಾರಿಗಳ ಗುಣಮಟ್ಟ, ರಸ್ತೆ-ಸೇತುವೆ ನಿರ್ಮಾಣ ಹಾಗೂ ತಾಂತ್ರಿಕ ಮಾನದಂಡಗಳ ಕುರಿತು ತರಬೇತಿ ಪಡೆದರು.

ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಅಭಿವೃದ್ಧಿ ಕಾಮಗಾರಿಗಳಲ್ಲಿ ದೋಷರಹಿತ ಕ್ರಿಯಾ ಯೋಜನೆ ರೂಪಿಸುವುದರ ಜೊತೆಗೆ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

ಕಾಮಗಾರಿ ಆರಂಭಕ್ಕೂ ಮುನ್ನ ಸ್ಥಳದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಪರಿಶೀಲನೆ ನಡೆಸಬೇಕು. ನಗರ ಪ್ರದೇಶಗಳಲ್ಲಿ ಒಳಚರಂಡಿ ವ್ಯವಸ್ಥೆ ಪೂರ್ಣಗೊಳಿಸದೇ ರಸ್ತೆ ನಿರ್ಮಿಸಿ ಬಳಿಕ ಮತ್ತೆ ಅಗೆಯುವಂತಹ ತಪ್ಪುಗಳನ್ನು ಮರುಕಳಿಸಬಾರದು. ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ ಕಾಪಾಡಿ, ದಾಖಲೆಗಳಿಗೆ ಪರಿಶೀಲನೆಯ ನಂತರವೇ ಸಹಿ ಹಾಕಬೇಕು ಎಂದು ಸೂಚಿಸಿದರು.

ಗ್ರಾಮೀಣ ರಸ್ತೆ ಕಾಮಗಾರಿಗಳ ವೇಳೆ ಉಂಟಾಗುವ ಭೂ ವಿವಾದಗಳನ್ನು ತಹಶೀಲ್ದಾರ್ ಮಟ್ಟದಲ್ಲಿ ಬಗೆಹರಿಸಲಾಗದಿದ್ದರೆ ಕಾಲಹರಣ ಮಾಡದೆ ಸಹಾಯಕ ಆಯುಕ್ತರ ಗಮನಕ್ಕೆ ತಂದು ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ನಿವೃತ್ತ ಎಇಇ ಅನ್ವರ್, ತಾಂತ್ರಿಕ ತಜ್ಞ ಯಳಸಂಗಿಮಠ, ನಿವೃತ್ತ ಮುಖ್ಯ ಇಂಜಿನಿಯರ್ ಎಂ. ನಾರಾಯಣ್ ಹಾಗೂ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಸಿದ್ರಾಮಪ್ಪ ಅವಂಟಿ ಅವರು ಡಿಪಿಆರ್ ಸಿದ್ಧತೆ, ರಸ್ತೆ-ಸೇತುವೆ ವಿನ್ಯಾಸ, ಗುಣಮಟ್ಟ ನಿರ್ವಹಣೆ ಹಾಗೂ ತಾಂತ್ರಿಕ ಅಂಶಗಳ ಕುರಿತು ಉಪನ್ಯಾಸ ನೀಡಿ ಇಂಜಿನಿಯರ್‌ಗಳೊಂದಿಗೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಕೆ.ಕೆ.ಆರ್.ಡಿ.ಬಿ ಮಂಡಳಿಯ ಉಪ ಕಾರ್ಯದರ್ಶಿ ಸುರೇಖಾ ಕಿರಣಗಿ, ಹೆಚ್ಚುವರಿ ನಿರ್ದೇಶಕರಾದ ಪ್ರವೀಣಾ ಪ್ರಿಯ ಡೇವಿಡ್, ಹಣಕಾಸು ನಿಯಂತ್ರಕ ಪವನಕುಮಾರ, ಅಧೀಕ್ಷಕ ಇಂಜಿನಿಯರ್ ಆನಂದ ಕಮಲಾಪೂರಕ‌ರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags

KKRDB
share
ವಾರ್ತಾಭಾರತಿ
ವಾರ್ತಾಭಾರತಿ
Next Story
X