Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ರಕಲೆ, ಸಂಗೀತ ಪಠ್ಯದಲ್ಲಿ ಗುಣಾತ್ಮಕ...

ಚಿತ್ರಕಲೆ, ಸಂಗೀತ ಪಠ್ಯದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಪೂರಕ: ರಾಜೇಂದ್ರ ಝಳಕಿ

ವಾರ್ತಾಭಾರತಿವಾರ್ತಾಭಾರತಿ30 Aug 2026 10:19 PM IST
share
ಚಿತ್ರಕಲೆ, ಸಂಗೀತ ಪಠ್ಯದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಪೂರಕ: ರಾಜೇಂದ್ರ ಝಳಕಿ

ಕಲಬುರಗಿ: ಚಿತ್ರಕಲೆ ಹಾಗೂ ಸಂಗೀತವು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವುದರ ಜತೆಗೆ ಪಠ್ಯಕ್ರಮದ ಗುಣಾತ್ಮಕ ಶಿಕ್ಷಣಕ್ಕೆ ಪೂರಕವಾಗಿವೆ ಎಂದು ಸಾಹಿತಿ ಹಾಗೂ ಶಿಕ್ಷಕ ರಾಜೇಂದ್ರ ಝಳಕಿ ಹೇಳಿದರು.

ನಗರದ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಡಿ ಯುವ ಚಿತ್ರಕಲಾವಿದ ಮಲ್ಲಿಕಾರ್ಜುನ ವಿಶ್ವಕರ್ಮ ದಿಗ್ಗಾಂವ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿತ್ರಕಲೆ ಕೇವಲ ಮನರಂಜನೆಯ ಮಾಧ್ಯಮವಲ್ಲ. ಅದು ಮಕ್ಕಳ ಕಲ್ಪನಾಶಕ್ತಿ, ಸೂಕ್ಷ್ಮಗ್ರಹಿಕೆ ಹಾಗೂ ಸೃಜನಶೀಲತೆಯನ್ನು ವಿಕಸನಗೊಳಿಸುವ ಪ್ರಮುಖ ಸಾಧನವಾಗಿದೆ. ಶಿಕ್ಷಣದ ಜತೆಗೆ ಕಲೆಗೂ ಸಮಾನ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ದೃಶ್ಯಕಲಾ ಅಧ್ಯಯನ ವಿಭಾಗದ ಅಧ್ಯಾಪಕ ಡಾ. ಮಲ್ಲಿಕಾರ್ಜುನ ಬಾಗೋಡಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮಾನವನ ಸೃಜನಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಹಂಪಿ, ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಐತಿಹಾಸಿಕ ಸ್ಮಾರಕಗಳು, ಕೋಟೆ–ಕೊತ್ತಲುಗಳು, ದೇವಾಲಯಗಳು ಹಾಗೂ ವಾಸ್ತುಶಿಲ್ಪಗಳು ಚಿತ್ರಕಲಾವಿದರಿಗೆ ಸ್ಫೂರ್ತಿಯ ಮೂಲಗಳಾಗಿವೆ. ರಾಷ್ಟ್ರಕೂಟರ ಕಾಲದ ಇತಿಹಾಸ, ಕಮಲ ಮಹಲ್, ಕಲಬುರಗಿ ಬಹಮನಿ ಕೋಟೆ ಸೇರಿದಂತೆ ಈ ಭಾಗದ ಸಾಂಸ್ಕೃತಿಕ ಪರಂಪರೆಯನ್ನು ಚಿತ್ರಕಲೆಯ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.

‘ದೇಶ ಸುತ್ತು, ಕೋಶ ಓದು’ ಎಂಬ ಮಾತಿನಂತೆ, ವಿವಿಧ ಸ್ಥಳಗಳನ್ನು ವೀಕ್ಷಿಸಿ ಅಲ್ಲಿನ ಕಲೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಅರಿಯುವುದು ಮಾನವನ ಜ್ಞಾನ ವಿಕಾಸಕ್ಕೆ ಸಹಕಾರಿ. ಚಿತ್ರಗಳು ಇತಿಹಾಸದ ಹಲವು ಪುಟಗಳನ್ನು ದಾಖಲಿಸುವ ದೃಶ್ಯ ದಾಖಲೆಗಳಾಗಿವೆ. ಹಸ್ತಪ್ರತಿಗಳು, ನಕ್ಷೆಗಳು, ಸ್ಮಾರಕಗಳ ಚಿತ್ರಗಳು ಹಾಗೂ ಜನಜೀವನವನ್ನು ಬಿಂಬಿಸುವ ಕಲಾಕೃತಿಗಳು ಹಿಂದಿನ ಕಾಲದ ಬದುಕು, ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ತಿಳಿಯಲು ನೆರವಾಗುತ್ತವೆ ಎಂದರು.

ಹಿಂದೆ ಕಲೆಗೆ ರಾಜಾಶ್ರಯ ದೊರೆಯುತ್ತಿತ್ತು. ಈಗಲೂ ರಾಜಕೀಯ ಮುಖಂಡರು ಹಾಗೂ ಸರ್ಕಾರಗಳು ಕಲೆ, ಸಾಹಿತ್ಯ, ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು. ಕಲ್ಯಾಣ ಕರ್ನಾಟಕ ಉತ್ಸವಗಳಂತಹ ಕಾರ್ಯಕ್ರಮಗಳ ಮೂಲಕ ಈ ಭಾಗದ ಕಲೆ ಮತ್ತು ಪರಂಪರೆಗೆ ಹೆಚ್ಚಿನ ಪ್ರಚಾರ ದೊರೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.

ವಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಬಿ. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.

ಮಲ್ಲಿಕಾರ್ಜುನ ಕೋರಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮಲ್ಲಿಕಾರ್ಜುನ ವಿಶ್ವಕರ್ಮ ಅವರ ಕುಟುಂಬದ ಸದಸ್ಯರು, ಚಿತ್ರಕಲಾವಿದರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

Rajendra ZalkiEducational Quality
share
ವಾರ್ತಾಭಾರತಿ
ವಾರ್ತಾಭಾರತಿ
Next Story
X