Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಧರ್ಮ ದಾರಿಯೇ ಹೊರತು ಗುರಿ ಅಲ್ಲ: ಯೋಗೇಶ್...

ಧರ್ಮ ದಾರಿಯೇ ಹೊರತು ಗುರಿ ಅಲ್ಲ: ಯೋಗೇಶ್ ಮಾಸ್ಟರ್

ವಾರ್ತಾಭಾರತಿವಾರ್ತಾಭಾರತಿ8 Oct 2023 11:47 PM IST
share
ಧರ್ಮ ದಾರಿಯೇ ಹೊರತು ಗುರಿ ಅಲ್ಲ: ಯೋಗೇಶ್ ಮಾಸ್ಟರ್

ಕಲಬುರಗಿ: ಹಿಂದೂ-ಮುಸ್ಲಿಂ ಸೌಹಾರ್ದ ಪರಂಪರೆಗೆ ದೊಡ್ಡ ಇತಿಹಾಸವಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಸೌಹಾರ್ದತೆ ಸಂಸ್ಕೃತಿಯ ಭಾಗವಾಗಿದೆ ಹಾಗೂ ಧರ್ಮ ದಾರಿಯೇ ಹೊರತು ಗುರಿ ಅಲ್ಲ. ಮನುಷ್ಯ ಹೇಗೆ ಬದುಕಬೇಕು ಎಂಬುದರ ಆಕರ ಗ್ರಂಥವೇ ಕುರ್ ಆನ್ ಎಂದು ಹಿರಿಯ ರಂಗಕರ್ಮಿ, ಸಾಹಿತಿ ಯೋಗೇಶ ಮಾಸ್ಟರ್ ತಿಳಿಸಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಆಯೋಜಿಸಿದ್ದ ಪ್ರವಾದಿ ಜೀವನದ ಸಂದೇಶ ಅಭಿಯಾನ ಅಂಗವಾಗಿ ನಗರದ ಸಂಗಂತ್ರಾಸ ವಾಡಿಯಲ್ಲಿರುವ ಇದಾಯತ್ ಸೆಂಟರ್ ನಲ್ಲಿ ರವಿವಾರ ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್ ಅವರ ಕುರಿತ ವಿಚಾರಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿಂದೂ- ಮುಸ್ಲಿಮರೆಲ್ಲರೂ ಸೇರಿ ಹೋರಾಟ ಮಾಡಿರುವುದು ಚಾರಿತ್ರಿಕ ಮಹತ್ವ ಪಡೆದಿದೆ ಎಂದು ತಿಳಿಸಿದರು.

ಅಂದು ಪರಕೀಯರ ವಿರುದ್ಧ ಹೋರಾಡಿದ ನಾವುಗಳು ಇಂದು ಪರಕೀಯ ಭಾವದ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಒದಗಿ ಬಂದಿದೆ ಎಂದು ಯೋಗೇಶ ಮಾಸ್ಟರ್ ಅವರು ವಿಷಾದ ವ್ಯಕ್ತಪಡಿಸಿದರು.

ನಮ್ಮವರ ಮಧ್ಯೆ ನಾವೇ ಹೋರಾಡಬೇಕಾದ ಅನಿವಾರ್ಯ ಪರಿಸ್ಥಿಗೆ ಪ್ರವಾದಿ ಮುಹಮ್ಮದ್ ಅವರು ಬೋಧಿಸಿದ ಅರಿವಿನ ಹೋರಾಟ ಆರಂಭಿಸುವುದಕ್ಕೆ ಇದು ಸಕಾಲ. ಅರಿವಿನ ಹೋರಾಟದಿಂದ ಇಂದಿನ ವರ್ತಮಾನ ಹಾಗೂ ಮುಂದಿನ ಭವಿಷ್ಯ ಶಾಂತಿ ನೆಮ್ಮದಿಯಿಂದ ಕೂಡಿರಲು ಸಾಧ್ಯ ಅವರು ಎಂದು ತಿಳಿಸಿದರು.

ಪ್ರವಾದಿಗಳು ಸರ್ವ ಜನಾಂಗದ ಮಾದರಿ ವ್ಯಕ್ತಿತ್ವ ಉಳ್ಳವರಾಗಿದ್ದಾರೆ. ಜ್ಞಾನವನ್ನು ಹಂಚಿಕೊಳ್ಳುವುದು ಹಕ್ಕು ಹಾಗೂ ಕರ್ತವ್ಯ ಕೂಡ ಎಂದು ಯೋಗೇಶ ಮಾಸ್ಟರ್ ವಿವರಿಸಿದರು.

ಅತಿಥಿಯಾಗಿದ್ದ ವಕೀಲರಾದ ಅಶ್ವಿನಿ ಮದನಕರ್ ಮಾತನಾಡಿ, ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಪ್ರವಾದಿ ಮುಹಮ್ಮದ್ ರ ವಿಚಾರಗಳಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ. ಎಲ್ಲರೂ ಸಮಾನತೆಗಾಗಿ ಕನಸು ಕಟ್ಟಿದ್ದವರು ಎಂದು ತಿಳಿಸಿದರು.

ಶರಣಬಸವ ವಿಶ್ವವಿದ್ಯಾಲಯದ ಸಮ ಕುಲಪತಿ ವೈ.ಡಿ.ಮೈತ್ರಿ ಅವರು ಯೋಗೇಶ್ ಮಾಸ್ಟರ್ ರಚಿಸಿದ ನನ್ನ ಅರಿವಿನ ಪ್ರವಾದಿ ಕೃತಿ ಬಿಡುಗಡೆ ಮಾಡಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಮಾತನಾಡಿ, ಹಿಂದೂ ಮುಸ್ಲಿಮರು ಸಹೋದರರಾಗಿರಬೇಕು ಎಂದು ಹೇಳಿದ ಪ್ರವಾದಿ ಮುಹಮ್ಮದ್‍ರು ಮಾನವೀಯತೆಯ ಪಾಠ ಕಲಿಸಿದ ಮಹಾನ್ ಸಂತ. ಅಲ್ಲದೆ, ವ್ಯಕ್ತಿಗತ ಮನಸ್ಥಿತಿ ಉನ್ನತವಾಗಲು ಮುಹಮ್ಮದ್‍ರ ಜೀವನ ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾಧ್ಯಕ್ಷ ಜಾಕೀರ್ ಹುಸೇನ್, ಜಿಲ್ಲಾ ಸಂಚಾಲಕ ಮಜ್ಹಾರೊದ್ದೀನ್, ರೋಜಾ ಮಠದ ಗುರುಬಸವ ಸ್ವಾಮೀಜಿ ವೇದಿಕೆಯಲ್ಲಿದ್ದರು. ಅಬ್ದುಲ್ ಖಾದರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

ಪ್ರವಾದಿ ಮುಹಮ್ಮದ್‍ರು ಮಹಿಳೆಯರಿಗೆ ಜೀವಿಸುವ ಹಕ್ಕು ಹಾಗೂ ಆಸ್ತಿಯ ಹಕ್ಕು ಕಲ್ಪಸಿದ್ದರು. ಸಮಾನತೆಯ ಸಮಾಜ ಕಟ್ಟಲು ಅವರು ಮಹತ್ತರ ಕೊಡುಗೆ ನೀಡಿದ್ದಾರೆ.

-ಅಬ್ದುಲ್ ಖಾದರ್, ಕಾರ್ಯಕ್ರಮ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X