Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೈಬರ್ ವಂಚನೆ ಪ್ರಕರಣವನ್ನು ಬೇಧಿಸಿದ...

ಸೈಬರ್ ವಂಚನೆ ಪ್ರಕರಣವನ್ನು ಬೇಧಿಸಿದ ಪೊಲೀಸರು| ಹಣ ಕಳೆದುಕೊಂಡವರ ಖಾತೆಗೆ 2.73 ಕೋಟಿ ಜಮೆ: ಡಾ.ಶರಣಪ್ಪ ಎಸ್.ಡಿ

ವಾರ್ತಾಭಾರತಿವಾರ್ತಾಭಾರತಿ17 Dec 2025 7:40 PM IST
share
ಸೈಬರ್ ವಂಚನೆ ಪ್ರಕರಣವನ್ನು ಬೇಧಿಸಿದ ಪೊಲೀಸರು| ಹಣ ಕಳೆದುಕೊಂಡವರ ಖಾತೆಗೆ 2.73 ಕೋಟಿ ಜಮೆ: ಡಾ.ಶರಣಪ್ಪ ಎಸ್.ಡಿ

ಕಲಬುರಗಿ: 2025ನೇ ಸಾಲಿನಲ್ಲಿ ಸೈಬರ್ ವಂಚಕರ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡವರ ಖಾತೆಗೆ 2,73,24,849 ರೂ. ಜಮೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ.ಶರಣಪ್ಪ ಎಸ್.ಡಿ, ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಸೈಬರ್ ಅಪರಾಧ ಸಂಬಂಧಿತ ಪ್ರಕರಣಗಳನ್ನು ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ಹೆಚ್.ನಾಯಕ್, ಸಿಸಿಬಿ ಘಟಕದ ಎಸಿಪಿ ಜೇಮ್ಸ್ ಮಿನೇಜಸ್ ಮಾರ್ಗದರ್ಶನದ ತಂಡ ತನಿಖೆ ನಡೆಸಿ ಸೈಬರ್ ವಂಚನೆ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

2025ನೇ ಸಾಲಿನಲ್ಲಿ ಕಳೆದುಕೊಂಡ/ಮೋಸಕ್ಕೊಳಗಾದ ಹಣ ಮತ್ತು ಸೈಬರ್ ಸಹಾಯವಾಣಿ 1930 ಪೋರ್ಟಲ್ ಮೂಲಕ ದಾಖಲಾದ ಒಟ್ಟು 2,211 ಪ್ರಕರಣಗಳಿಂದ ವಂಚನೆಗೆ ಒಳಗಾದ ಒಟ್ಟು 8.93 ಕೋಟಿ ಮೊತ್ತದಲ್ಲಿ ವಶಪಡಿಸಿಕೊಂಡ 96.82 ಲಕ್ಷ ಹಾಗೂ ಸೈಬರ್ ವಂಚನೆಗೊಳಗಾಗಿ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಒಟ್ಟು 40 ಪ್ರಕರಣಗಳಿಂದ ವಂಚನೆಗೊಳಗಾದ ಒಟ್ಟು 12.72 ಕೋಟಿ ಮೊತ್ತದಲ್ಲಿ ವಶಪಡಿಸಿಕೊಂಡ 1.76 ಕೋಟಿ ಸೇರಿ 2.73 ಕೋಟಿ ರೂಪಾಯಿಗಳನ್ನು ನೊಂದವರ ಖಾತೆಗೆ ಮರಳಿ ಜಮೆ ಮಾಡಲಾಗಿದೆ ಎಂದು ವಿವರಿಸಿದರು.

ಇತ್ತೀಚೆಗೆ ದಾಖಲಾದ ಕೆಲವೊಂದು ಪ್ರಕರಣಗಳಲ್ಲಿ ವಂಚನೆಗೆ ಒಳಗಾದ ಸಾರ್ವಜನಿಕರು ಸೂಕ್ತ ಸಮಯದಲ್ಲಿ ಪ್ರಕರಣ ದಾಖಲಿಸಿದ್ದರಿಂದ ಶೇ.70 ರಿಂದ 85 ರಷ್ಟು ಹಣವನ್ನು ಆರೋಪಿತರ ಖಾತೆಯಿಂದ ವಂಚನೆಗೆ ಒಳಗಾದವರ ಖಾತೆಗೆ ಮರಳಿ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

ಸೈಬರ್ ಅಪರಾಧಗಳನ್ನು ಬೇಧಿಸಿ ನೊಂದವರ ಖಾತೆಗಳಿಗೆ ಹಣ ಮರಳಿ ಜಮಾವಣೆ ಮಾಡುವಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಅವರಿಗೆ ಪ್ರಶಂಸನಾ ಪತ್ರ ನೀಡಿ ಶ್ಲಾಘಿಸಿದರು.

ಕೆಲವೊಂದು ಸೈಬರ್ ಅಪರಾಧಗಳು ಹೆಚ್ಚಾಗಿ ಶನಿವಾರ ಹಾಗೂ ರವಿವಾರದ ದಿನ ನಡೆಯುತ್ತಿದ್ದು, ಈ ಎರಡೂ ದಿನಗಳಂದು ಬ್ಯಾಂಕ್ ರಜೆ ಇರುವ ಕಾರಣ ಸಾರ್ವಜನಿಕರು ಬ್ಯಾಂಕ್‌ಗಳಿಗೆ ಭೇಟಿ ನೀಡಲು ಸಾಧ್ಯವಾಗದೇ ಪ್ರಕರಣ ದಾಖಲಿಸಲು ಸಾಧ್ಯವಾಗುವುದಿಲ್ಲ ಎಂಬ ತಪ್ಪು ತಿಳುವಳಿಕೆ ಇದೆ. ಆದರೆ, ಸಾರ್ವಜನಿಕರು ಯಾವುದೇ ಸೈಬರ್ ಅಪರಾಧಕ್ಕೊಳಗಾದಲ್ಲಿ 24 ಗಂಟೆಯೊಳಗಾಗಿ ಸೈಬರ್ ಸಹಾಯವಾಣಿ 1930 ಪೋರ್ಟಲ್ ಮೂಲಕ ಪ್ರಕರಣ ದಾಖಲಿಸಿದಲ್ಲಿ ಮೋಸಕ್ಕೊಳಗಾದ/ವಂಚನೆಗೊಳಗಾದ ಹಣವನ್ನು ಮರಳಿ ಪಡೆಯಲು ಶೇ.70 ರಿಂದ 85 ರಷ್ಟು ಸಾಧ್ಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ವಂಚನೆಗೊಳಗಾದ 24 ಗಂಟೆಯೊಳಗೆ ಸೈಬರ್ ಸಹಾಯವಾಣಿ 1930 ಪೋರ್ಟಲ್ ಮೂಲಕ ಪ್ರಕರಣ ದಾಖಲಿಸಬೇಕು ಅಥವಾ ಸಮೀಪದ ಠಾಣೆಗೆ ಹೋಗಿಯೂ ದೂರು ನೀಡಬಹುದು ಎಂದು ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X