Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶೈಕ್ಷಣಿಕ ಕ್ರಾಂತಿಯ ಕಿಡಿ...

ಕಲಬುರಗಿ | ಶೈಕ್ಷಣಿಕ ಕ್ರಾಂತಿಯ ಕಿಡಿ ಹೊತ್ತಿಸಿದ ಸಾವಿತ್ರಿಬಾಯಿ ಫುಲೆ, ಶೇಖ್ ಫಾತಿಮಾರವರ ಸಾಧನೆ ಅನನ್ಯ : ಡಾ.ರಮೇಶ್ ಲಂಡನಕರ್

ವಾರ್ತಾಭಾರತಿವಾರ್ತಾಭಾರತಿ18 Jan 2025 4:56 PM IST
share
Photo of Program

ಕಲಬುರಗಿ : ಪುರುಷ ಪ್ರಧಾನ ಸಮಾಜದಲ್ಲಿ ಇಡೀ ವ್ಯವಸ್ಥೆಯನ್ನೇ ಎದುರು ಹಾಕಿಕೊಂಡು ಶೈಕ್ಷಣಿಕ ಕ್ರಾಂತಿಯ ಕಿಡಿ ಹೊತ್ತಿಸಿದ ಸಾವಿತ್ರಿಬಾಯಿ ಫುಲೆ ಹಾಗೂ ಅವರಿಗೆ ಬೆನ್ನೆಲುಬಾಗಿ ನಿಂತ ಶೇಖ್ ಫಾತಿಮಾ ಅವರ ಸಾಧನೆ ಅನನ್ಯವಾದುದ್ದು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಮೇಶ್ ಲಂಡನಕರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಪ್ರಭುದ್ಧ ಡೆವಲಪ್ಮೆಂಟ್ ಫೌಂಡೇಶನ್ ವತಿಯಿಂದ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಶೇಖ್ ಫಾತಿಮಾ ಅವರ ಜನ್ಮದಿನಾಚರಣೆ ಅಂಗವಾಗಿ 'ಫುಲೆರತ್ನ ಪ್ರಶಸ್ತಿ' ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸತ್ಯ ಶೋಧಕ ಸಮಾಜ ಕಟ್ಟಿದ ಮಹಾತ್ಮ ಜ್ಯೋತಿಬಾ ಫುಲೆ ಅವರು ತನ್ನ ಬಾಳ ಸಂಗಾತಿಯನ್ನು ಉನ್ನತ ಶಿಕ್ಷಣ ಹಾಗೂ ಶಿಕ್ಷಕ ತರಬೇತಿ ನೀಡುವ ಮೂಲಕ ಪುರುಷ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅಂಥವರ ಜೀವನ ಸಾಧನೆಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.

ಗೋದುತಾಯಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಪುಟ್ಟಮಣಿ ದೇವಿದಾಸ ಮಾತನಾಡಿ, ಇಂದು ಮಾತೆಯೇ ಮೊದಲ ಗುರು ಎನ್ನುವ ಗಾದೆಯಿದೆ. ಆದರೆ, ಸಾವಿತ್ರಿಬಾಯಿ ಫುಲೆ ಮತ್ತು ಶೇಖ್ ಫಾತಿಮಾ ಅವರ ಕಾಲಗಟ್ಟದಲ್ಲಿ ಪತಿಯೇ ಮೊದಲ ಗುರು ಎಂಬ ವಾತಾವರಣವಿತ್ತು. ಅಂತಹ ಸಂದರ್ಭದಲ್ಲಿ 18 ಶಾಲೆಗಳನ್ನು ಆರಂಭಿಸಿರುವುದು ಯಾವ ಕ್ರಾಂತಿಗಿoತಲೂ ಕಡಿಮೆಯಲ್ಲ ಎಂದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಕಾರ್ಯಕ್ರಮದ ಅತಿಥಿಗಳಷ್ಟೇ ಪ್ರಬುದ್ಧ ಪ್ರೇಕ್ಷಕರು ಇಲ್ಲಿದ್ದೀರಿ. ಆದರೆ, ರಾಮ ಮಂದಿರ ನಿರ್ಮಾಣದ ನಂತರವಷ್ಟೇ ಸ್ವಾತಂತ್ರ್ಯ ಸಿಕ್ಕಿದೆ ಎಂದು ಮೋಹನ್ ಭಾಗವತ್ ಅವರ ಹೇಳಿಕೆ ಜನಸಾಮಾನ್ಯರಿಗೆ ಘಾಸಿ ಮಾಡಲೇ ಇಲ್ಲ ಎನ್ನುವುದೇ ದೊಡ್ಡ ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

'ಅಂಬೇಡ್ಕರ್... ಅಂಬೇಡ್ಕರ್...' ಎನ್ನುವ ಬದಲಾಗಿ ದೇವರ ಹೆಸರು ಹೇಳಿದರೆ, ಏಳೇಳು ಜನ್ಮ ಸ್ವರ್ಗ ಸಿಗುತ್ತಿತ್ತು ಎಂದು ಹೇಳಿಕೆ ಕೊಟ್ಟ ಕೇಂದ್ರ ಗೃಹ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಬುದ್ಧ ಫೌಂಡೇಶನ್ ಅಧ್ಯಕ್ಷ ಧರ್ಮಣ್ಣ ಕೋಣೆಕರ ಅಧ್ಯಕ್ಷತೆ ವಹಿಸಿದ್ದರು. ಪುಂಡಲೀಕ ಗಾಯಕವಾಡ, ಹಣಮಂತ ಇಟಗಿ, ಅನಿಲ ಟೆಂಗಳಿ, ಧರ್ಮಣ್ಣ ಜೈನಾಪುರ, ಹವಳಪ್ಪ ಜಾನೆ, ರೂಪಾ ಕಲಕೇರಿ, ಜೈಶೀಲಾ ಬೌದ್ಧೆ, ನಾಗಪ್ಪ ಹೊಅಮನಿ, ನಾಗೇಂದ್ರ ಜವಳಿ, ರಾಜಶೇಖರ ನಿಪ್ಪಾಣಿ ಸೇರಿದಂತೆ ಹಲವರಿದ್ದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದನ್ನು ಪರಿಗಣಿಸಿ, ರಮೇಶ ಮಾಡಿಯಾಳಕರ, ಡಾ.ಅನೀಲ ಮಂಡೋಲಕರ, ನಾಮದೇವ ಕಡಕೋಳ, ಡಾ.ರಾಜಕುಮಾರ ದುಮ್ಮನಸೂರ, ರಾಜಶೇಖರ ಕಡಗನ, ಪುರ್ಷದ್ ಅಲಿ, ಜೀತೇಂದ್ರ ತಳವಾರ, ಶರಣಬಸಪ್ಪ ನಾಟೀಕರ, ಶಣ್ಮುಖ ವಾಗಮೋರೆ, ಶಿವಲಿಂಗಪ್ಪ ಮಾಸ್ಟರ್, ಉದಯಕುಮಾರ ಇಂಗಳೆ, ರಿಜ್ವಾನಾ ಪರ್ವೀನ್, ಕೌಸರ್ ಶಾಯಿನ್, ಮಧುಮತಿ ಹೆಚ್, ಪ್ರಕಾಶ ಕೋಟ್ರೆ, ಸೈಯದ್ ಇನಾಮದಾರ, ನಾಗೇಮದ್ರಪ್ಪ ಶರ್ಮಾ, ಶಿವಪುತ್ರಪ್ಪ ಹಾಗರಗಿ, ಪವಿತ್ರ ಸಂಗರಾಜ, ಮಹಾದೇವ ಕೋತ್ಲಿ ಅವರನ್ನು ಪುಲೆ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಪಂಡಿತ ಮಧುಗುಣಕಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ.ಚಿದಾನಂದ ಕುಡ್ಡನ್ ಸ್ವಾಗತಿಸಿದರು. ಕಪಿಲದೇವ ಚಕ್ರವರ್ತಿ ನಿರೂಪಿಸಿದರು. ವಿಠಲ ಚಿಕಿಣಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X