Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ದೇವಸ್ಥಾನದ ಉದ್ಘಾಟನಾ...

ಸೇಡಂ | ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಗಳ ಆಹ್ವಾನದಲ್ಲಿ ತಾರತಮ್ಯ ಆರೋಪ: ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

ವಾರ್ತಾಭಾರತಿವಾರ್ತಾಭಾರತಿ20 Aug 2026 9:10 PM IST
share
ಸೇಡಂ | ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಅತಿಥಿಗಳ ಆಹ್ವಾನದಲ್ಲಿ ತಾರತಮ್ಯ ಆರೋಪ:  ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

ಸೇಡಂ: ತಾಲೂಕಿನ ರಂಜೋಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವೀರಾಂಜನೇಯ ದೇವಸ್ಥಾನದ ಉದ್ಘಾಟನೆ ಹಾಗೂ 9 ಗ್ರಾಮ ದೇವತೆಗಳ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಮೊದಲು ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದೆ. ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ದೇವಸ್ಥಾನಕ್ಕೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಘರ್ಷಣೆ ಉಂಟಾಗಿದೆ.

ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಬಂಧಿಸಿದ ಆಮಂತ್ರಣ ಪತ್ರಿಕೆ ಹಾಗೂ ವಿವಿಧ ಮುಖಂಡರಿಗೆ ನೀಡಲಾಗುತ್ತಿರುವ ಆಹ್ವಾನದಲ್ಲಿ ರಾಜಕೀಯ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ನೇತೃತ್ವದಲ್ಲಿ ಕೆಲ ಗ್ರಾಮಸ್ಥರು ಹಾಗೂ ಬಿಜೆಪಿ ಕಾರ್ಯಕರ್ತರು ದೇವಸ್ಥಾನಕ್ಕೆ ತೆರಳಿ ಭಜನೆ ಆರಂಭಿಸಿದರು. ಈ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು, ಇದು ನಮ್ಮ ಗ್ರಾಮದ ಸಮಸ್ಯೆ, ನೀವು ಏಕೆ ಬರುತ್ತೀರಿ? ಎಂದು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು.

ದೇವಸ್ಥಾನವು ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿಯ ಸ್ವತ್ತಲ್ಲ. ಅದು ಗ್ರಾಮದ ಎಲ್ಲ ಸಮುದಾಯಗಳ ಭಕ್ತರ ಧಾರ್ಮಿಕ ಭಾವನೆಗೆ ಸಂಬಂಧಿಸಿದ ಸ್ಥಳವಾಗಿದ್ದು, ದೇವತಾ ಪ್ರತಿಷ್ಠಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲ ಸಮುದಾಯಗಳ ಮುಖಂಡರು ಮತ್ತು ದೇಣಿಗೆ ನೀಡಿದವರನ್ನು ಸಮಾನವಾಗಿ ಆಹ್ವಾನಿಸಿ ರಾಜಕೀಯ ಭೇದಭಾವವಿಲ್ಲದೆ ಕಾರ್ಯಕ್ರಮ ನಡೆಸಬೇಕು ಎಂದು ತೆಲ್ಕೂರ್ ಹಾಗೂ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.

ಈ ವೇಳೆ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ತೀವ್ರಗೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಸ್ಥಳದಲ್ಲಿದ್ದ ಡಿಎಸ್‌ಪಿ ನೇತೃತ್ವದ ಪೊಲೀಸ್ ತಂಡ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ.

“ದೇವಸ್ಥಾನ ನಿರ್ಮಾಣಕ್ಕಾಗಿ ರಾಯಚೂರು, ಯಾದಗಿರಿ ಸೇರಿದಂತೆ ಸೇಡಂ ತಾಲೂಕಿನ ವಿವಿಧೆಡೆ ರಸೀದಿ ನೀಡದೆ ಸುಮಾರು 10 ಕೋಟಿಗೂ ಹೆಚ್ಚಿನ ದೇಣಿಗೆ ಸಂಗ್ರಹಿಸಲಾಗಿದೆ. ಅದರಲ್ಲಿ ಸ್ವಲ್ಪ ಹಣವನ್ನು ಮಾತ್ರ ದೇವಸ್ಥಾನ ನಿರ್ಮಾಣಕ್ಕೆ ಬಳಸಿಕೊಂಡು ಉಳಿದ ಹಣವನ್ನು ಲೂಟಿ ಮಾಡಲಾಗಿದೆ” ಎಂದು ಇದೇ ವೇಳೆ ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ್ ಆರೋಪಿಸಿದರು.

“ದೇವಸ್ಥಾನಕ್ಕೆ ನನ್ನ ಕೊಡುಗೆ ಏನು ಎಂದು ಪ್ರಶ್ನಿಸುವವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಸೇಡಂ ತಾಲೂಕಿನಲ್ಲಿ 20ಕ್ಕೂ ಹೆಚ್ಚು ದೇವಸ್ಥಾನಗಳಿಗೆ 30 ಕೋಟಿಗೂ ಅಧಿಕ ಅನುದಾನ ನೀಡಿರುವುದನ್ನು ಗಮನಿಸಬೇಕು. ಹೀಗಾಗಿ ದೇವಸ್ಥಾನದ ಕುರಿತು ಮಾತನಾಡುವ ನೈತಿಕತೆ ನನಗಿದೆ” ಎಂದು ರಾಜಕುಮಾರ ಪಾಟೀಲ ತೆಲ್ಕೂರ್ ಹೇಳಿದರು.

Tags

SedamBJPCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X