Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಹಾಬಾದ್ ಪ್ರಥಮ ಕನ್ನಡ ಸಾಹಿತ್ಯ...

ಶಹಾಬಾದ್ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳಣಾಧ್ಯಕ್ಷರ ಅದ್ದೂರಿ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ5 Jan 2025 7:08 PM IST
share
Photo of Program

ಕಲಬುರಗಿ : ಕನ್ನಡ ಸಾಹಿತ್ಯ ಪರಿಷತ್ತು ಶಹಾಬಾದ್ ವತಿಯಿಂದ ಆಯೋಜಿಸಲಾದ ಶಹಾಬಾದ್ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ದೂರಿಯಾಗಿ ಜರುಗಿತು.

ಪ್ರಥಮವಾಗಿ ರಾಷ್ಟ್ರಧ್ವಜವನ್ನು ನಗರಸಭೆಯ ಅಧ್ಯಕ್ಷೆ ಚಂಪಾಬಾಯಿ ರಾಜು ಮೇಸ್ತ್ರಿ ಮತ್ತು ನಾಡಧ್ವಜದ ಧ್ವಜಾರೋಹಣ ಕಾರ್ಯಕ್ರಮವನ್ನ ಕಸಾಪ ಅಧ್ಯಕ್ಷ ಶರಣಬಸಪ್ಪ ಕೋಬಾಳ, ತಹಸೀಲ್ದಾರ ಜಗದೀಶ ಚೌರ್, ನಗರಸಭೆಯ ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ ಧ್ವಜಾರೋಹಣ ನೆರವೇರಿಸಿದರು.

ನಗರಸಭೆಯ ಉಪಾಧ್ಯಕ್ಷೆ ಫಾತಿಮಾಬೇಗಂ, ಡಿವಾಯ್ಎಸ್ಪಿ ಶಂಕರಗೌಡ ಪಾಟೀಲ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿದರು.

ಭವ್ಯವಾದ ಮೆರವಣಿಗೆಯಲ್ಲಿ ಜನಪದ ಕಲಾತಂಡಗಳು, ಡೊಳ್ಳು ಕುಣಿತ, ಶಾಲಾ ಮಕ್ಕಳಿಂದ ಕನ್ನಡದ ಬಾವುಟ ಹಾರಾಡುತ್ತಿದುದ್ದು, ಕನ್ನಡ ಪರ ಸಂಘಟನೆಗಳು ತಾಲೂಕಿನ ಶಿಕ್ಷಕರು, ಗುರುಮಾತೆಯರು, ವಿದ್ಯಾರ್ಥಿಗಳು ಸರ್ವಾಧ್ಯಕ್ಷರ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಕನ್ನಡ ಕನ್ನಡ ಸಾಗಿ ನಮ್ಮ ಸಂಗಡ, ನಾನು ಕನ್ನಡಿಗ ಕನ್ನಡವೇ ನನ್ನ ನುಡಿ, ಕನ್ನಡವೆನ್ನಿ ಜತೆಗೆ ಬನ್ನಿ, ಜೈ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ, ಉದಯವಾಗಲಿ ನಮ್ಮ ಕನ್ನಡ ನಾಡು, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂಬ ಘೋಷಣೆಗಳ ಸಾಮೂಹಿಕ ಧ್ವನಿಯ ಕರತಾಡನ ಮೊಳಗಿತು. ಜಾನಪದ ಮೇಳಗಳ ವಾದ್ಯಕ್ಕೆ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು, ರಾಜಕೀಯ ಪಕ್ಷದ ಮುಖಂಡರು ಪಕ್ಷಬೇಧ ಮರೆತು ಹೆಜ್ಜೆ ಹಾಕಿ ನಾಡು-ನುಡಿ ಬಗೆಗಿನ ಪ್ರೀತಿ ಪ್ರದರ್ಶಿಸಿದರು. ರಸ್ತೆಯ ತುಂಬೆಲ್ಲಾ ಕೆಂಪು.ಹಳದಿ ಬಣ್ಣದ ಪರಾರಿಗಳಿಂದ ಶೃಂಗಾರ ಮಾಡಲಾಗಿತ್ತು. ಅಲ್ಲದೇ ಮಹಿಳೆಯರ ಕುಂಭ ಮೆರವಣಿಗೆ, ಕೋಲಾಟ, ಡೊಳ್ಳು ಕುಣಿತ ಮೆರವಣಿಗೆಗೆ ಮೆರುಗು ನೀಡಿದವು.

ಸಮ್ಮೇಳನಾಧ್ಯಕ್ಷ ಸಾರೋಟ ಮೆರವಣಿಗೆಯಲ್ಲಿ ವಿಶೇಷ ಅಲಂಕಾರ ಮಾಡಿ ತೆರೆದ ವಾಹನದಲ್ಲಿ ವಾಧ್ಯ ವೈಭವದ ಮೂಲಕ ಮೆರವಣಿಗೆ ಮೂಲಕ ಸಂತೋಷಕುಮಾರ ಇಂಗಿನಶೆಟ್ಟಿ ವೇದಿಕೆಗೆ ಸಂಭ್ರಮದಿoದ ಬರಮಾಡಿಕೊಂಡರು.

ಸಾರೋಟದಲ್ಲಿ ಕುಳಿತ ಸಮ್ಮೇಳನಾಧ್ಯಕ್ಷರಾದ ಎಚ್.ಬಿ.ತೀರ್ಥೆ ಅವರು ಸಮ್ಮೇಳನದ ಪ್ರಧಾನ ವೇದಿಕೆವರೆಗೂ ರಸ್ತೆ ಬದಿ ನಿಂತ ಜನರ ಗೌರವ ಸ್ವೀಕರಿಸುತ್ತ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಜನರಿಗೆ ಸಹಕರಿಸಿ ಸರಳತೆ ಮೆರೆದರು.

ಈ ಸಂದರ್ಭದಲ್ಲಿ ನಗರಸಭೆಯ ಸದಸ್ಯರು, ಸುತ್ತಮುತ್ತಲಿನ ಗ್ರಾಮದ ರೈತರು, ಸರಕಾರಿ ನೌಕರರು, ಕನ್ನಡ ಅಭಿಮಾನಿಗಳು ಸೇರಿದಂತೆ ಅನೇಕರು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X