Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶಹಾಬಾದ್ ಜಿಇ ಪವರ್...

Kalaburagi | ಶಹಾಬಾದ್ ಜಿಇ ಪವರ್ ಇಂಡಿಯಾ ಘಟಕ ಪುನಶ್ಚೇತನಕ್ಕೆ ಸರ್ಕಾರ ಮಧ್ಯಪ್ರವೇಶಿಸಲಿ: ಅಭಿವೃದ್ಧಿ ಸಮಿತಿ ಮನವಿ

ವಾರ್ತಾಭಾರತಿವಾರ್ತಾಭಾರತಿ22 July 2026 8:58 PM IST
share
Kalaburagi | ಶಹಾಬಾದ್ ಜಿಇ ಪವರ್ ಇಂಡಿಯಾ ಘಟಕ ಪುನಶ್ಚೇತನಕ್ಕೆ ಸರ್ಕಾರ ಮಧ್ಯಪ್ರವೇಶಿಸಲಿ: ಅಭಿವೃದ್ಧಿ ಸಮಿತಿ ಮನವಿ

ಕಲಬುರಗಿ: ಶಹಾಬಾದ್‌ನಲ್ಲಿರುವ ಜಿಇ ಪವರ್ ಇಂಡಿಯಾ ಲಿಮಿಟೆಡ್‌ (ಹಿಂದಿನ ಎಬಿಎಲ್, ಎಬಿಬಿ, ಅಲ್ಸ್ಟೊಮ್) ಭಾರೀ ಎಂಜಿನಿಯರಿಂಗ್ ಕೈಗಾರಿಕಾ ಘಟಕವನ್ನು ಪುನಶ್ಚೇತನಗೊಳಿಸಿ ಮತ್ತೆ ಉತ್ಪಾದನಾ ಚಟುವಟಿಕೆ ಆರಂಭಿಸಲು ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಹಾಬಾದ್ ಅಭಿವೃದ್ಧಿ ಸಮಿತಿ ಒತ್ತಾಯಿಸಿದೆ.

ಈ ಕುರಿತು ಸಮಿತಿಯ ಕಾರ್ಯದರ್ಶಿ ರಮೇಶ್ ಭಟ್ ಹಾಗೂ ಗೌರವಾಧ್ಯಕ್ಷರು ಮತ್ತು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಗೌರವ ಕಾರ್ಯದರ್ಶಿ ಶಿವರಾಜ್ ವಿ. ಇಂಗಿನಶೆಟ್ಟಿ ನೇತೃತ್ವದ ನಿಯೋಗವು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಯಾದಗಿರಿ ಪ್ರವಾಸದ ಬಳಿಕ ಶಹಾಬಾದ್ ಮಾರ್ಗವಾಗಿ ಆಗಮಿಸಿದ ಸಚಿವ ಎಂ.ಬಿ. ಪಾಟೀಲ್ ಅವರಿಗಾಗಿ ಸಮಿತಿಯು ಜಿಇ ಪವರ್ ಇಂಡಿಯಾ ಘಟಕದಲ್ಲಿ ವಿಶೇಷ ಭೇಟಿ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಸಚಿವರಿಗೆ ಘಟಕದ ಪ್ರಸ್ತುತ ಸ್ಥಿತಿಯನ್ನು ವಿವರಿಸಿ, ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕೈಗಾರಿಕಾ ಘಟಕವನ್ನು ಪುನಾರಂಭಿಸಲು ಸರ್ಕಾರದ ಮಧ್ಯಪ್ರವೇಶ ಅಗತ್ಯ ಎಂದು ಮನವಿ ಮಾಡಲಾಯಿತು. ಸಚಿವರು ಸ್ಥಳ ಪರಿಶೀಲನೆ ನಡೆಸಿ, ವಿಷಯವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಭರವಸೆ ನೀಡಿದರು.

1965ರಲ್ಲಿ ಸ್ಥಾಪನೆಯಾದ ಈ ಘಟಕವು ಎಬಿಎಲ್, ಎಬಿಬಿ, ಅಲ್ಸ್ಟೊಮ್ ಮೂಲಕ ಪ್ರಸ್ತುತ ಜಿಇ ಪವರ್ ಇಂಡಿಯಾ ಲಿಮಿಟೆಡ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು. ದೇಶದ ಪ್ರಮುಖ ಭಾರೀ ಎಂಜಿನಿಯರಿಂಗ್ ಉತ್ಪಾದನಾ ಕೇಂದ್ರಗಳಲ್ಲಿ ಒಂದಾಗಿದ್ದ ಈ ಘಟಕ ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಸ್ಥಗಿತಗೊಂಡಿದ್ದು, ಸಾವಿರಾರು ನೇರ ಹಾಗೂ ಪರೋಕ್ಷ ಉದ್ಯೋಗಗಳು ನಷ್ಟವಾಗಿವೆ. ಇದರಿಂದ ಶಹಾಬಾದ್ ಮಾತ್ರವಲ್ಲದೆ ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿಗೂ ಹಿನ್ನಡೆಯಾಗಿದೆ ಎಂದು ಸಮಿತಿ ತಿಳಿಸಿದೆ.

ಸುಮಾರು 300 ಎಕರೆಗೂ ಅಧಿಕ ಪ್ರದೇಶದಲ್ಲಿರುವ ಘಟಕದಲ್ಲಿ ಸುಸಜ್ಜಿತ ಉತ್ಪಾದನಾ ಮೂಲಸೌಕರ್ಯ, ವಸತಿ ಕಾಲೋನಿ ಸೇರಿದಂತೆ ಅಗತ್ಯ ಸೌಲಭ್ಯಗಳು ಈಗಾಗಲೇ ಲಭ್ಯವಿವೆ. ರಕ್ಷಣಾ ಉತ್ಪಾದನೆ, ಏರೋಸ್ಪೇಸ್, ಇಂಧನ ಉಪಕರಣಗಳು ಹಾಗೂ ಭಾರೀ ಎಂಜಿನಿಯರಿಂಗ್ ಕ್ಷೇತ್ರದ ಕೈಗಾರಿಕೆಗಳಿಗೆ ಈ ಘಟಕವನ್ನು ಬಳಸಿಕೊಳ್ಳಬಹುದಾಗಿದ್ದು, ಹೊಸ ಕೈಗಾರಿಕೆ ಸ್ಥಾಪನೆಗಿಂತ ಕಡಿಮೆ ವೆಚ್ಚದಲ್ಲಿ ಪುನಶ್ಚೇತನಗೊಳಿಸಬಹುದು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಜಿಇ ಪವರ್ ಇಂಡಿಯಾ ಆಡಳಿತ ಮಂಡಳಿಯೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿ ಘಟಕ ಪುನಾರಂಭಕ್ಕೆ ಅಗತ್ಯ ನೀತಿ ಬೆಂಬಲ ನೀಡಬೇಕು. ಕಂಪನಿಯು ಪುನಾರಂಭಕ್ಕೆ ಆಸಕ್ತಿ ತೋರದಿದ್ದರೆ, ಈ ಕೈಗಾರಿಕಾ ಆಸ್ತಿಯನ್ನು ಇತರೆ ಸೂಕ್ತ ಕೈಗಾರಿಕೆಗಳ ಬಳಕೆಗೆ ಒದಗಿಸುವ ಮೂಲಕ ಸಾರ್ವಜನಿಕ ಹಿತಾಸಕ್ತಿ ಕಾಪಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಘಟಕ ಪುನಾರಂಭವಾದರೆ ಸಾವಿರಾರು ಉದ್ಯೋಗ ಸೃಷ್ಟಿಯಾಗುವುದರ ಜತೆಗೆ ಪೂರಕ ಕೈಗಾರಿಕೆಗಳು ಹಾಗೂ ಎಂಎಸ್‌ಎಂಇ ವಲಯಕ್ಕೂ ಉತ್ತೇಜನ ದೊರೆಯಲಿದೆ. ಅಲ್ಲದೆ, ರಾಜ್ಯ ಸರ್ಕಾರದ ‘ಬಿಲ್ಡ್ ಬಿಯಾಂಡ್ ಬೆಂಗಳೂರು’ ಪರಿಕಲ್ಪನೆಗೂ ಇದು ಬಲ ನೀಡಲಿದೆ ಎಂದು ಸಮಿತಿ ತಿಳಿಸಿದೆ.

ಮನವಿ ಸ್ವೀಕರಿಸಿದ ಸಚಿವ ಎಂ.ಬಿ. ಪಾಟೀಲ್ ಅವರು ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿಯ ಉಪಾಧ್ಯಕ್ಷ ಮೊಹಮ್ಮದ್ ಫಜಲ್ ಪಟೇಲ್, ಕನಕಪ್ಪ ದಂಡಗುಲ್ಜಾರ್, ಮೃತ್ಯುಂಜಯ ಸ್ವಾಮಿ, ಹಸಂ ಖಾನ್ ಹಾಗೂ ಪೊಲೀಸ್ ಪಾಟೀಲ ಶರಣಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KalaburagiShahabad GE Power India Unit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X