Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯುವಕರ, ಮಹಿಳೆಯರ ಸಬಲೀಕರಣಕ್ಕೆ...

ಯುವಕರ, ಮಹಿಳೆಯರ ಸಬಲೀಕರಣಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ : ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ3 Dec 2024 9:30 PM IST
share
Photo of Program

ಕಲಬುರಗಿ : ಪ್ರಪಂಚ ಈಗ ಅಸಾಧಾರಣ ವೇಗದಲ್ಲಿ ವಿಕಸನಗೊಳ್ಳುತ್ತಿದ್ದು, ತಂತ್ರಜ್ಞಾನ, ಡಿಜಿಟಲೀಕರಣ ಮತ್ತು ಆಧುನಿಕತೆಯು ಒಟ್ಟಾರೆ ವ್ಯವಸ್ಥೆಯನ್ನು ಬದಲಾಯಿಸಿ, ಅನೇಕ ಸವಾಲು ಮತ್ತು ಅವಕಾಶಗಳನ್ನು ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ʼಸಾಮರ್ಥ ಮತ್ತು ಹೊಸ ಕೌಶಲ್ಯವನ್ನು ಅನಾವರಣಗೊಳಿಸಲುʼ ಜಿಟಿಟಿಸಿ-ಬಹುಕೌಶಲ್ಯಾಭಿವೃದ್ಧಿ ಕೇಂದ್ರದ (MSDC) ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಕಲಬುರಗಿ ವಿವಿಯ ಆವರಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಚಿವರ ಸಮ್ಮುಖದಲ್ಲಿ ಜಿಟಿಟಿಸಿ ಅಧಿಕಾರಿಗಳು ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಅಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಿ ವಿನಿಮಯ ಮಾಡಿಕೊಂಡರು.

ನಂತರ ಮಾತನಾಡಿದ ಸಚಿವರು, ಸುಮಾರು 25 ಎಕರೆ ವಿಶಾಲ ಪ್ರದೇಶದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರ ತಲೆ ಎತ್ತಲಿದೆ. ಇದರಿಂದ ಪ್ರೌಢಶಾಲೆ, ಪದವೀಧರರು, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿಶ್ವ ದರ್ಜೆಯ ತರಬೇತಿ ನೀಡಲು ಸಾಧ್ಯವಾಗಲಿದೆ. ʼಸ್ಥಳೀಯ ಕೌಶಲ್ಯ, ಜಾಗತಿಕ ಕೆಲಸʼ ಎಂಬುದು ನಮ್ಮ ಮೂಲ ಮಂತ್ರವಾಗಿದೆ ಎಂದು ತಿಳಿಸಿದರು.

ಉದ್ಯಮಶೀಲತೆ ಮತ್ತು ನಾವೀನ್ಯತೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳುವುದು ಇಂದಿನ ಅಗತ್ಯವಾಗಿದೆ. ವಿದ್ಯಾರ್ಥಿಗಳು ಮಾತ್ರವಲ್ಲದೇ, ಯುವಕರು, ಮಹಿಳೆಯರ ಸಬಲೀಕರಣಕ್ಕೆ ಹಾಗೂ ಸ್ವಾವಲಂಬಿಯಾಗಲು ಕೂಡ ಕ್ರಮ ಕೈಗೊಳ್ಳಲಾಗುತ್ತದೆ. ಇದಲ್ಲದೇ ಭಾಷಾ ಪ್ರಯೋಗಾಲಯ ಸ್ಥಾಪಿಸಲಾಗುತ್ತಿದ್ದು, ಜರ್ಮನ್, ಜಪಾನೀಸ್ ಭಾಷೆ ಕಲಿಸಲಾಗುತ್ತದೆ ಎಂದು ಶರಣ್ ಪ್ರಕಾಶ್ ಪಾಟೀಲ್ ವಿವರಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೃಹತ್ ಹಾಗೂ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಯಾಗುತ್ತಿರುವುದರಿಂದ ಈ ಭಾಗದ ಜನರಿಗೆ ಉತ್ತಮ ತರಬೇತಿ ಹಾಗೂ ಹೆಚ್ಚಿನ ಅವಕಾಶಗಳು ಕೈಬೀಸಿ ಕರೆಯುತ್ತದೆ. ಈ ರೀತಿಯ ಕೇಂದ್ರಗಳನ್ನು ರಾಜ್ಯದ ಮೂರು ಕಡೆ ಸ್ಥಾಪಿಸಲಾಗುತ್ತದೆ. ಕಲಬುರಗಿ, ಕೊಪ್ಪಳ ಜಿಲ್ಲೆಯ ತಳಕಲ್ ಹಾಗೂ ಮೈಸೂರಿನ ವರುಣಾದಲ್ಲಿ ಇದು ತಲೆ ಎತ್ತಲಿವೆ ಎಂದು ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ.ಅಜಯ್ ಸಿಂಗ್, ಗುಲ್ಬರ್ಗ ವಿಶ್ವವಿದ್ಯಾಲಯ ಕುಲಪತಿ ಪ್ರೊ.ದಯಾನಂದ ಅಗಸರ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ವೈ.ಕೆ.ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ತರಬೇತಿಗಳು :

* ಅಡ್ವಾನ್ಸ್ಡ್ ಮ್ಯಾನ್ಯುಫ್ಯಾಕ್ಜರಿಂಗ್

* ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ತಂತ್ರಜ್ಞಾನ

* ಮೆಕಾಟ್ರಾನಿಕ್ಸ್ ಮತ್ತು ಆಟೊಮೇಷನ್

* ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ರೂಪಾಂತರ

* ನವೀಕರಿಸಬಹುದಾದ ಇಂಧನ ಮತ್ತು ಸುಸ್ಥಿರತೆ

* ಆರೋಗ್ಯ ಮತ್ತು ಸಂಬಂಧಿತ ವಲಯಗಳು

* ಆತಿಥ್ಯ ಮತ್ತು ಸೇವಾ ಉದ್ಯಮಗಳು

* ಸಾಫ್ಟ್ ಸ್ಕಿಲ್ಸ್, ಸಂವಹನ ಮತ್ತು ನಾಯಕತ್ವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X