Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೂಫಿ–ಶರಣರ ಸೌಹಾರ್ದ ಬದುಕು ಇಂದಿನ...

ಸೂಫಿ–ಶರಣರ ಸೌಹಾರ್ದ ಬದುಕು ಇಂದಿನ ಸಮಾಜಕ್ಕೆ ಅಗತ್ಯ: ಗುದ್ದಿ

ವಾರ್ತಾಭಾರತಿವಾರ್ತಾಭಾರತಿ30 May 2026 8:25 PM IST
share
ಸೂಫಿ–ಶರಣರ ಸೌಹಾರ್ದ ಬದುಕು ಇಂದಿನ ಸಮಾಜಕ್ಕೆ ಅಗತ್ಯ: ಗುದ್ದಿ
ಬಂದಾನವಾಝ್ ಮತ್ತು ಸೂಫಿ ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

ಕಲಬುರಗಿ: ಸೂಫಿ ಸಂತ ಹಜರತ್ ಖ್ವಾಜಾ ಬಂದಾನವಾಝ್ ಗೇಸುದರಾಜ್ ಅವರ ಜೀವನ, ತತ್ವಚಿಂತನೆ, ಸಾಮಾಜಿಕ ಸೇವೆ ಹಾಗೂ ಸಾಹಿತ್ಯಿಕ ಕೊಡುಗೆಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿವೆ ಎಂದು ಸಾಹಿತಿ-ಚಿಂತಕ ಮನೋಜಕುಮಾರ ಗುದ್ದಿ ಅಭಿಪ್ರಾಯಪಟ್ಟರು.

ನಗರದ ವಿಶ್ವನಾಥರೆಡ್ಡಿ ಮುದ್ನಾಳ ಪದವಿ ಹಾಗೂ ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಆಯೋಜಿಸಿದ್ದ ‘ಬಂದಾನವಾಝ್ ಮತ್ತು ಸೂಫಿ ಸಾಹಿತ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ವಿಶ್ವನಾಥರೆಡ್ಡಿ ಮುದ್ನಾಳ ಅವರ ಬದುಕು ಈ ಭಾಗದ ಸೌಹಾರ್ದ ಪರಂಪರೆಯ ಪ್ರತೀಕವಾಗಿತ್ತು. ಅವರ ಹೆಸರಿನ ಕಾಲೇಜಿನಲ್ಲಿ ಸೂಫಿ ಸಾಹಿತಿ ಬಂದಾನವಾಝ್ ಕುರಿತು ಉಪನ್ಯಾಸ ಆಯೋಜಿಸಿರುವುದು ಅರ್ಥಪೂರ್ಣ ಕಾರ್ಯವಾಗಿದೆ” ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಬೋಡೆ ರಿಯಾಜ್ ಅಹ್ಮದ್ ಅವರು, ಖ್ವಾಜಾ ಬಂದಾನವಾಝರು ಬಾಲ್ಯದಲ್ಲಿಯೇ ದೇವಗಿರಿ (ದೌಲತಾಬಾದ್) ಪ್ರದೇಶಕ್ಕೆ ಬಂದು ತಮ್ಮ ತಂದೆಯ ನಿಧನದ ಬಳಿಕ ದೆಹಲಿಗೆ ತೆರಳಿ ಅಲ್ಲಿನ ಸೂಫಿ ಪರಂಪರೆಯ ಮಾರ್ಗದರ್ಶನದಲ್ಲಿ ಆಧ್ಯಾತ್ಮಿಕ ಶಿಕ್ಷಣ ಪಡೆದರು. ಸುಮಾರು 44 ವರ್ಷಗಳ ಕಾಲ ಧಾರ್ಮಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಉಪನ್ಯಾಸಗಳ ಮೂಲಕ ಸಾವಿರಾರು ಶಿಷ್ಯರನ್ನು ರೂಪಿಸಿದರು ಎಂದು ವಿವರಿಸಿದರು.

ಕ್ರಿ.ಶ. 1398ರಲ್ಲಿ ತೈಮೂರನ ದೆಹಲಿಯ ಮೇಲಿನ ದಾಳಿಯ ಸಂದರ್ಭದಲ್ಲಿ ದಕ್ಷಿಣ ಭಾರತಕ್ಕೆ ಆಗಮಿಸಿದ ಬಂದಾನವಾಝರು, ಬಳಿಕ ಗುಲ್ಬರ್ಗಾದಲ್ಲಿ ನೆಲೆಸಿದರು. ಅವರ ಜ್ಞಾನ, ಸರಳತೆ ಮತ್ತು ಆಧ್ಯಾತ್ಮಿಕ ವ್ಯಕ್ತಿತ್ವದಿಂದ ಪ್ರಭಾವಿತರಾದ ಬಹಮನಿ ಸುಲ್ತಾನ ಫಿರೋಜ್ ಶಾ ಬಹಮನಿ ಅವರಿಗೆ ಆಶ್ರಯ ಕಲ್ಪಿಸಿದರು. ನಂತರ ಜನಸಾಮಾನ್ಯರ ಮಧ್ಯೆ ವಾಸವಿದ್ದು, ಜಾತಿ–ಮತ–ಧರ್ಮಗಳ ಭೇದವಿಲ್ಲದೆ ಮಾನವೀಯತೆಯ ಸಂದೇಶ ಸಾರಿದರು ಎಂದು ಹೇಳಿದರು.

ಸೂಫಿ ಸಾಹಿತಿ ಡಾ. ಪರ್ವಿನ್ ಸುಲ್ತಾನಾ ಮಾತನಾಡಿ, “ಬಂದಾನವಾಝ್ ಅವರ ಸಂದೇಶ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿರದೆ ಸಮಸ್ತ ಮಾನವಕುಲದ ಒಳಿತಿಗಾಗಿ ರೂಪುಗೊಂಡ ವಿಶ್ವಮಾನವೀಯ ಚಿಂತನೆಯಾಗಿದೆ. ಪ್ರೀತಿ, ಕರುಣೆ, ಸೇವೆ ಮತ್ತು ಸಹಿಷ್ಣುತೆಯ ಮೌಲ್ಯಗಳನ್ನು ಅವರು ಪ್ರತಿಪಾದಿಸಿದ್ದು, ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿದೆ” ಎಂದರು.

ಮುಖ್ಯಅತಿಥಿ ಶರಣಗೌಡ ಪಾಟೀಲ ಪಾಳಾ ಮಾತನಾಡಿ, “ಬಸವಣ್ಣನ ಸಮಾನತೆಯ ಆಶಯವನ್ನು ಈ ಭಾಗದಲ್ಲಿ ಬಿತ್ತಿ ಬೆಳೆಸಿದವರಲ್ಲಿ ಸೂಫಿಗಳ ಪಾತ್ರ ಮಹತ್ವದ್ದಾಗಿದೆ. ಇಂದಿನ ಸಮಾಜಕ್ಕೆ ಸೂಫಿ–ಶರಣರ ಸೌಹಾರ್ದ ಬದುಕಿನ ಮೌಲ್ಯಗಳು ಅತ್ಯಗತ್ಯ” ಎಂದು ಹೇಳಿದರು.

ಡಾ. ವೀರಶೆಟ್ಟಿ ಗಾರಂಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸವರಾಜ ಮಠಪತಿ ಅಧ್ಯಕ್ಷತೆ ವಹಿಸಿದ್ದರು. ಡಾ. ಪ್ರೇಮಾ ಅಪಚಂದ, ಡಾ. ಶರಣಬಸಪ್ಪ ವಡ್ಡನಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾಗೇಶ ಮಡಿವಾಳ ಕಾರ್ಯಕ್ರಮ ನಿರೂಪಿಸಿದರು. ಸಿದ್ದರಾಮ ಕಲಬುರ್ಗಿ ಸ್ವಾಗತಿಸಿದರು. ವೀಣಾ ರಾವೂರ ವಂದಿಸಿದರು.

Tags

Khwaja Banda NawazSufi LiteratureKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X