Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗೊಂದಲ ಸೃಷ್ಟಿಸಿದ ಬೀದರ್ ಎಸ್‌ಪಿ,...

ಗೊಂದಲ ಸೃಷ್ಟಿಸಿದ ಬೀದರ್ ಎಸ್‌ಪಿ, ಕಲಬುರಗಿ ಕಮಿಷನರ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ15 July 2026 11:51 PM IST
share
ಗೊಂದಲ ಸೃಷ್ಟಿಸಿದ ಬೀದರ್ ಎಸ್‌ಪಿ, ಕಲಬುರಗಿ ಕಮಿಷನರ್ ಹೇಳಿಕೆ

ಕಲಬುರಗಿ : ನಗರದ ಹೊರವಲಯದ ಕೇಂದ್ರ ಕಾರಾಗೃಹದಿಂದ ಮಂಗಳವಾರ ಬೆಳಗಿನ ಜಾವ ಮೂವರು ಕೈದಿಗಳು ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಬಂಧನ ಸ್ಥಳದ ಬಗ್ಗೆ ಗೊಂದಲಮಯ ಹೇಳಿಕೆ ನೀಡಿದ್ದು, ಈ ಪ್ರಕರಣ ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

ಮೂವರು ಅಪರಾಧಿಗಳ ಪೈಕಿ ಸಂತೋಷ ಎನ್ನುವ ಕೈದಿಯನ್ನು ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಸಂಜೆ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.

ಜೈಲಿನಿಂದ ಪರಾರಿಯಾದ ಬಳಿಕ ಮೂವರಲ್ಲಿ ಇಬ್ಬರು ಕೈದಿಗಳು ಕಲಬುರಗಿಯಿಂದ ಹುಮನಾಬಾದ್ ಕಡೆಗೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸಿದ್ದಾರೆ ಎನ್ನಲಾಗಿದ್ದು, ಹುಮನಾಬಾದ್ ಹೊರವಲಯದಲ್ಲಿ ಪೊಲೀಸರು ವಾಹನಗಳ ತಪಾಸಣೆ ಕಾರ್ಯ ನಡೆಸುತ್ತಿದ್ದರು. ಬಸ್‌ನಲ್ಲಿದ್ದ ಕೈದಿಗಳು ಅದನ್ನು ಗಮನಿಸಿ ಕೈಗಾರಿಕಾ ಪ್ರದೇಶದಲ್ಲಿ ಓಡಿ ಹೋಗಲು ಯತ್ನಿಸಿದ್ದಾರೆ. ಅವರನ್ನು ಬೆನ್ನು ಹತ್ತಿದ್ದ ಪೊಲೀಸರು ಸಂತೋಷನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಬ್ಬ ಕೈದಿಯ ಬಂಧನಕ್ಕೆ ಜಾಲ ಬೀಸಿದ್ದಾರೆ ಎಂದು ವರದಿಯಾಗಿತ್ತು.

ಆದರೆ ಅದೇ ಸಂತೋಷ್ ಎಂಬ ಕೈದಿಯನ್ನು ಬುಧವಾರ ಬೆಳಗ್ಗೆ ಶೂಟೌಟ್ ನಡೆಸಿ, ಬಂಧಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು, ಬುಧವಾರ ಬೆಳಗ್ಗೆ ಹುಮನಾಬಾದ್ ರಿಂಗ್ ರಸ್ತೆ ಕೈಗಾರಿಕಾ ಪ್ರದೇಶದ ಬಳಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಶರಣಾಗಲು ನಿರಾಕರಿಸಿದ ಕೈದಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು, ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಕೈದಿಯ ಬಲಗಾಲಿಗೆ ಗುಂಡು ತಗುಲಿದೆ ಎಂದು ಹೇಳಿದ್ದಾರೆ.

ಗಾಯಗೊಂಡ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಗಾಯಗೊಂಡ ಕೈದಿಯನ್ನು ಕಲಬುರಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಆರೋಗ್ಯ ಸ್ಥಿರವಾಗಿದೆ. ಇದಕ್ಕೂ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ ಎಂದು ಸ್ವತಃ ಪೊಲೀಸ್ ಆಯುಕ್ತರೇ ತಿಳಿಸಿದ್ದಾರೆ.

ಬಂಧನದ ಸಮಯ ಮತ್ತು ವಿವರಗಳ ಕುರಿತು ಎರಡೂ ಹೇಳಿಕೆಗಳು ಭಿನ್ನವಾಗಿರುವುದರಿಂದ, ಯಾವುದು ಸರಿಯಾಗಿದೆ ಎಂಬುದರ ಬಗ್ಗೆ ಗೊಂದಲ ಉಂಟಾಗಿದೆ. ಬೀದರ್ ಪೊಲೀಸ್ ವರಿಷ್ಠಾಧಿಕಾರಿ ಅವರ ಹೇಳಿಕೆಯೇ ಸರಿಯೇ ಅಥವಾ ಕಲಬುರಗಿ ಪೊಲೀಸ್ ಆಯುಕ್ತರ ಹೇಳಿಕೆಯೇ ನಿಖರವೇ? ಎಂಬ ಪ್ರಶ್ನೆ ಎದುರಾಗಿದೆ.

ಜು.13ರ ಮಧ್ಯರಾತ್ರಿ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಜೈಲಿನ ಭದ್ರತಾ ಗೋಡೆ ಹಾರಿ ಪರಾರಿಯಾಗಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಉಳಿದ ಇಬ್ಬರು ಪರಾರಿಯಾಗಿರುವ ಕೈದಿಗಳ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.

ಪರಾರಿ ಆಗಿರುವ ಕೈದಿ ಸೆರೆ ಹಿಡಿದಿದ್ದು ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ. ಆದರೆ, ಪೊಲೀಸ್ ಕಮಿಷನರ್ ಅವರು ಅದೇ ಕೈದಿಯನ್ನು ಕಲಬುರಗಿ ನಗರದ ಕೈಗಾರಿಕಾ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಹೇಳಿಕೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ಅನುಮಾನ ಮೂಡಿಸಿದೆ. ಇಂತಹ ಹೇಳಿಕೆಯಿಂದಾಗಿ ಪೊಲೀಸ್ ಅಧಿಕಾರಿಗಳು ಗೃಹ ಸಚಿವರನ್ನು ಮೆಚ್ಚಿಸಲು ಹೊರಟಿದ್ದಾರೆಯೇ? ಎಂಬ ಪ್ರಶ್ನೆ ಕಾಡತೊಡಗಿದೆ.

-ಹಣಮಂತರಾಯ ಬಿ.ಪೂಜಾರಿ, ಸಾಮಾಜಿಕ ಕಾರ್ಯಕರ್ತ

Tags

KalaburagiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X