ಕನ್ನಡ ನಾಡು-ನುಡಿ ರಕ್ಷಣೆಗೆ ಇಂದಿನ ವಿದ್ಯಾರ್ಥಿ ಸಮೂಹ ಮುಂದಾಗಬೇಕಿದೆ : ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ: ನಾವು ಬದುಕುವ ನೆಲದ ಋಣದ ಮಕ್ಕಳಾಗಲು ನಾವೆಲ್ಲ ನಾಡು-ನುಡಿ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಅದನ್ನು ಸದಾ ಉಸಿರಾಗಿಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕರೆ ನೀಡಿದರು.
ನಗರದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಪ್ಪಾ ಪಬ್ಲಿಕ್ ಶಾಲಾ ಪ್ರಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆ ಶ್ರೀಮಂತಿಕೆಯಿoದ ಕೂಡಿದೆ. ಕಲೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಪರಂಪರೆಗಳನ್ನು ನಾಡಿನ ಹಿರಿಮೆಯ ಸಂಕೇತಗಳಾಗಿವೆ. ನಾವು ಆಚರಿಸುತ್ತಿರುವ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳಿಸದೆ ನಿತ್ಯೋತ್ಸವವಾಗಿ ಆಚರಿಸಬೇಕು ಎಂದ ಅವರು, ನಮ್ಮ ಶ್ರೀ ಶರಣಬಸವೇಶ್ವರ ಸಂಸ್ಥಾನ ಸ್ವಾತಂತ್ರ್ಯ ಪೂರ್ವದಿoದಲೂ ಕನ್ನಡ ನಾಡು-ನುಡಿಯ ಸೇವೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಡಾ. ಶರಣಬಸವಪ್ಪ ಅಪ್ಪಾ ಅವರ ಶ್ರಮ ಈ ನಾಡು ಸದಾ ಸ್ಮರಿಸುತ್ತದೆ ಎಂದು ಹೇಳಿದರು.
ಶಾಲೆಯ ಪ್ರಾಂಶುಪಾಲರಾದ ಶಂಕರಗೌಡ ಹೊಸಮನಿ ಮಾತನಾಡಿ, ಕನ್ನಡ ನಾಡು-ನುಡಿ ರಕ್ಷಣೆಗೆ ಇಂದಿನ ವಿದ್ಯಾರ್ಥಿ ಸಮೂಹ ಮುಂದಾಗಬೇಕಿದೆ. ಕನ್ನಡ ಭಾಷೆಯೇ ನಮ್ಮ ಉಸಿರು ಎಂಬ ತತ್ವವನ್ನು ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಕನ್ನಡ ಪರಂಪರೆಯನ್ನು ಬಿಂಬಿಸುವ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ಜರುಗುತ್ತಿವೆ ಎಂದರು.
ಉಪ ಪ್ರಾಂಶುಪಾಲರಾದ ವಿಜ್ಜು ಜೋಶ್, ಪರಿಸರ ಪ್ರೇಮಿ ಇಮ್ರಾನ್ ಸೌದಾಗರ್, ಮಂಜುನಾಥ ಪಾಟೀಲ, ಶಿವಲೀಲಾ ಪೂಜಾರಿ, ಆಶಾರಾಣಿ ಪಾಟೀಲ, ಆಶೀಷ್ ದೇಶಮಾನ್ಯೆ, ಮಹೇಶ ಪ್ರಮುಖರಾದ ಮಲ್ಲಿಕಾರ್ಜುನ ಬಿರಾದಾರ, ಪ್ರಭವ ಪಟ್ಟಣಕರ್, ಧರ್ಮಣ್ಣ ಎಚ್ ಧನ್ನಿ, ಎಂ.ಎನ್. ಸುಗಂಧಿ ಸೇರಿದಂತೆ ಅನೆಕರು ಉಪಸ್ಥಿತರಿದ್ದರು.







