Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಿ.ಇಡಿ ಫಲಿತಾಂಶ ಬಿಡುಗಡೆ...

ಕಲಬುರಗಿ | ಬಿ.ಇಡಿ ಫಲಿತಾಂಶ ಬಿಡುಗಡೆ ಮಾಡದಿದ್ದರೆ ಹೋರಾಟ

ವಾರ್ತಾಭಾರತಿವಾರ್ತಾಭಾರತಿ7 Oct 2025 7:13 PM IST
share
ಕಲಬುರಗಿ | ಬಿ.ಇಡಿ ಫಲಿತಾಂಶ ಬಿಡುಗಡೆ ಮಾಡದಿದ್ದರೆ ಹೋರಾಟ

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ಅಡಿಯಲ್ಲಿ ಕಳೆದ 2024ರ ಡಿಸೆಂಬರ್‌ನಲ್ಲಿ ಬಿ.ಇಡಿ ಕೋರ್ಸಿನ 4ನೇ ಸೆಮಿಸ್ಟ‌ರ್ ಪರೀಕ್ಷೆಗಳು ನಡೆದಿದ್ದವು. ಆದರೆ, ವಿವಿ ಈವರೆಗೂ ಫಲಿತಾಂಶ ಪ್ರಕಟಿಸಿಲ್ಲ. ಒಂದು ವೇಳೆ ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡದಿದ್ದರೆ ವಿವಿ ವಿರುದ್ಧ ಹೋರಾಟ ಕೈಗೊಳ್ಳಲಾಗುವುದು ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಗುಲ್ಬರ್ಗ ವಿವಿ ಆವರಣದಲ್ಲಿರುವ ಪರೀಕ್ಷಾ ಭವನದ ಎದುರು ಪ್ರತಿಭಟಿಸಿದ ವಿದ್ಯಾರ್ಥಿಗಳು, ಬಳಿಕ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್‌.ಜಿ.ಕಣ್ಣೂರ ಅವರಿಗೆ ಸಲ್ಲಿಸಿದರು.

ಪರೀಕ್ಷೆ ಮುಗಿದು ಒಂದು ವರ್ಷ ಕಳೆದುಹೋಗುತ್ತಿದೆ, ಫಲಿತಾಂಶ ಪ್ರಕಟ ಮಾಡದೆ ಇರುವುದರಿಂದ ನಮ್ಮ ಮುಂದಿನ ವಿದ್ಯಾಭ್ಯಾಸ, ಕೆಪಿಎಸ್ಸಿ, ಯುಪಿಎಸ್ಸಿ ಹಾಗೂ ಏಕಲವ್ಯ ಮಾದರಿಯ ವಸತಿ ಶಾಲೆಗಳ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಕಲವ್ಯ ಮಾದರಿ ಶಾಲೆಯ ಪರೀಕ್ಷೆಗೆ ಇದೇ ಅ.23 ಕೊನೆಯ ದಿನವಾಗಿದೆ. ಅಲ್ಲಿಯ ಒಳಗಡೆ ಫಲಿತಾಂಶ ಕೊಡದಿದ್ದರೆ ವಿವಿಗೆ ಘೇರಾವ್ ಹಾಕುವ ಮೂಲಕ ಕಲಬುರಗಿ ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಂತೋಷ ಕುಮಾರ ಎಸ್.ಪಿ. ಅವರು, ಗುಲ್ಬರ್ಗ ವಿ.ವಿಯ ಅಧಿಕಾರಿಗಳ ತಪ್ಪಿನಿಂದ ಬಿ.ಇಡಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವಿಳಂಬವಾಗಿದೆ. ಅಧಿಕಾರಿಗಳ ಭ್ರಷ್ಟಾಚಾರದ ಫಲವನ್ನು ವಿದ್ಯಾರ್ಥಿಗಳು ಅನುಭವಿಸುವಂತಾಗಿದೆ. ಹೈಕೋರ್ಟ್ ಕೂಡ ಎರಡು ವಾರಗಳಲ್ಲಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿದೆ. ಆದರೆ ಕೋರ್ಟಿನ ತೀರ್ಪಿಗೂ ಇವರು ತಲೆಕೆಡಿಸಿಕೊಳ್ಳುತ್ತಿಲ್ಲ. ನ್ಯಾಯಾಂಗ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಿದ್ಯಾರ್ಥಿ ಬಾಬುರಾವ್ ಮಾತನಾಡಿದರು.

ಈ ಸಂದರ್ಭದಲ್ಲಿ ರಾಚಯ್ಯ ಸ್ವಾಮಿ, ತೇಜಸ್, ಗಣೇಶ್, ಸಚೀನ್, ಸಿದ್ದು, ಸಿದ್ರಾಮ್, ಗುರುಕೀರಣ್, ಸಂಗಮೇಶ್, ಕರ್ಣ ಯಲಬತ್ತಿ, ಜೀವೇಶ ಗುಂಟಾಪೂರ, ಶಿವಪುತ್ರಪ್ಪ, ಪ್ರಕಾಶ್, ಶಿವಕುಮಾರ್ ಪೂಜಾರಿ, ಬಸವರಾಜ ವಚ್ಚೆ ಸೇರಿದಂತೆ ಮತ್ತಿತರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X