Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದಕ್ಷಿಣ ಭಾರತವನ್ನು ಸ್ವಾತಂತ್ರ್ಯಗೊಳಿಸಿದ...

ದಕ್ಷಿಣ ಭಾರತವನ್ನು ಸ್ವಾತಂತ್ರ್ಯಗೊಳಿಸಿದ ಬಹಮನಿ ಸಾಮ್ರಾಜ್ಯ: ಅರುಣ್ ಜೋಳದಕೂಡ್ಲಿಗಿ

ವಾರ್ತಾಭಾರತಿವಾರ್ತಾಭಾರತಿ26 July 2025 10:38 PM IST
share
ದಕ್ಷಿಣ ಭಾರತವನ್ನು ಸ್ವಾತಂತ್ರ್ಯಗೊಳಿಸಿದ ಬಹಮನಿ ಸಾಮ್ರಾಜ್ಯ: ಅರುಣ್ ಜೋಳದಕೂಡ್ಲಿಗಿ

ಕಲಬುರಗಿ: '1347 ಆಗಸ್ಟ್ 3 ರಲ್ಲಿ ಅಲ್ಲಾವುದ್ದೀನ್ ಹಸನ್ ಗಂಗೂ ಉತ್ತರದ ದೆಹಲಿ ಸುಲ್ತಾನರಿಂದ ಸ್ವತಂತ್ರ್ಯವಾಗಿ ಬಹಮನಿ ಸಾಮ್ರಾಜ್ಯವನ್ನು ಡೆಕ್ಕನ್ ನ (ದಕ್ಷಿಣ ಭಾರತದ ನೆಲೆಯಲ್ಲಿ) ಸ್ವತಂತ್ರ್ಯ ರಾಜ್ಯವಾಗಿಸಿದ್ದು ಒಂದರ್ಥದಲ್ಲಿ ಇದು ದಕ್ಷಿಣದ ಸ್ವಾತಂತ್ರ್ಯ ದಿನ, ಬಹಮನಿ ಸಾಮ್ರಾಜ್ಯ ಸ್ಥಾಪನೆಯಾದ ಈ ದಿನವನ್ನು ದಕ್ಷಿಣ ಭಾರತದ ಸ್ವಾತಂತ್ರ್ಯ ದಿನ ಎಂದು ಆಚರಿಸಬೇಕು' ಎಂದು ಲೇಖಕ, ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರಾದ ಅರುಣ್ ಜೋಳದಕೂಡ್ಲಿಗಿ ಅಭಿಪ್ರಾಯ ಪಟ್ಟರು.

ಕಲಬುರಗಿಯ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಮತ್ತು ಕಲಬುರಗಿಯ ವಿಭಾಗೀಯ ಪತ್ರಾಗಾರ ಕಛೇರಿ ಜಂಟಿಯಾಗಿ ಆಯೋಜಿಸಿದ್ದ 'ಬಹಮನಿ ಸಾಮ್ರಾಜ್ಯ: ಚರಿತ್ರೆ ಮತ್ತು ಸಂಸ್ಕೃತಿ' ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಡಾ.ಅರುಣ್ ಅವರು 'ಬಹಮನಿಗಳ ಕಾಲದ ಸೂಫಿಜಂ' ಕುರಿತಂತೆ ಮಾತನಾಡಿದರು.

ಭಾರತದ ವಿಶ್ವವಿದ್ಯಾಲಯಗಳಲ್ಲಿ 1992 ರಲ್ಲಿ ಬಾಬರಿ ಮಸೀದಿ ದ್ವಂಸದ ನಂತರ ಸೂಫಿಗಳು ಮತ್ತು ಸೂಫಿಜಂ ಬಗ್ಗೆ ಅಧ್ಯಯನ ಸಂಶೋಧನೆಗಳು ಹೆಚ್ಚಾಗಿವೆ.

ಇದೊಂದು ಕುತೂಹಲಕಾರಿ ವಿಷಯ. ಕೋಮುದ್ವೇಶ ಹೆಚ್ಚುತ್ತಿರುವಾಗ ಕೋಮು ಸಾಮರಸ್ಯದ ಅದರಲ್ಲೂ ಪ್ರೇಮತತ್ವದ ಸೂಫಿಜಂ ಬಗೆಗಿನ ಅಧ್ಯಯನಗಳು ಹೆಚ್ಚುತ್ತಿರುವುದು ಸೂಫಿತತ್ವದ ಸಮಕಾಲೀನ ಮಹತ್ವವನ್ನು ಮನಗಾಣಿಸುತ್ತಿದೆ. ಯುಜಿಸಿಯ ಶೋಧಗಂಗಾ ಅಂತರ್ಜಾಲ ತಾಣದಲ್ಲಿ ಸಿಗುವಂತೆ ಒಂದು ಸಾವಿರಕ್ಕಿಂತ ಹೆಚ್ಚು ಸೂಫಿಗಳ ಬಗ್ಗೆ ಸಂಶೋಧನೆಗಳು ನಡೆದಿವೆ' ಎಂದು ಸೂಫಿಜಂ ಅಧ್ಯಯನದ ಮಹತ್ವವನ್ನು ವಿವರಿಸಿದರು.

ಇದೀಗ ಉತ್ತರ ಭಾರತದವರ ಜತೆ ದಕ್ಷಿಣದವರ ಸಂಘರ್ಷ ಚೂರು ದೊಡ್ಡ ದನಿಯಲ್ಲಿ ನಡೆಯುತ್ತಿದೆ. ಈ ಬಗೆಯ ಉತ್ತರ-ದಕ್ಷಿಣದ ಸಂಘರ್ಷದ ಬಹು ಹಳೆಯ/ಹಿಂದಿನ ಕುರುಹೆಂದರೆ ಬಹಮನಿ ಸಾಮ್ರಾಜ್ಯದ ಸ್ಥಾಪನೆ. ಸ್ವತಃ ಹಸನ್ ಗಂಗೂ ಸೂಫಿ ದೀಕ್ಷೆ ಪಡೆದಿದ್ದು, ಸೂಫಿ ಸಂತ ಷೇಕ್ ಶಿರಾಜುದ್ದೀನ್ ಅವರ ಮಾರ್ಗದರ್ಶನದಲ್ಲಿ ಬಹಮನಿ ಸಾಮ್ರಾಜ್ಯವನ್ನು ಸ್ಥಾಪಿಸಿದ. ಬಹಮನಿಗಳು ಆಳಿದ 1347 ರಿಂದ 1527 ರ ತನಕದ 200 ವರ್ಷದ ಆಳ್ವಿಕೆಯನ್ನು ಸೂಫಿ ಸಂತರು ಗಾಢವಾಗಿ ಪ್ರಭಾವಿಸಿದ್ದಾರೆ. ಅಂತೆಯೇ ಸೂಫಿಗಳ ಮಾರ್ಗದರ್ಶನದಂತೆ ನೂತನ ದೊರೆಗಳ ಪಟ್ಟಾಭಿಷೇಕವೂ ಆಗುತ್ತಿತ್ತು. ಹೆಚ್.ಕೆ.ಶೇರ್ವಾನಿ ಎನ್ನುವ ಇತಿಹಾಸ ತಜ್ಞರು ಬಹಮನಿಗೆ ಇರಾನ್ ಮೂಲದ ನೆಲೆಯನ್ನೂ ಗುರುತಿಸುತ್ತಾರೆ. ಹೀಗೆ ಬಹಮನಿ ಕಾಲದ ಸೂಫಿಗಳ ಬಗ್ಗೆ ಈಗಾಗಲೆ ಸಾಕಷ್ಟು ಅಧ್ಯಯನಗಳು ನಡೆದಿದ್ದರೂ ಸ್ಥಳೀಯ ಕೊಡುಕೊಳೆಗಳ ಬಗೆಗೆ ರಹಮತ್ ತರೀಕೆರೆಯವರು ಕರ್ನಾಟಕದ ಸೂಫಿಗಳು ಕೃತಿಯಲ್ಲಿ ಶೋಧಿಸಿದಂತೆ ಮತ್ತಷ್ಟು ಕೆಲಸ ಮಾಡುವ ಅಗತ್ಯವಿದೆ' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X