Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮೃತ್ಯುಕೂಪಕ್ಕೆ ಆಹ್ವಾನಿಸುತ್ತಿರುವ...

ಮೃತ್ಯುಕೂಪಕ್ಕೆ ಆಹ್ವಾನಿಸುತ್ತಿರುವ ಡಿ.ಸಿ ಕಚೇರಿ ಪ್ರವೇಶದ್ವಾರ

► ಕುಸಿದು ಬೀಳುವ ಹಂತದಲ್ಲಿ ಕಮಾನು ► ಭಯಭೀತಿಯಲ್ಲಿ ಸಾರ್ವಜನಿಕರು

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ9 Jan 2025 6:15 PM IST
share
ಮೃತ್ಯುಕೂಪಕ್ಕೆ ಆಹ್ವಾನಿಸುತ್ತಿರುವ ಡಿ.ಸಿ ಕಚೇರಿ ಪ್ರವೇಶದ್ವಾರ

ಕಲಬುರಗಿ: ಜಿಲ್ಲಾಡಳಿತ ಕಚೇರಿಯ ಎದುರಿನಲ್ಲಿ ತಲೆ ಎತ್ತಿರುವ ಮುಖ್ಯ ಪ್ರವೇಶದ್ವಾರದ ಮೇಲ್ಬಾಗದ ಕಟ್ಟಡ ಕುಸಿಯುವ ಭೀತಿಯಲ್ಲಿವೆ. ಸುಸಜ್ಜಿತ ಕಟ್ಟಡದಿಂದ ಗಮನ ಸೆಳೆಯುವ ಜಿಲ್ಲಾಡಳಿತದ ಕಚೇರಿಗೆ ಹೊರಗಿನ ಕಮಾನುಗಳು ಮೃತ್ಯು ಕೂಪಕ್ಕೆ ಆಹ್ವಾನಿಸುತ್ತಿವೆ.

ಸರ್ದಾರ್ ವಲ್ಲಭ ಭಾಯಿ ಪಟೇಲ್ ವೃತ್ತದಿಂದ ಸೂಪರ್ ಮಾರ್ಕೆಟ್ ಗೆ ಹೋಗುವ ಮುಖ್ಯ ರಸ್ತೆಯಲ್ಲಿರುವ 'ಮಿನಿ ವಿಧಾನಸೌಧ' ಎಂದು ಕರೆಯಲ್ಪಡುವ ಜಿಲ್ಲಾಡಳಿತ ಕಚೇರಿಗೆ ದಿನನಿತ್ಯ ಸಾವಿರಾರು ಜನರು ಬರುತ್ತಾರೆ. ಅಲ್ಲದೇ ಇಲ್ಲಿ ಪ್ರತೀ ದಿನ ಒಂದಿಲ್ಲೊಂದು ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಈ ಪ್ರದೇಶವು ಯಾವಾಗಲೂ ಜನಜಂಗುಳಿಯಿಂದ ತುಂಬಿರುತ್ತದೆ. ಕಚೇರಿಯ ಒಳಗಡೆ, ಹೊರಗಡೆಯೂ ಜನರಿಂದ ಆವರಿಸಿರುತ್ತದೆ.

ಈ ಕಮಾನುಗಳ ಪಕ್ಕದಲ್ಲೇ ನಗರ ಬಸ್ ನಿಲ್ದಾಣವೂ ಇರುವುದರಿಂದ ಬಸ್, ಆಟೊ ಮತ್ತಿತರ ವಾಹನಗಳು ಸೇರಿದಂತೆ ಪ್ರಯಾಣಿಕರು ಸಹ ಇಲ್ಲೇ ಹೆಚ್ಚಾಗಿ ಕಾಣಿಸುತ್ತಾರೆ. ಇಂತಹ ಜನಭರಿತ ಪ್ರದೇಶವಾದ ಡಿ.ಸಿ ಕಚೇರಿಯ ಪ್ರವೇಶ ದ್ವಾರಗಳ ಮೇಲ್ಬಾಗದ ಕಮಾನುಗಳು ಕುಸಿಯುವ ಹಂತದಲ್ಲಿವೆ.

ಹಾಗಾಗಿ ಕಮಾನುಗಳ ಹೊರ, ಒಳಭಾಗದಲ್ಲಿ ನಿಲ್ಲುವುದಕ್ಕೆ ಸಾರ್ವಜನಿಕರು ಇದೀಗ ಭಯ ಪಡುತ್ತಿದ್ದಾರೆ. ನಿಝಾಮರ ಕಾಲದ ಪ್ರವೇಶ ದ್ವಾರ: ಈಗಿ ರುವ ಜಿಲ್ಲಾಡಳಿತ ಕಚೇರಿಯ ಹೊರಭಾಗದ ಪ್ರವೇಶ ದ್ವಾರಗಳು ನಿಝಾಮರ ಕಾಲದಲ್ಲಿ ಕಟ್ಟಿರುವ ಕಟ್ಟಡವಾಗಿದೆ. ಸುಮಾರು 150 ವರ್ಷಕ್ಕೂ ಹಳೆಯ ಕಟ್ಟಡವಾಗಿದೆ ಎಂದು ಇತಿಹಾಸಕಾರರು ಹೇಳುತ್ತಾರೆ. ಆಗಿನ ಕಾಲದಲ್ಲಿ ನಿರ್ಮಿಸಿರುವ ಈ ಕಟ್ಟಡವು ಶಿಥಿಲಗೊಳ್ಳದೆ ಗಟ್ಟಿಯಾಗಿ ಇತ್ತು. ಹಾಗಾಗಿ ಅದನ್ನು ತೆರವುಗೊಳಿಸದೆ, ಕಟ್ಟಡವನ್ನು ಇಂದಿಗೂ ಕಾಪಾಡಿಕೊಂಡು ಬರಲಾಗಿದೆ.

ಆಕರ್ಷಕ ಕಮಾನುಗಳ ಮೂಲಕ ಗಮನ ಸೆಳೆಯುವ ಈ ಪುರಾತನ ಕಟ್ಟಡದ ಮೇಲ್ಬಾಗದಲ್ಲಿ ಗಿಡ, ಗಂಟಿ, ಹುಲ್ಲು ಬೆಳೆದಿರುವುದರಿಂದ ಅದಕ್ಕೆ ಅಡಕವಾಗಿ ನಿಂತಿರುವ ಕಲ್ಲುಗಳು ಉರುಳಿ ಬೀಳುವ ಸಂಭವದಲ್ಲಿವೆ. ಕುಸಿಯುವ ಭೀತಿಯಲ್ಲಿರುವುದರಿಂದ ಬೇಗನೆ ದುರಸ್ತಿ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಡಿ.ಸಿ ಕಚೇರಿ ಮುಖ್ಯದ್ವಾರದ ಬಲಭಾಗ ಮತ್ತು ಎಡಭಾಗದ ಮೇಲಿನ ಕಲ್ಲುಗಳು ಯಾವಾಗ ಬೇಕಾದರೂ ಕುಸಿದು ಬೀಳಬಹುದು. ಹಾಗಾಗಿ ಅಲ್ಲಿಗೆ ಭೇಟಿ ನೀಡುವವರು ಜಾಗರೂಕರಾಗಿರಬೇಕಿದೆ. ಯಾವುದೇ ಅನಾಹುತ ಸಂಭವಿಸುವ ಮುನ್ನ ಸಂಬಂಧಿತ ಅಧಿಕಾರಿಗಳು ಪುರಾತನ ಪ್ರವೇಶ ದ್ವಾರದ ತುರ್ತಾಗಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.

ಡಾ.ರೆಹಮಾನ್ ಪಟೇಲ್, ಕಲಾವಿದ

ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಯುವ ವೇಳೆಯಲ್ಲೇ ಪ್ರವೇಶ ದ್ವಾರದ ಮೇಲೆ ಬೆಳೆದಿರುವ ಕಸ, ಕಡ್ಡಿಗಳನ್ನು ತೆಗೆದು ಶುಚಿಗೊಳಿಸಲಾಗಿ ದೆ. ಮತ್ತೆ ಕಸ ಬೆಳೆದಿದ್ದಲ್ಲಿ ಅದನ್ನು ಗಮನಿಸಿ, ಕಟ್ಟಡದ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು.

ಬಿ.ಫೌಝಿಯಾ ತರನ್ನುಮ್, ಜಿಲ್ಲಾಧಿಕಾರಿ

ಆಗಾಗ ಜಿಲ್ಲಾಡಳಿತ ಕಚೇರಿಗೆ ಬರುತ್ತಿರುತ್ತೇನೆ. ಕಮಾನುಗಳ ಮೇಲಿನ ಕಲ್ಲುಗಳು ಒಂದೇ ಕಡೆ ವಾಲಿವೆ. ಇಲ್ಲಿ ನಿಲ್ಲುವುದಕ್ಕೆ ಭಯವಾಗುತ್ತಿದೆ. ಅಧಿಕಾರಿಗಳು ಇದನ್ನು ಬೇಗನೆ ಸರಿಪಡಿಸಬೇಕು. –

ಪ್ರಶಾಂತ್ ಲೋಖಂಡೆ, ಸ್ಥಳೀಯರು

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X