Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗಡಿನಾಡಿನ ಜನರ ನಿಜವಾದ ಸಾರಥಿಯಾಗಿ...

ಗಡಿನಾಡಿನ ಜನರ ನಿಜವಾದ ಸಾರಥಿಯಾಗಿ ವಾರ್ತಾಭಾರತಿ ಪತ್ರಿಕೆ ಕಾರ್ಯನಿರ್ವಹಿಸಲಿದೆ : ರಮೇಶ್ ಲೋಹಾರ್

ವಾರ್ತಾಭಾರತಿವಾರ್ತಾಭಾರತಿ25 Dec 2025 9:51 PM IST
share
ಗಡಿನಾಡಿನ ಜನರ ನಿಜವಾದ ಸಾರಥಿಯಾಗಿ ವಾರ್ತಾಭಾರತಿ ಪತ್ರಿಕೆ ಕಾರ್ಯನಿರ್ವಹಿಸಲಿದೆ : ರಮೇಶ್ ಲೋಹಾರ್
ಆಳಂದದಲ್ಲಿ ‘ವಾರ್ತಾಭಾರತಿ’ ಪತ್ರಿಕೆ ಲೋಕಾರ್ಪಣೆ

ಆಳಂದ: ರಾಜ್ಯದ ಗಡಿಭಾಗದ ಆಳಂದ ಪಟ್ಟಣದಲ್ಲಿ ‘ವಾರ್ತಾಭಾರತಿ’ ದಿನಪತ್ರಿಕೆಯ ಲೋಕಾರ್ಪಣೆ ಕಾರ್ಯಕ್ರಮವು ಗುರುವಾರ ನಡೆಯಿತು.

ಕೃಷಿಕ ಸಮಾಜದ ಅಧ್ಯಕ್ಷರು, ಕಾಂಗ್ರೆಸ್ ಯುವ ಮುಖಂಡ ಗುರುಶರಣ ಪಾಟೀಲ್ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷರು, ಹೋರಾಟಗಾರ ರಮೇಶ್ ಲೋಹಾರ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಧ್ಯಮಗಳ ಪಾತ್ರ, ಸವಾಲುಗಳು ಹಾಗೂ ಭವಿಷ್ಯದ ಕುರಿತು ಅರ್ಥಪೂರ್ಣ ಚರ್ಚೆ ನಡೆಯಿತು.

ಹೋರಾಟಗಾರ ರಮೇಶ್ ಲೋಹಾರ್ ಮಾತನಾಡಿ, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಸ್ತಂಭವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಲವನ್ನು ನೆನಪಿಸಿದರು. “ಒಂದು ಕಾಲದಲ್ಲಿ ಮಾಧ್ಯಮಗಳು ತಪ್ಪುಗಳನ್ನು ಹುಡುಕಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದವು. ಆದರೆ ಇಂದು ಮಾಧ್ಯಮಗಳು ಆಳುವ ಸರ್ಕಾರದ ಕೈಗೊಂಬೆಯಾಗಿ ಮಾರ್ಪಡುತ್ತಿವೆಯೇ ಎಂಬ ಚರ್ಚೆ ನಡೆಯುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

‘ವಾರ್ತಾಭಾರತಿ’ ನಿರ್ಭಯ ಹಾಗೂ ನಿಷ್ಪಕ್ಷಪಾತವಾಗಿ ಜನಪರ ಮಾಧ್ಯಮವಾಗಿ ಕಾರ್ಯನಿರ್ವಹಿಸಲಿದೆ. ಗಡಿಭಾಗದ ಗ್ರಾಮೀಣ ಸಮಸ್ಯೆಗಳು, ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಈ ಪತ್ರಿಕೆ ವಿಶೇಷ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಲೋಕಾರ್ಪಣೆಯ ನಂತರ ಮಾತನಾಡಿದ ಗುರುಶರಣ ಪಾಟೀಲ್, ಮಾಧ್ಯಮಗಳ ಮಹತ್ವವನ್ನು ಒತ್ತಿ ಹೇಳಿದರು. ಅನೇಕ ಹಗರಣಗಳು ಮಾಧ್ಯಮಗಳ ಮೂಲಕವೇ ಬೆಳಕಿಗೆ ಬಂದಿವೆ. ಹೋರಾಟಗಳು ಮತ್ತು ಹೋರಾಟಗಾರರನ್ನು ಜನಸಾಮಾನ್ಯರ ಗಮನಕ್ಕೆ ತಂದದ್ದು ಪತ್ರಿಕೆಗಳೇ. ಶಾಸಕಾಂಗ ಮತ್ತು ಕಾರ್ಯಾಂಗಗಳ ಲೋಪಗಳನ್ನು ಎತ್ತಿ ತೋರಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ” ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೆಲವು ಪತ್ರಕರ್ತರು ಗುರುತಿನ ಚೀಟಿ ದುರುಪಯೋಗಪಡಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ‘ವಾರ್ತಾಭಾರತಿ’ ಇಂತಹ ಪ್ರವೃತ್ತಿಗಳಿಗೆ ತಲೆಬಾಗದ ಸಮಾಜಮುಖಿ ಪತ್ರಿಕೆಯಾಗಿ ಹೊರಹೊಮ್ಮುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು. ಗಡಿನಾಡಿನ ಜನರ ನಿಜವಾದ ಸಾರಥಿಯಾಗಿ ವಾರ್ತಾಭಾರತಿ ಪತ್ರಿಕೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಮಹಾದೇವ ವಡಗಾಂವ್, ರಫೀಕ್ ನಾಮ್ದಾರ್, ಡಾ.ಮೋನಪ್ಪ ಸುತಾರ್, ಅಪ್ಪಾಸಾಬ್ ಕಲ್ಯಾಣಿ, ತುಕಾಣಿ ಡಾ.ಅವಿನಾಶ್, ದೇವನೂರು ಜಗದೀಶ್ ಕೋರೆ ಸೇರಿದಂತೆ ಹಲವಾರು ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

ವಾರ್ತಾಭಾರತಿಯ ನಿಯೋಜಿತ ಪತ್ರಕರ್ತ ಮಹೇಶ್ ಸಾಕ್ರೆ ಅವರು ಎಲ್ಲರನ್ನು ಸ್ವಾಗತಿಸಿ, ಪತ್ರಿಕೆಯ ಗುರಿ ಮತ್ತು ಉದ್ದೇಶಗಳನ್ನು ವಿವರಿಸಿದರು.

‘ವಾರ್ತಾಭಾರತಿ’ ಪತ್ರಿಕೆಯ ಲೋಕಾರ್ಪಣೆಯು ಆಳಂದ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಾಧ್ಯಮ ಚರ್ಚೆಗೆ ಹೊಸ ಚೈತನ್ಯ ನೀಡಿದ್ದು, ಗಡಿನಾಡಿನ ಸಮಸ್ಯೆಗಳನ್ನು ಜನರ ಗಮನಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X