ಮತದಾರರ ನೋಂದಣಿಗೆ ಮುತುವರ್ಜಿ ವಹಿಸಿ: ಜಿ.ಪಂ. ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಮತದಾರರ ನೋಂದಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನಿರೀಕ್ಷಿತ ಮಟ್ಟದಲ್ಲಿ ನೋಂದಣೆಗೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಹೇಳಿದರು.
ಅವರು ಇಂದು ಕೆ.ಬಿ.ಎನ್. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಕಲಬುರಗಿ ಮತದಾರರ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಅರ್ಹ ಮತದಾರರ ನೋಂದಣೆಯನ್ನು ಮಾಡಲು ಅಕ್ಟೋಬರ್ 30 ಹಾಗೂ ನವೆಂಬರ್ 03 ರಂದು ಮತದಾರರು ಮಿಂಚಿನ ನೋಂದಣಿ ಅಭಿಯಾನ ಆಯೋಜಿಸಲಾಗಿದೆ.
01-11-2025ಕ್ಕೆ ಅರ್ಹತಾ ದಿನಾಂಕಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕ್ಷೇತದಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕ್ಷೇತ್ರದಾದ್ಯಂತ ನಡೆದಿದ್ದು, ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದೆ. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂದರು.
ಅಭಿಯಾನದ ದಿನಗಳಂದು ತಮ್ಮ ಕ್ಷೇತ್ರವ್ಯಾಪ್ತಿಗೆ ಒಳಪಡುವ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳ ಸೇವೆಯನ್ನು ಪಡೆದು ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರ ಕಚೇರಿ ಮುಖ್ಯಸ್ಥರ ಸಂಪರ್ಕಿಸಿ ನಿಗದಿಪಡಿಸಿದ ಸಮಯದೊಳಗೆ ನಿಯಮಾನುಸಾರ ನಮೂನೆ -19 ರ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಕಲಬುರಗಿ ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರ ಕಚೇರಿಗೆ ಸಲ್ಲಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾಸಂಸ್ಥೆ, ವಿಶ್ವವಿದ್ಯಾಲಯಗಳಿಗೆ ಈಗಾಗಲೇ ನಮೂನೆ 19 ಅರ್ಜಿಗಳನ್ನು ವಿತರಣೆ ಮಾಡಲಾಗಿದೆ.
ಅಭಿಯಾನದಲ್ಲಿ ಎಲ್ಲ ಅರ್ಹ ಶಿಕ್ಷಕರು ಹಾಗೂ ಡೀನ್ಗಳು ನಮೂನೆ 19ರ ಅರ್ಜಿ ಪಡೆದುಕೊಂಡರು. ಅಭಿಯಾನದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಸೈಯದ್ ಪಟೇಲ್ ಸೇರಿದಂತೆ ಶಾಲಾ ಶಿಕ್ಷಕರು, ಕಾಲೇಜಿನ ಡೀನರು ಭಾಗವಹಿಸಿದರು.







