Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಸಣ ಕಾರ್ಮಿಕರಿಗೆ, ದೇವದಾಸಿ ಮಹಿಳೆಯರಿಗೆ...

ಮಸಣ ಕಾರ್ಮಿಕರಿಗೆ, ದೇವದಾಸಿ ಮಹಿಳೆಯರಿಗೆ ಪಿಂಚಣಿಗೆ ಆಗ್ರಹಿಸಿ ಜ.22ಕ್ಕೆ ವಿಧಾನಸೌಧ ಚಲೋ : ಸುಧಾಮ ಧನ್ನಿ

ವಾರ್ತಾಭಾರತಿವಾರ್ತಾಭಾರತಿ20 Jan 2025 9:32 PM IST
share
Photo of Sudham Dhanni

ಕಲಬುರಗಿ : ಮಸಣ ಕಾರ್ಮಿಕರು, ದೇವದಾಸಿ ಮಹಿಳೆಯರ ಗಣತಿ ಮಾಡಿ ಪಿಂಚಣಿ, ನಿರಾಶ್ರಿತ ದಲಿತರಿಗೆ ಮನೆ ನಿವೇಶನ ನೀಡಲು, ಭೂ ಒಡೆತನ ಯೋಜನೆ ಜಾರಿಗಾಗಿ, ದಲಿತ ಬಡ ರೈತರ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೊರವೆಲ್ ಮಂಜೂರು ಮಾಡಬೇಕೆಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ-ಬೆಂಗಳೂರು ನೇತೃತ್ವದಲ್ಲಿ ಜ.22 ರಂದು ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಸುಧಾಮ ಧನ್ನಿ ಅವರು ಹೇಳಿದರು.

ಕಳೆದ 10 ವರ್ಷಗಳಲ್ಲಿ ದಲಿತರಿಗಾಗಿ ಖರ್ಚು ಮಾಡಿದ ಎಸ್.ಸಿ.ಪಿ./ಟಿ.ಎಸ್.ಪಿ. ಹಣ 2 ಲಕ್ಷ 75 ಸಾವಿರ ಕೋಟಿ ರೂ. ಗಳ ಬಗ್ಗೆ ವಿಧಾನಸಭೆ ವಿಶೇಷ ಅಧಿವೇಶನ ಕರೆದು ಚರ್ಚೆ ನಡೆಸಬೇಕು. ಇಷ್ಟು ಹಣ ಖರ್ಚು ಮಾಡಿದರೂ ದಲಿತರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯವಾಗಿಲ್ಲ. ದಲಿತರ ಮಾನವ ಅಭಿವೃದ್ಧಿ ಮೇಲ್ವರ್ಗದವರ ಸಮಾನವಾಗಿದೆಯೇ? ಎಂಬುದರ ಬಗ್ಗೆ ಚರ್ಚೆ ನಡೆಸಬೇಕೆಂದು ಆಗ್ರಹಿಸಿ ಈ ವಿಧಾನಸೌಧ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕಾಗಿದೆ.

ರಾಜ್ಯದಲ್ಲಿ ಶೇ.24.71 ರಷ್ಟು ದಲಿತರಿದ್ದಾರೆ. ಇವರು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಸಬಲರನ್ನಾಗಿ ಮಾಡಲು ಸಾಧ್ಯವಾಗಿಲ್ಲ. ಮುಂಬರುವ ಬಜೆಟ್ನಲ್ಲಿ ಆದ್ಯತೆಯ ಮೇರೆಗೆ ದಲಿತರ ಶ್ರೇಯೋಭಿವೃದ್ಧಿಗೆ ಹಣ ಮೀಸಲಿಡಬೇಕೆಂದು ಈ ವಿಧಾನಸೌಧ ಚಲೋ ಮೂಲಕ ಒತ್ತಾಯಿಸಲಾಗುವುದು.

ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯ ಹಣ ದುರ್ಬಳಕೆ ಮಾಡಕೂಡದು. ದಲಿತ ಕುಟುಂಬದ ಫಲಾನುಭವಿಗಳಿಗೆ ನೇರವಾಗಿ ತಲುಪಿಸಬೇಕು, ದಲಿತರಿಗಾಗಿ ಮಸಣ ಭೂಮಿ, ಸಮುದಾಯ ಭವನ ಪ್ರತಿ ಗ್ರಾಮಕ್ಕೆ ಮಂಜೂರು ಮಾಡಬೇಕು. ದಲಿತರ ಮೇಲಿನ ದೌರ್ಜನ್ಯ ವಿಚಾರಣೆಗೆ ವಿಶೇಷ ತ್ವರಿತ ನ್ಯಾಯಾಲಯ ಅಸ್ತಿತ್ವಕ್ಕೆ ತರಬೇಕೆಂದು ಈ ವಿಧಾನಸೌಧ ಚಲೋ ಮುಖಾಂತರ ಆಗ್ರಹಿಸಲಾಗುವುದು.

ಜ.22 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಿಂದ ಹೊರಡುವ ಈ ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ದಲಿತರು- ಪ್ರಗತಿಪರರು, ಮಸಣ ಕಾರ್ಮಿಕರು, ದೇವದಾಸಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಧನ್ನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದರಾಮ ಹರವಾಳ, ಪಾಂಡುರಂಗ ಮಾವಿನಕರ, ಪೀರಪ್ಪ ಯಾತನೂರ, ಚಂದಮ್ಮ ಗೋಳಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X