Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಉದ್ಯೋಗ ಖಾತರಿ ಯೋಜನೆಯಡಿ ಮಾನವ...

ವಾಡಿ | ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳು 125ಕ್ಕೆ ಹೆಚ್ಚಳ: ಪಿಡಿಒ

ವಾರ್ತಾಭಾರತಿವಾರ್ತಾಭಾರತಿ22 Aug 2026 7:52 PM IST
share
ವಾಡಿ | ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳು 125ಕ್ಕೆ ಹೆಚ್ಚಳ: ಪಿಡಿಒ

ವಾಡಿ: ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿಜಿ–ರಾಮ್‌ಜಿ) ಯೋಜನೆಯಡಿ ಕಾರ್ಮಿಕರಿಗೆ ಒದಗಿಸುವ ಮಾನವ ದಿನಗಳನ್ನು 125ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಚೀಟಿ ಹೊಂದಿರದ ಅರ್ಹ ಕಾರ್ಮಿಕರು ಹೊಸದಾಗಿ ಉದ್ಯೋಗ ಚೀಟಿ ಪಡೆಯಬೇಕು ಎಂದು ಇಂಗಳಗಿ ಗ್ರಾಮ ಪಂಚಾಯಿತಿ ಪಿಡಿಒ ಕಲ್ಯಾಣ ಕುಮಾರ ತಿಳಿಸಿದರು.

ಪಟ್ಟಣ ಸಮೀಪದ ಇಂಗಳಗಿ ಗ್ರಾಮದಲ್ಲಿ ನಡೆದ ವಿಬಿಜಿ–ರಾಮ್‌ಜಿ ರೋಜಗಾರ ಹಾಗೂ ಭಾರತ್ ಜೋಡೋ ಯುವ ಸಂಘದ ವಿಶೇಷ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಯಡಿ ಕಾರ್ಮಿಕರಿಗೆ ದಿನಕ್ಕೆ 382 ರೂ. ರಂತೆ ಕೂಲಿ ಪಾವತಿಸಲಾಗುತ್ತದೆ. ಪುರುಷರು ಮತ್ತು ಮಹಿಳೆಯರಿಗೆ ಯಾವುದೇ ಲಿಂಗ ತಾರತಮ್ಯವಿಲ್ಲದೆ ಸಮಾನ ವೇತನ ನೀಡಲಾಗುತ್ತದೆ. ಉದ್ಯೋಗ ಚೀಟಿ ಹೊಂದಿರದ ಅರ್ಹರು ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ ಉದ್ಯೋಗ ಭದ್ರತಾ ಚೀಟಿ ಪಡೆಯಬಹುದು ಎಂದು ಹೇಳಿದರು.

ವಾರಾಂತ್ಯದಲ್ಲಿ ಕೂಲಿ ಪಾವತಿ ಕಡ್ಡಾಯ :

ಯೋಜನೆಯಡಿ ಕಾರ್ಮಿಕರ ದಿನಗೂಲಿ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40ರ ಅನುಪಾತದಲ್ಲಿ ಭರಿಸಲಿವೆ. ವಾರಾಂತ್ಯದಲ್ಲಿ ಕೂಲಿ ಪಾವತಿಸುವುದು ಕಡ್ಡಾಯವಾಗಿದೆ. ಅರ್ಹ ವ್ಯಕ್ತಿಗೆ ಉದ್ಯೋಗ ನೀಡಲು ಸಾಧ್ಯವಾಗದಿದ್ದರೆ ನಿರುದ್ಯೋಗ ಭತ್ಯೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ ಎಂದು ಕಲ್ಯಾಣ ಕುಮಾರ ವಿವರಿಸಿದರು.

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ :

16ರಿಂದ 35 ವರ್ಷದೊಳಗಿನ ಅರ್ಹ ಯುವಕರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಭಾರತ್ ಜೋಡೋ ಯುವ ಸಂಘಕ್ಕೆ ಸದಸ್ಯತ್ವ ಪಡೆಯಬಹುದು. ಗ್ರಾಮದಲ್ಲಿ ಸಂಘ ರಚನೆಯಾದ ಬಳಿಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸರ್ಕಾರದಿಂದ ವಾರ್ಷಿಕ 10 ಲಕ್ಷ ರೂ. ವರೆಗೆ ಅನುದಾನ ದೊರೆಯಲಿದೆ ಎಂದು ಪಿಡಿಒ ಮಾಹಿತಿ ನೀಡಿದರು.

ಕರ್ನಾಟಕ ಭಾರತ್ ಜೋಡೋ ಯುವ ಸಂಘದ ಸದಸ್ಯತ್ವಕ್ಕೆ 16ರಿಂದ 35 ವರ್ಷ ವಯೋಮಿತಿಯ 100 ಯುವಕರಿಗೆ ಅವಕಾಶವಿದೆ. ಯುವಕರು ಸ್ವಯಂಪ್ರೇರಿತವಾಗಿ ನೋಂದಾಯಿಸಿಕೊಳ್ಳಬಹುದು. ಸಂಘವು ಕಾಯ್ದೆಯನ್ವಯ ರಚನೆಯಾಗಿ ಸರ್ಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಂಗಮೇಶ ಹಿರೇಮಠ, ಗಣಕಯಂತ್ರ ಸಿಬ್ಬಂದಿ ರಾಜು ಸಂಕಾ, ಸಿದ್ರಾಮಪ್ಪ ವಗ್ಗನ್, ಕಾಯಕ ಮಿತ್ರ ಗಿಡ್ಡಮ್ಮ ಪವಾರ್, ಮಲ್ಲಪ್ಪ ನಾಟೀಕಾರ್, ಕಾಯಕ ಬಂಧು ಅಶೋಕ ರಾಠೋಡ, ಖದೀರ್ ಪಾಶಾ, ಮಮತಾ ನಾಟೀಕಾರ್, ಶಿಲ್ಪಾ ತೆಳಗೆರಿ, ನಿಂಗಪ್ಪ ಹೊನಗುಂಟಿ, ಮಹೆಬೂಬ್, ಶೋಭಾ ನಾಟೀಕಾರ್, ಶಿವಕುಮಾರ್ ತೆಳಗೆರಿ, ವಿಜಯಲತಾ ಸಂಕಾ, ಸಾವಿತ್ರಿ ಸೇರಿದಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X