Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಸೌಹಾರ್ದದ ಉರೂಸ್, ಜಾತ್ರಾ...

ವಾಡಿ | ಸೌಹಾರ್ದದ ಉರೂಸ್, ಜಾತ್ರಾ ಸಂಭ್ರಮ : ಗಂಧ ಮೆರವಣಿಗೆಗೆ ಭಕ್ತರ ಮಹಾಸಾಗರ

ವಾರ್ತಾಭಾರತಿವಾರ್ತಾಭಾರತಿ3 April 2026 5:50 PM IST
share
ವಾಡಿ | ಸೌಹಾರ್ದದ ಉರೂಸ್, ಜಾತ್ರಾ ಸಂಭ್ರಮ : ಗಂಧ ಮೆರವಣಿಗೆಗೆ ಭಕ್ತರ ಮಹಾಸಾಗರ

ವಾಡಿ : ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾಗಿರುವ ಲಾಡ್ಲಾಪುರ ಗ್ರಾಮದ ಪ್ರಸಿದ್ಧ ಹಾಜಿಸರ್ವರ್ (ಆದಿಶರಣ) ಜಾತ್ರೆಯ ಅಂಗವಾಗಿ ಗುರುವಾರ ರಾತ್ರಿ ಜರುಗಿದ ಗಂಧದ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು.

ಜಾತ್ರೆಯ ಪ್ರಮುಖ ಆಕರ್ಷಣೆಯಾದ ಗಂಧೋತ್ಸವ ಮೆರವಣಿಗೆ ರಾತ್ರಿ 11 ಗಂಟೆಗೆ ಆರಂಭಗೊಂಡು ಶುಕ್ರವಾರ ಬೆಳಿಗ್ಗೆ 5 ಗಂಟೆಯವರೆಗೆ ನಡೆಯಿತು. ಮೆರವಣಿಗೆಯುದ್ದಕ್ಕೂ ಭಕ್ತರು “ಹಾಜಿಸರ್ವರ್ ಕೀ ದೋಸ್ತಾರ ಹೋದ್ದಿನ್” ಎಂಬ ಜಯಘೋಷಗಳನ್ನು ಮೊಳಗಿಸಿದರು.

ಪೂಜಾರಿಗಳ ಮನೆಯಿಂದ ಗಂಧ ಲೇಪಿತ ಕಳಸಗಳನ್ನು ತಂದು ಗ್ರಾಮದ ನಡುಗಡ್ಡೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಬಳಿಕ ಹಿಂದೂ ಪೂಜಾರಿಗಳು ಹಾಗೂ ಮುಸ್ಲಿಂ ಮೌಲ್ವಿಗಳು ತಮ್ಮ ತಮ್ಮ ಧರ್ಮಾನುಸಾರ ಪೂಜೆ ಸಲ್ಲಿಸಿದರು. ವಾದ್ಯಮೇಳಗಳೊಂದಿಗೆ ಬಂದ ಭಕ್ತರು ಪುಷ್ಪ, ಛತ್ರಿ, ಚಾಮರ ಹಾಗೂ ಬೆಳ್ಳಿ ಕುದುರೆಗಳನ್ನು ಪಂಚಕಳಸಗಳಿಗೆ ಅರ್ಪಿಸಿದರು. ಹೂಗಾರರು ಮತ್ತು ಮುಸ್ಲಿಂ ಸಮುದಾಯದವರು ಸೇರಿ ಭಕ್ತರ ಹರಕೆಯನ್ನು ಸ್ವೀಕರಿಸಿದರು.

ರಾತ್ರಿ ಗಂಧದ ಮೆರವಣಿಗೆಗೆ ಭಕ್ತರು ದೀಪದ ಎಣ್ಣೆ ಸುರಿದು ಬೆಳಕು ನೀಡಿದರು. ಬಳಿಕ ಮುಸ್ಲಿಂರು ಧರ್ಮಪಠಣ ಮಾಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಪ್ರಮುಖ ಬೀದಿಗಳ ಮೂಲಕ ಸಾಗಿದ ಮೆರವಣಿಗೆ ಬೆಳಿಗ್ಗೆ ದರ್ಗಾ ತಲುಪಿತು.

ಶುಕ್ರವಾರ ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಗುಡ್ಡದತ್ತ ಹರಿದುಬಂದರು. ಹಾಜಿಸರ್ವರ್ ದೇವರ ಕೃಪೆಗೆ ಪಾತ್ರರಾಗಲು ಹಿಂದೂ-ಮುಸ್ಲಿಂ ಸಮುದಾಯದವರು ವರ್ಷಗಳಿಂದ ಈ ಜಾತ್ರೆಯನ್ನು ಆಚರಿಸುತ್ತಿದ್ದು, ಇದು ಸೌಹಾರ್ದದ ಮಾದರಿ ಉತ್ಸವವಾಗಿದೆ.

ಟ್ರ್ಯಾಕ್ಟರ್ ಹಾಗೂ ಬೈಕ್‌ಗಳಲ್ಲಿ ಕುಟುಂಬ ಸಮೇತ ಬಂದ ಭಕ್ತರು ಸುಡುಬಿಸಿಲನ್ನೂ ಲೆಕ್ಕಿಸದೆ ಬರಿಗಾಲಲ್ಲಿ ಗುಡ್ಡ ಹತ್ತಿ ನೈವೇದ್ಯ ಸಮರ್ಪಿಸಿದರು. ಹಲವರು ಗುಡ್ಡದ ಸುತ್ತ ಬೀಡಾರ ಹಾಕಿ ಕುಟುಂಬ ಸಮೇತ ಉಳಿದುಕೊಂಡು ಸಾಮೂಹಿಕ ಭೋಜನ ಸವಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X