Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣದ ಮುಖ್ಯ...

ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣದ ಮುಖ್ಯ ಆರೋಪಿಗಳ ವಿರುದ್ಧ ಯಾಕೆ ವಿಚಾರಣೆ ಇಲ್ಲ: ನವೀನ್ ಸೂರಿಂಜೆ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ29 Sept 2025 11:43 AM IST
share
ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣದ ಮುಖ್ಯ ಆರೋಪಿಗಳ ವಿರುದ್ಧ ಯಾಕೆ ವಿಚಾರಣೆ ಇಲ್ಲ: ನವೀನ್ ಸೂರಿಂಜೆ ಪ್ರಶ್ನೆ

ಕಲಬುರಗಿ: ಧರ್ಮಸ್ಥಳ ಪ್ರಕರಣದಲ್ಲಿ ಕೇವಲ ಹೋರಾಟಗಾರರು, ಯೂಟ್ಯೂಬರ್ ಗಳಿಗೇ ನೋಟಿಸ್ ಕೊಡುವುದು, ವಿಚಾರಣೆ ನಡೆಸುವುದು ಆಗುತ್ತಿದೆ. ಆದರೆ ಪ್ರಕರಣದ ಮುಖ್ಯ ಆರೋಪಿಗಳಿಗೆ ಯಾಕೆ ನೋಟಿಸ್ ಕೊಡುತ್ತಿಲ್ಲ, ಯಾಕೆ ವಿಚಾರಣೆಗೆ ಕರೆಯುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ನವೀನ್ ಸೂರಿಂಜೆ ಪ್ರಶ್ನಿಸಿದ್ದಾರೆ.

ನಗರದ ಕನ್ನಡ ಭವನದಲ್ಲಿ ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ "ಧರ್ಮಸ್ಥಳದಲ್ಲಿ ನಡೆದಿದ್ದೇನು? ನ್ಯಾಯಕ್ಕಾಗಿ ನಾವು" ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಸಹಜ ಸಾವಿನ ಪ್ರಕರಣ ಸಂಬಂಧ ಪೊಲೀಸರು ಹೋರಾಟಗಾರರಿಗೆ, ಧರ್ಮಸ್ಥಳದ ಆರೋಪಿಗಳ ವಿರುದ್ಧ ಮಾತನಾಡುವವರಿಗೆ ಮಾತ್ರ ನೋಟಿಸ್ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಯಾರನ್ನು ಆರೋಪಿ ಎನ್ನುತ್ತಿದ್ದೇವೋ ಅವರಿಗೆ ಈವರೆಗೆ ಎಸ್ಐಟಿ ನೋಟಿಸ್ ಕೊಟ್ಟಿಲ್ಲ, ವಿಚಾರಣೆ ನಡೆಸಿಲ್ಲ. ಎಸ್ಐಟಿ ಮೇಲೆ ನಂಬಿಕೆ ಇದೆ, ಆದರೆ ಈ ತನಿಖಾ ತಂಡದ ಮೇಲೆ ಸರ್ಕಾರ ಹಾಗೂ ವಿರೋಧ ಪಕ್ಷಗಳು ಹಲವು ಒತ್ತಡ ಹಾಕುತ್ತಿವೆ ಎಂದು ಗಂಭೀರ ಆರೋಪ ಮಾಡಿದರು.

ಎಸ್ಐಟಿ ತಂಡವನ್ನು ಸ್ವತಂತ್ರವಾಗಿ ತನಿಖೆ ನಡೆಸಲು ಸರ್ಕಾರ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ಪ್ರಣವ್ ಮೊಹಂತಿ, ಅನುಚೇತ್, ದಯಾಮ್ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ, ಅಸಹಜ ಸಾವುಗಳ ಬಗ್ಗೆ ಸಮಗ್ರ ತನಿಖೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ. ಆದರೆ ಸರ್ಕಾರ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಂ.ಡಿ ಅವರನ್ನು ನಾಲ್ಕು ಬಾರಿ ವಿಚಾರಣೆ ಕರೆದು ದಿಕ್ಕು ತಪ್ಪಿಸುತ್ತಿದೆ. ಅಷ್ಟು ಬಾರಿ ಅವರನ್ನು ವಿಚಾರಣೆಗೆ ಕರೆಯುವಹಂತದ್ದು ಏನಿದೆ? ಧರ್ಮಸ್ಥಳ ಪರ ಹೋರಾಟ ಮಾಡುತ್ತಿರುವವರ ವಿರುದ್ಧ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.

ಧರ್ಮಸ್ಥಳದ ವಿರುದ್ಧವಾಗಿ ಮಾತನಾಡಿದ್ದಕ್ಕೆ ತಿಮರೋಡಿ ಅವರನ್ನು ಸರ್ಕಾರ ಗುರಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಧರ್ಮಸ್ಥಳದ ವಿರುದ್ಧ ಮಾತನಾಡುವ ಇಂತಹ ಕಾರ್ಯಕ್ರಮ ನಡೆಯಬಾರದೆಂದು ಪಿತೂರಿಗಳು ನಡೆದಿವೆ. ಕಲಬುರಗಿ ಪೊಲೀಸರು ನನಗೆ ನೋಟಿಸ್ ನೀಡಿದ್ದು, ನೀವು ಯಾವುದೇ ಕಾರಣಕ್ಕೂ ಧರ್ಮಸ್ಥಳ ವಿಷಯದ ಕುರಿತು ಮಾತನಾಡಬಾರದು ಎಂದು ಹೇಳಿದ್ದಾರೆ. ಆದರೆ ಪೊಲೀಸರು ನಮಗೆ ಕೊಟ್ಟಿರುವ ನೋಟಿಸ್ ಕಾನೂನು ಬಾಹಿರ ಎಂದು ಟೀಕಿಸಿದರು.

ಕೆ.ನೀಲಾ ಪ್ರಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳನ್ನು ಅತ್ಯಾಚಾರ, ಕೊಲೆ ಮಾಡಿ ನೇತ್ರಾವತಿ ನದಿಗೆ ಎಸೆದಿದ್ದಾರೆ. ವೇದವಲ್ಲಿ, ಪದ್ಮಲತಾ, ಸೌಜನ್ಯ, ಯಮುನಾ ಸೇರಿದಂತೆ ಅನೇಕ ಹೆಣ್ಣು ಮಕ್ಕಳ ಸಾವಿನ ಪ್ರಕರಣಗಳಿಗೆ ನ್ಯಾಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮಗೆ ಧರ್ಮಸ್ಥಳದಲ್ಲಿ ಆಗಿರುವ ಕೊಲೆಗಳ ಬಗ್ಗೆ ನ್ಯಾಯ ಬೇಕು. ಇದಕ್ಕೆ ಸರ್ಕಾರ ಸ್ವತಂತ್ರ ತನಿಖೆಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಮಾತನಾಡಿ, ಸರ್ಕಾರ ಉಳ್ಳವರ ಪರವಾಗಿ ನಿಂತು ಎಸ್ಐಟಿ ತನಿಖೆಯ ದಿಕ್ಕು ತಪ್ಪಿಸುತ್ತಿದೆ. ಇವರಿಗೂ ನಡೆದಿರುವ ಅಸಹಜ ಸಾವಿನ ಪ್ರಕರಣಗಳಿಗೆ ನ್ಯಾಯ ಕೊಡಿಸಲೇಬೇಕು ಎಂದು ಒತ್ತಾಯಿಸಿದರು.

ಆರ್.ಕೆ ಹುಡಗಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಅರ್ಜುನ್ ಭದ್ರೆ, ಶ್ರೀಮಂತ ಬಿರಾದಾರ, ಪದ್ಮಿನಿ ಕಿರಣಗಿ, ರೇಣುಕಾ ಸಿಂಗೆ, ಚಂದಮ್ಮ ಗೋಳಾ, ಕಾವ್ಯ ಸೂರಿಂಜೆ, ಲವಿತ್ರ ವಸ್ತ್ರದ್, ಸಲ್ಮಾನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಪದ್ಮಾವತಿ ಮಾಲಿಪಾಟೀಲ್ ಸ್ವಾಗತಿಸಿದರು. ಪ್ರಮೋದ್ ಪಾಂಚಾಳ ನಿರೂಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X