Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸ್ಥಳೀಯ ಕೋರ್ಟಿನ ಕೆಲಸವೇ ನ್ಯಾಯ...

ಸ್ಥಳೀಯ ಕೋರ್ಟಿನ ಕೆಲಸವೇ ನ್ಯಾಯ ವ್ಯವಸ್ಥೆಯ ಅಡಿಪಾಯ: ನ್ಯಾಯಮೂರ್ತಿ ಮಹ್ಮದ್ ನವಾಝ್

ವಾರ್ತಾಭಾರತಿವಾರ್ತಾಭಾರತಿ5 July 2025 11:53 PM IST
share
ಸ್ಥಳೀಯ ಕೋರ್ಟಿನ ಕೆಲಸವೇ ನ್ಯಾಯ ವ್ಯವಸ್ಥೆಯ ಅಡಿಪಾಯ: ನ್ಯಾಯಮೂರ್ತಿ ಮಹ್ಮದ್ ನವಾಝ್

ಕಲಬುರಗಿ: ಆಳಂದ ತಾಲೂಕು ಕೋರ್ಟಗಳ ವಕೀಲರು ನ್ಯಾಯ ವ್ಯವಸ್ಥೆಯ ಅತ್ಯಂತ ಮಹತ್ವದ ಸ್ತಂಭಗಳಾಗಿದ್ದು, ಸ್ಥಳೀಯ ಮಟ್ಟದ ಕೋರ್ಟಿನಲ್ಲಿ ನೀವು ಹಾಕುವ ಅಡಿಪಾಯದಂತೆ ಮೇಲ್ಮಟ್ಟದ ಕೋರ್ಟುಗಳಲ್ಲಿ ಪ್ರಕರಣಗಳು ಸಾಗುತ್ತವೆ. ಉತ್ತಮ ಡ್ರಾಫ್ಟಿಂಗ್ ಮಾಡುವುದರಿಂದ ಹಾಗೂ ಕಕ್ಷಿದಾರರಿಗೆ ನ್ಯಾಯ ಒದಗಿಸುವ ಹಾದಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡುವುದರಿಂದ ನ್ಯಾಯ ವ್ಯವಸ್ಥೆ ಸದೃಢವಾಗುತ್ತದೆ ಎಂದು ರಾಜ್ಯ ಹೈಕೋರ್ಟ್ ನ್ಯಾಯಾಧೀಶರೂ ಆಗಿರುವ ಕಲಬುರಗಿ ಆಡಳಿತಾತ್ಮಕ ನ್ಯಾಯಮೂರ್ತಿ ಮಹ್ಮದ್ ನವಾಝ್ ಅವರು ಹೇಳಿದರು.

ಆಳಂದ ಪಟ್ಟಣದ ನ್ಯಾಯಾಲಯದಲ್ಲಿ ಸ್ಥಳೀಯ ನ್ಯಾಯವಾದಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಆಶ್ರಯದಲ್ಲಿ ಶನಿವಾರ ಆರಂಭವಾದ ಮೂರು ದಿನಗಳ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅನೇಕ ಬಾರಿ ಮೇಲ್ಮಟ್ಟದ ಕೋರ್ಟುಗಳಲ್ಲಿ ವಿಚಾರಣೆ ನಡೆಯುವ ವೇಳೆ, ಕೇಸಿನ ಹಿಂದಿನ ತೀರ್ಪುಗಳ ದಾಖಲೆಗಳನ್ನು ವಕೀಲರು ಸರಿಯಾಗಿ ಒದಗಿಸದೆ ಹೋದರೆ ನ್ಯಾಯದ ವಿಳಂಬ ಅಥವಾ ತೊಂದರೆ ಉಂಟಾಗುತ್ತದೆ. ಎಲ್ಲಾ ನ್ಯಾಯಮೂರ್ತಿಗಳೂ ಪರಿಪೂರ್ಣರಾಗಿರುವುದಿಲ್ಲ. ನ್ಯಾಯ ನೀಡುವಲ್ಲಿ ನಮಗೆ ವಕೀಲರ ಸಹಕಾರ ಅತ್ಯಗತ್ಯ. ವಕೀಲರು ನ್ಯಾಯಮೂರ್ತಿಗಳಿಗೆ ಸೂಕ್ತ ಸಲಹೆ, ಮಾಹಿತಿ ನೀಡುವ ಮೂಲಕ ನ್ಯಾಯದ ಪರಿಪೂರ್ಣತೆಯತ್ತ ಕರೆದೊಯ್ಯಬೇಕು ಎಂದು ತಮ್ಮ ಕೆಲಸವನ್ನು ಹೆಚ್ಚು ಶ್ರದ್ಧೆಯಿಂದ ಹಾಗೂ ವೃತ್ತಿಪರ ನಿಷ್ಠೆಯಿಂದ ನಡೆಸಬೇಕು ಎಂದು ನ್ಯಾಯವಾದಿಗಳಿಗೆ ಅವರು ಕರೆ ನೀಡಿದರು.

ಜಿಲ್ಲಾ ಮುಖ್ಯ ನ್ಯಾಯಾಧೀಶ ಜಿ.ಎಲ್. ಲಕ್ಷ್ಮಿ ನಾರಾಯಣ ಅವರು ಮಾತನಾಡಿ, ಕೇಸ್ ಯಾವುದೇ ರೀತಿಯಾಗಿರಲಿ ವಕೀಲರು ಶ್ರಮಪಡಬೇಕು. ಕೇಸು ಸೋಲು ಗೆಲವು ಲೆಕ್ಕಿಸದೆ ಪ್ರಕರಣ ನಡೆಸಲು ನಿರ್ಲಕ್ಷ್ಯ ವಹಿಸದೆ ಉತ್ತಮ ಕೆಲಸ ಮಾಡಿದರೆ ಕಕ್ಷಿದಾರರು ನಿಮ್ಮನು ಹುಡಿಕೊಂಡು ಬರುತ್ತಾರೆ ಎಂದು ಹೇಳಿದರು.

ಕರ್ನಾಟಕ ವಕೀಲ ಪರಿಷತ್ತಿನ ಅಧ್ಯಕ್ಷ ಎಸ್.ಎಸ್. ಮಿತ್ತಲಕೋಡ್ ಅವರು ಮಾತನಾಡಿ, ವಕೀಲರ ಸಂಘದ ಹಾಗೂ ವಕೀಲರ ಏನೆ ಸಮಸ್ಯೆಗಳನ್ನು ಗಮನಕ್ಕೆ ತನ್ನಿ ಪರಿಷತ್ತಿನಿಂದ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭಧಲ್ಲಿ ಆಳಂದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಮನ್ ಚಿತರಗಿ, ಜಿಲ್ಲಾ ನ್ಯಾಯವಾದಿ ಸಂಘದ ಅಧ್ಯಕ್ಷ ಎಸ್.ವಿ. ಪ್ರಸಾದ, ಹೈಕೋರ್ಟ್ ಯುನಿಟ್ ವಕೀಲರ ಸಂಘದ ಉಪಾಧ್ಯಕ್ಷ ಎ.ಎಸ್.ಜಾಗಿರದಾರ, ಜಿಲ್ಲಾ ನ್ಯಾಯಾಯವಾದಿ ಸಂಘದ ಉಪಾಧ್ಯಕ್ಷೆ ಆರತಿ ರಾಠೋಡ, ಸಂಘದ ಜಿಲ್ಲಾ ಮಾಜಿ ಅಧ್ಯಕ್ಷ ಗುಪ್ತಲಿಂಗ ಬಿರಾದಾರ, ತಾಲೂಕು ಕಾರ್ಯದರ್ಶಿ ಬಿ.ಟಿ.ಸಿಂಧೆ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ತಾಲೂಕು ನ್ಯಾಯವಾದಿ ಸಂಘದ ಅಧ್ಯಕ್ಷ ಕಮಲ ರಾಠೋಡ ಸ್ವಾಗತಿಸಿದರು. ನ್ಯಾಯವಾದಿ ಮಹಾದೇವ ಹತ್ತಿ ನಿರೂಪಿಸಿದರು.

ಜಿಲ್ಲೆಯಲ್ಲಿನ ವಿವಿಧ ಕೋರ್ಟ್ಗಳ ನ್ಯಾಯವಾದಿಗಳು, ಸರ್ಕಾರಿ ವಕೀಲರು ಮತ್ತು ಸ್ಥಳೀಯ ನ್ಯಾಯವಾದಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ನಂತರ ಸಂಪನ್ಮೂಲ ವ್ಯಕ್ತಿಗಳಿಂದ ಕಾನೂನು ಕಾರ್ಯಾಗಾರದ ಗೋಷ್ಠಿಗಳು ಜರುಗಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X