Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಆಳಂದ | ಮಟಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ...

ಆಳಂದ | ಮಟಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ10 Jun 2025 10:06 AM IST
share
ಆಳಂದ | ಮಟಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ: ಆಳಂದ ತಾಲ್ಲೂಕಿನ ಮಟಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಸಂಬುದ್ಧ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಕಾಲೇಜು, ಪ್ರಾದೇಶಿಕ ಮತ್ತು ಸಾಮಾಜಿಕ ವಲಯ ಅರಣ್ಯ ಇಲಾಖೆ, 3ಜೆ ಕ್ಲಬ್ ಹಾಗೂ ನಿರಗುಡಿ ಗ್ರಾಮ ಪಂಚಾಯತ್‌ ಸಹಯೋಗದಲ್ಲಿ ಏರ್ಪಡಿಸಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಕಲಬುರಗಿ, ಬೀದರ್‌ ಹಾಗೂ ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ ಪಾಟೀಲ ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಅಮೂಲ್ಯವಾದ ಪ್ರಾಕೃತಿಕ ಸಂಪತ್ತು ಸಂರಕ್ಷಣೆಗಾಗಿ ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.

ಕಲಬುರಗಿ ಜಿಲ್ಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಡಾ.ಸುಮಿತ್ ಪಾಟೀಲ ಮಾತನಾಡಿ, ಅರಣ್ಯ ಇಲಾಖೆಯು ಪ್ರತಿ ವರ್ಷ ಲಕ್ಷಾಂತರ ಸಸಿಗಳನ್ನು ನೆಟ್ಟು ಬೆಳಸುತ್ತಿದೆ. ಇದರ ಜೊತೆ ನರೇಗಾ ಯೋಜನೆಯಡಿ ರೈತರಿಗೂ ಸಸಿ ನೆಡಲು ಪ್ರೋತ್ಸಾಹ ನೀಡುವ ಯೋಜನೆ ರೂಪಿಸಲಾಗಿದೆ. ಸಂಘ, ಸಂಸ್ಥೆ ಹಾಗೂ ಶಾಲಾ ಕಾಲೇಜುಗಳು ಪರಿಸರ ಸಂರಕ್ಷಣೆಗಾಗಿ ಗಿಡ ಮರ ಬೆಳಸಲು ಅಗತ್ಯ ಚಟುವಟಿಕೆ ಹಮ್ಮಿಕೊಳ್ಳಲು ತಿಳಿಸಿದರು.

ಜಿಲ್ಲಾ ಸಾಮಾಜಿಕ ಅರಣ್ಯ ಉಪ ಸಂರಕ್ಷಣಾಧಿಕಾರಿ ಸಾಗರ ತಾವಡೆ, ಸಂಸ್ಥೆಯ ಆಡಳಿತಾಧಿಕಾರಿ ಮಹಾದೇವಪ್ಪ ಪಾಟೀಲ ಮಾತನಾಡಿದರು.

ಮಟಕಿ ಶಾಲೆ ಮುಖ್ಯಶಿಕ್ಷಕ ಅಣ್ಣಪ್ಪ ಹಾದಿಮನಿ ಅಧ್ಯಕ್ಷತೆ ವಹಿಸಿದರು. ಪ್ರಮುಖರಾದ ಪ್ರದೀಪ ಕಾಂಬಳೆ, ಗ್ರಾಪಂ ಉಪಾಧ್ಯಕ್ಷ ಲಾಯಕಲಿ ದಕನೆ, ಪ್ರಾಂಶುಪಾಲ ಸಂಜಯ ಪಾಟೀಲ, ವಲಯ ಅರಣ್ಯ ಅಧಿಕಾರಿಗಳಾದ ಶಾಂತರೆಡ್ಡಿ, ವಿರೇಂದ್ರ ಯಳವಂತಗಿ, ಪಿಡಿಒ ಶಿವಲಿಂಗಯ್ಯ ಮಠಪತಿ, ಗ್ರಾಪಂ ಮಾಜಿ ಅಧ್ಯಕ್ಷ ಸುಭಾಷ ಪಾಟೀಲ, ದತ್ತಾತ್ರೇಯ ಬಿರಾದಾರ, ಗ್ರಾಪಂ ಸದಸ್ಯರಾದ ನಾಗರಾಜ ತಡಕಲ,ರೇವಪ್ಪ ಮುಲಗೆ, ಅಲ್ಲಾಭಕಾಶ್ ಇನಾಂದಾರ, ಚಂದ್ರಕಾಂತ ಸೂರವಸೆ, ದಿಲೀಪ ಕಾಳೆ, ಗುರುಕಿರಣ ವಾಡಿ, ಫಕ್ರೋದಿನ್ ಇನಾಂದಾರ, ಸಿದ್ಧಲಿಂಗ ಹಿಪ್ಪರಗಿ ಉಪಸ್ಥಿತರಿದ್ದರು.

ಸಿದ್ಧಾರ್ಥ ಹಸೂರೆ ನಿರೂಪಿಸಿದರೆ, ಸಂಜಯ್‌ ಎಸ್.ಪಾಟೀಲ ಸ್ವಾಗತಿಸಿದರು. ಸುರೇಶ ಪಾಟೀಲ ವಂದಿಸಿದರು. ಸಂಗೀತ ಕಲಾವಿದ ಶಂಕರ ಹೂಗಾರ, ಸವಿತಾ ಎಸ್. ಕಾಂಬಳೆ ಅವರು ಪರಿಸರ ಗೀತೆ ಹಾಡಿದರು. ಇದೇ ಸಂದರ್ಭದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಕೈಗೊಳ್ಳಲಾಯಿತು. ನಂತರ ಸಂಬುದ್ಧ ಕಾಲೇಜು ವಿದ್ಯಾರ್ಥಿಗಳಿಂದ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು. ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X