Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರೇಬೆಟ್ಟು ಮೋರಾರ್ಜಿ ದೇಸಾಯಿ ವಸತಿ...

ಹಿರೇಬೆಟ್ಟು ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಕ್ರಮ ಹಣ ಸಂಗ್ರಹ, ವಿದ್ಯಾರ್ಥಿಗಳಿಗೆ ದೌರ್ಜನ್ಯ: ಪೋಷಕರ ಆರೋಪ

"ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಂದ ಹಣ ಪಡೆದು ಸೀಟು ನೀಡಲಾಗುತ್ತದೆ"

ವಾರ್ತಾಭಾರತಿವಾರ್ತಾಭಾರತಿ19 Jun 2023 10:56 PM IST
share
ಹಿರೇಬೆಟ್ಟು ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಕ್ರಮ ಹಣ ಸಂಗ್ರಹ, ವಿದ್ಯಾರ್ಥಿಗಳಿಗೆ ದೌರ್ಜನ್ಯ: ಪೋಷಕರ ಆರೋಪ

ಉಡುಪಿ, ಜೂ.19: ಹಿರೇಬೆಟ್ಟು ಪಟ್ಟದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಲಾಗುತ್ತಿದೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಎಂದು ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ನೊಂದ ಪೋಷಕಿ, ರಕ್ಷಕ- ಶಿಕ್ಷಕ ಸಂಘದ ಸದಸ್ಯೆ ಮಾಲತಿದೇವಿ ಸಂತೆಕಟ್ಟೆ ಮಾತನಾಡಿ, ಪ್ರಸ್ತುತ ಸಂಸ್ಥೆಯಲ್ಲಿ ಒಟ್ಟು 247 ವಿದ್ಯಾರ್ಥಿಗಳಿದ್ದಾರೆ. ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿದ್ದ ಶಾಲೆಯ ಪ್ರಾಂಶುಪಾಲೆ ಹಾಗೂ ದೈಹಿಕ ಶಿಕ್ಷಕಿ ವಿರುದ್ಧ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.

ಶಾಲೆಯಲ್ಲಿ ಆಡಳಿತಾತ್ಮ ವ್ಯವಹಾರಗಳನ್ನು ಶಾಲೆಗೆ ಸಂಬಂಧಪಡದ ಪ್ರಾಂಶುಪಾಲರ ಗಂಡನೇ ಸಂಪೂರ್ಣ ವಾಗಿ ಹತೋಟಿಯಲ್ಲಿ ಇಟ್ಟುಕೊಂಡಿದ್ದಾರೆ. ಶಾಲೆಯ ನೇಮಕಾತಿ ಸಮಯದಲ್ಲಿ ಪಡೆದುಕೊಳ್ಳುವ 500 ರೂ. ಬಗ್ಗೆ ಯಾವುದೇ ಸಮರ್ಪಕ ಉತ್ತರ ಇಲ್ಲ. ವಿದ್ಯಾರ್ಥಿಗಳಿಂದ ಪ್ರತಿ ಸಲ ಗಾರ್ಡನ್ ನಿರ್ಮಾಣಕ್ಕೆ 500, ಒಂದು ಸಾವಿರ, 2 ಸಾವಿರ ರೂ. ವಸೂಲಿ ಮಾಡಿದ್ದಾರೆ. ಇದಕ್ಕೆ ಯಾವುದಕ್ಕೂ ರಶೀದಿ ಕೊಡುವುದಿಲ್ಲ. ರಸ್ತೆ ನಿರ್ಮಾಣಕ್ಕೆಂದು 500 ರೂ. ತೆಗೆದುಕೊಂಡಿದ್ದಾರೆ. ಸಿಡಿಯಲ್ಲಿ ಸಿನಿಮಾ ತೋರಿಸಿ 250 ರೂ. ವಸೂಲಿ ಮಾಡುತ್ತಾರೆ. ಶಾಲೆಯ ಆವರಣಗೋಡೆ ನಿರ್ಮಾಣಕ್ಕೆ 2 ಸಾವಿರ ರೂ., 1 ಸಾವಿರ ರೂ. ಪಡೆದಿದ್ದಾರೆ ಎಂದು ಅವರು ಆಪಾದಿಸಿದರು.

ಸರಕಾರ ಉಚಿತವಾಗಿ ನೀಡುವ ಸಮವಸ್ತ್ರಕ್ಕೆ 650, 750, 850 ರೂ. ಪಡೆಯಲಾಗುತ್ತಿದೆ. ಪ್ರವಾಸಕ್ಕೆ ಸರಕಾರದಿಂದ ಅನುದಾನ ಬಂದಿದ್ದರೂ ಪೋಷಕರಿಂದ ಹಣ ತೆಗೆದುಕೊಳ್ಳುತ್ತಾರೆ. ಸರಕಾರ ಮಕ್ಕಳಿಗೆ ಕೊಡುವ ಪೌಷ್ಟಿಕ ಆಹಾರ ಮೀನು, ಮೊಟ್ಟೆ, ಕೋಳಿ, ತರಕಾರು, ಗೋಡಂಬಿ, ದ್ರಾಕ್ಷಿ ಸರಿಯಾಗಿ ನೀಡದೆ ಅಡುಗೆಯ ಸಾವಿತ್ರಿ, ಪ್ರಾಂಶುಪಾಲೆ ಪೂರ್ಣಿಮ, ಶಿಕ್ಷಕಿಯರಾದ ಸವಿತಾ ಗೌಡ, ಚೈತ್ರ, ನರ್ಸ್ ಸಂಧ್ಯಾ ಅವರು ಮನೆಗೆ ಸಾಗಿಸುವುದನ್ನು ಎಲ್ಲ ಮಕ್ಕಳು ನೋಡಿದ್ದಾರೆ ಎಂದು ಅವರು ದೂರಿದರು.

ಮಕ್ಕಳು, ಪೋಷಕರು ಈ ಬಗ್ಗೆ ಪ್ರಶ್ನೆ ಮಾಡಿದರೆ ಟಿಸಿ ಕೊಡುವ ಬೆದರಿಕೆ ಹಾಕುತ್ತಿದ್ದಾರೆ. ಸ್ವಚ್ಛತೆ ಕೆಲಸವನ್ನು ವಿದ್ಯಾರ್ಥಿಗಳಿಂದಲೇ ಮಾಡಿಸುವ ಮೂಲಕ ದೌರ್ಜನ್ಯ ಎಸಗುತ್ತಿದ್ದಾರೆ. ಪೋಷಕರ ಸಭೆಯನ್ನು ಸರಿಯಾಗಿ ನಡೆಸದೆ ಗುಪ್ತವಾಗಿ ನಡೆಸಿ ಅಕ್ರಮಗಳ ಬಗ್ಗೆ ಮುಚ್ಚಿಡುತ್ತಾರೆ. ಇಲ್ಲಿ 6ನೇ ತರಗತಿಗೆ ಅರ್ಹತೆಯ ಆಧಾರದ ಮೇಲೆ ದಾಖಲಾತಿ ನಡೆಯುವುದಿಲ್ಲ. ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಂದ ಹಣ ಪಡೆದು ಸೀಟು ನೀಡಲಾಗುತ್ತದೆ. ಎಲ್ಲ ಅಕ್ರಮಗಳಿಗೆ ಇಲಾಖೆ ಹಿರಿಯ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಶಾಲೆಯ ಮಾಜಿ ಕಾವಲುಗಾರ ಜಗನ್ನಾಥ್ ಆಚಾರ್ಯ ಮಾತನಾಡಿ, ನನ್ನ ವಿರುದ್ಧ ಮಕ್ಕಳನ್ನು ಎತ್ತಿ ಕಟ್ಟಿ ಪೊಕ್ಸೋ ಕಾಯಿದೆಯಡಿ ನನ್ನನ್ನು ಜೈಲಿಗೆ ಹಾಕಿಸಿದರು. ಈ ಪ್ರಕರಣ ಇತ್ತೀಚೆಗೆ ಕೋರ್ಟ್‌ನಲ್ಲಿ ಖುಲಾಸೆ ಯಾಗಿದೆ. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲು ಷಡ್ಯಂತರ ನಡೆಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಪೋಷಕರಾದ ಪ್ರಭಾಕರ್ ಶೆಟ್ಟಿ ಆತ್ರಾಡಿ, ನಿಲೇಶ್ ಬೈಲೂರು, ಜ್ಯೋತಿ ಪೆರ್ಣಂಕಿಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X