Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಳೆಗಾಳಿ, ಸಿಡಿಲು ಬಡಿದು 15 ಮನೆಗಳಿಗೆ...

ಮಳೆಗಾಳಿ, ಸಿಡಿಲು ಬಡಿದು 15 ಮನೆಗಳಿಗೆ ಹಾನಿ: ಓರ್ವನಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ9 July 2023 7:39 PM IST
share
ಮಳೆಗಾಳಿ, ಸಿಡಿಲು ಬಡಿದು 15 ಮನೆಗಳಿಗೆ ಹಾನಿ: ಓರ್ವನಿಗೆ ಗಾಯ

ಉಡುಪಿ, ಜು.9: ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಗಾಳಿ ಮಳೆ ಹಾಗೂ ಸಿಡಿಲಿನಿಂದ ಒಟ್ಟು 15 ಮನೆಗಳಿಗೆ ಹಾನಿಯಾಗಿದ್ದು, ಮನೆಯ ಛಾವಣಿ ಕುಸಿದ ಪರಿಣಾಮ ಓರ್ವ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿ-37.1ಮಿ.ಮೀ., ಬ್ರಹ್ಮಾವರ- 46.9ಮಿ.ಮೀ., ಕಾಪು-67.3ಮಿ.ಮೀ., ಕುಂದಾಪುರ-45.1ಮಿ.ಮೀ., ಬೈಂದೂರು-39.7ಮಿ.ಮೀ., ಕಾರ್ಕಳ-51.7ಮಿ.ಮೀ., ಹೆಬ್ರಿ-50.2ಮಿ.ಮೀ. ಆಗಿದ್ದು, ಜಿಲ್ಲೆಯಲ್ಲಿ ಸರಾಸರಿ 47.1ಮಿ.ಮೀ. ಮಳೆಯಾಗಿದೆ.

ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮದ ಮಂಜುನಾಥ ಅವಭ್ರತ ಎಂಬವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿದು ಭಾಗಶಃ ಹಾನಿ ಯಾಗಿ 100,000ರೂ. ನಷ್ಟವಾಗಿದೆ. ಈ ವೇಳೆ ಮನೆಯ ರೀಪು ಬಿದ್ದು ಮಂಜುನಾಥ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೇ ರೀತಿ ಬೈಂದೂರು ತಾಲೂಕಿನ ನಾಲ್ಕು ಮನೆಗಳಿಗೆ ಹಾನಿಯಾಗಿ ಒಟ್ಟು 3.25ಲಕ್ಷ ರೂ. ನಷ್ಟ ಉಂಟಾಗಿದೆ.

ಕಾಪು ತಾಲೂಕಿನ ನಾಲ್ಕು ಮನೆಗಳಿಗೆ ಹಾನಿ ಉಂಟಾಗಿದ್ದು, ಇದರಿಂದ ಒಟ್ಟು ಒಂದು ಲಕ್ಷ ರೂ. ಮತ್ತು ಕುಂದಾಪುರ ತಾಲೂಕಿನ ಮೂರು ಮನೆಗಳಿಗೆ ಹಾನಿಯಾಗಿ 65ಸಾವಿರ ರೂ. ಹಾಗೂ ಕಾರ್ಕಳ ತಾಲೂಕಿನ ಒಂದು ಮನೆಗಳಿಗೆ ಹಾನಿ ಉಂಟಾಗಿ 40,000ರೂ. ನಷ್ಟ ಸಂಭವಿಸಿದೆ.

ಸಿಡಿಲು ಬಡಿದು ಹಾನಿ

ಉಡುಪಿ ತಾಲೂಕಿನ ಅಲೆವೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಸಿಡಿಲು ಬಡಿದ ಪರಿಣಾಮ ಎರಡು ಮನೆಗಳಿಗೆ ಅಪಾರ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಅಲೆವೂರು ಆನಂದ ಸೇರಿಗಾರ್ ಎಂಬವ ಮನೆಗೆ ಸಿಡಿಲು ಬಡಿದು 20,000ರೂ. ಮತ್ತು ಅಲೆವೂರಿನ ಕರ್ವಾಲಿನ ಜಯಂತಿ ನಾಯ್ಕ್ ಎಂಬವರ ಅವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾಗಿ 75ಸಾವಿರ ನಷ್ಟವಾಗಿದೆ. ಸ್ಥಳೀಯ ಮುಖಂಡರಾದ ರವಿರಾಜ್ ಆಚಾರ್ಯ ಬದ್ರಿ, ಶ್ರೀಧರ್ ಪೂಜಾರಿ, ಉಮೇಶ್ ಕಾಮತ್, ಗ್ರಾಪಂ ಸದಸ್ಯ ಗುರುರಾಜ್ ಸಾಮಗ, ಕಂದಾಯ ನಿರೀಕ್ಷಕರಾದ ಉಪೇಂದ್ರ ಕುಮಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೃಷಿ ಬೆಳೆಗೆ ಅಪಾರ ಹಾನಿ

ಕುಂದಾಪುರ ತಾಲೂಕಿನ ಹಾಲಾಡಿಯ ಸುಧಾಕರ ಶೆಟ್ಟಿ ಮತ್ತು ಹೆಬ್ರಿ ಅಂಡಾರು ಗ್ರಾಮದ ಸುರೇಶ ಸೇರ್ವೇಗಾರ ಹಾಗೂ ರಾಜಶೇಖರ ಸೇರ್ವೇ ಗಾರ ಎಂಬವರ ಕೃಷಿ ಗದ್ದಗೆ ನೀರು ತುಂಬಿ ಬೆಳೆ ಹಾನಿಯಾಗಿದ್ದು, ಇದರಿಂದ ಒಟ್ಟು 40,000ರೂ. ನಷ್ಟ ಉಂಟಾಗಿದೆ.

ವಕ್ವಾಡಿಯ ಆಶಾಲತಾ ಶೆಡ್ತಿ ಎಂಬವರ ಅಡಿಕೆ ತೋಟಕ್ಕೆ ಭಾಗಶಃ ಹಾನಿಯಾಗಿ 20,000ರೂ. ಮತ್ತು ಕುಂದಾಪುರ ತಾಲೂಕಿನ ಕೊರ್ಗಿ, ನೂಜಾಡಿ, ಕುಂದಾಬಾರಂದಾಡಿ, ವಕ್ವಾಡಿಯಲ್ಲಿ ಒಟ್ಟು ನಾಲ್ಕು ದನದ ಕೊಟ್ಟಿಗೆಗಳಿಗೆ ಭಾಗಶಃ ಹಾನಿಯಾಗಿದ್ದು, ಒಟ್ಟು 75ಸಾವಿರ ರೂ. ನಷ್ಟ ಉಂಟಾಗಿದೆ

ಕೆಳಪರ್ಕಳದಲ್ಲಿ ಮುಳುಗುತ್ತಿರುವ ಕಾಲು ಸೇತುವೆ!

ಪರ್ಕಳ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಲಬದಿಯಲ್ಲಿ ಬಯಲು ಗದ್ದೆಯಲ್ಲಿ ಮುಂದಕ್ಕೆ ಚಲಿಸಿದಾಗ ರಾಜ ಕಾಲುವೆ ನಿರ್ಮಿಸಲಾದ ಕಾಲು ಸಂಕ ಮಳೆಯ ನೀರಿನಿಂದ ಮುಳುಗಿ ಹೋಗುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ.

ಈ ಕಾಲುಸಂಕದಲ್ಲಿ ಈ ಪರಿಸರದ ಸುಮಾರು 25 ಮನೆಯವರು ಬಳಕೆ ಮಾಡುತ್ತಿದ್ದಾರೆ. ಸಂಬಂಧಪಟ್ಟವರು ಈ ಕಡೆ ಗಮನ ಹರಿಸಿ, ಎತ್ತರದ ಘನ ವಾಹನ ಸಂಚರಿಸುವ ರೀತಿಯ ಹೊಸ ಸೇತುವೆ ನಿರ್ಮಾಣ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಅಪಾಯದಲ್ಲಿರುವ ಈ ಮುರುಕಲು ಸೇತುವೆಯಲ್ಲಿ ಸಮತೋಲನ ಮಾಡಿ ದಿನನಿತ್ಯ ಹೋಗಬೇಕಾದ ಪರಿಸ್ಥಿತಿ ಇದೆ. ಸ್ಥಳೀಯರು ಹಲವು ಬಾರಿ ನಗರಸಭೆಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ಉಮೇಶ್ ನಾಯಕ್ ದೂರಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X