Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಾಕತ್ತಿದ್ದರೆ ಗ್ಯಾರಂಟಿ ಸ್ಕೀಮ್...

ತಾಕತ್ತಿದ್ದರೆ ಗ್ಯಾರಂಟಿ ಸ್ಕೀಮ್ ಪಡೆಯದಂತೆ ತಮ್ಮ ಪಕ್ಷದವರಿಗೆ ಬಿಜೆಪಿ ಹೇಳಲಿ: ಹರೀಶ್ ಕುಮಾರ್ ಸವಾಲು

ವಾರ್ತಾಭಾರತಿವಾರ್ತಾಭಾರತಿ29 Jun 2023 5:39 PM IST
share
ತಾಕತ್ತಿದ್ದರೆ ಗ್ಯಾರಂಟಿ ಸ್ಕೀಮ್ ಪಡೆಯದಂತೆ ತಮ್ಮ ಪಕ್ಷದವರಿಗೆ ಬಿಜೆಪಿ ಹೇಳಲಿ: ಹರೀಶ್ ಕುಮಾರ್ ಸವಾಲು

ಕಾಂಗ್ರೆಸ್‍ನ ಗ್ಯಾರಂಟಿ ಸ್ಕೀಮ್‍ಗಳನ್ನು ವಿರೋಧಿಸಿರುವ ಬಿಜೆಪಿ ನಾಯಕರು ಧಮ್ಮು, ತಾಕತ್ತು ಇದ್ದರೆ ತಮ್ಮ ಪಕ್ಷದವರು ಯಾರೂ ಈ ಯೋಜನೆಗಳನ್ನು ಪಡೆಯಬಾರದೆಂದು ಹೇಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸವಾಲು ಹಾಕಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾತು ಮಾತಿಗೂ ಧಮ್ ತಾಕತ್ತಿನ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯವರಿಗೆ ಜನ ತಮ್ಮ ಧಮ್ ತಾಕತನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಕಾಂಗ್ರೆಸ್ ನುಡಿದಂತೆ ನಡೆದಿದೆ. ಜನರು ಸಂತಸದಲ್ಲಿದ್ದಾರೆ. ಇದನ್ನು ನೋಡಲು ಸಾಧ್ಯವಾಗದೆ ಬಿಜೆಪಿ ನಾಯಕರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಜಿಲ್ಲೆಗೆ ಬೆಂಕಿ ಕೊಡುತ್ತೇನೆ ಅಂದ ಬಿಜೆಪಿಯ ರಾಜ್ಯಾಧ್ಯಕ್ಷರು ತಮ್ಮ ಪಕ್ಷಕ್ಕೆ ಬೆಂಕಿ ಕೊಟ್ಟಿದ್ದಾರೆ. ಬಿಜೆಪಿಯ ಮನೆಯೊಂದು ಬಾಗಿಲು ಹತ್ತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಹರೀಶ್ ಕುಮಾರ್ ಹೇಳಿದರು.

ಕೇಂದ್ರದ ಷಡ್ಯಂತ್ರದಿಂದ ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾದಿಂದ ರಾಜ್ಯಕ್ಕೆ ಅಕ್ಕಿ ಸಿಗದಂತಾಗಿದೆ. ಅಕ್ಕಿ ದಾಸ್ತಾನು ಸಾಕಷ್ಟಿದ್ದರೂ ನೀಡಲಾಗುತ್ತಿಲ್ಲ. ಹಾಳಾದರೂ ಪರವಾಗಿಲ್ಲಬಡವರಿಗೆ ನೀಡಬಾರದು ಎಂಬ ಉದ್ದೇಶ ಕೇಂದ್ರ ಸರಕಾರದ್ದು. ರಾಜ್ಯ ಸರಕಾರ ತಾನು ನೀಡಿರುವ ಆಶ್ವಾಸನೆಯಂತೆ ಜನತೆಗೆ ಐದು ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಬೇರೆ ರಾಜ್ಯಗಳಿಂದ ಪ್ರಯತ್ನ ನಡೆಸಿತ್ತು. ಆದರೆ ಸಾಧ್ಯವಾಗದೆ ಇದೀಗ ಅಕ್ಕಿ ಲಭ್ಯ ಆಗುವವರೆಗೆ ತಲಾ 34 ರೂ.ನಂತೆ ಐದು ಕೆಜಿ ಹಣವನ್ನು ನೀಡುವ ತೀರ್ಮಾನಕ್ಕೆ ಸಿದ್ಧರಾಮಯ್ಯ ಸರಕಾರ ಮುಂದಾಗಿದ್ದರೂ ಬಿಜೆಪಿ ಒಪ್ಪಲು ತಯಾರಿಲ್ಲ ಎಂದು ಹರೀಶ್ ಕುಮಾರ್ ದೂರಿದರು.

ಐದು ಕೆಜಿಯನ್ನು ಏಳು ಕೆಜಿ ಮಾಡಿ ಸರಕಾರ ನೀಡುತ್ತಿದ್ದುದನ್ನು ಬಿಜೆಪಿ ಸರಕಾರ ಐದು ಕೆಜಿಗೆ ಇಳಿಸಿತ್ತು. ಚುನಾವಣೆಯ ಸಂದರ್ಭ ಕಾಂಗ್ರೆಸ್ ಈ ಬಗ್ಗೆ ಹೇಳಿಕೆ ನೀಡಿ ಸರಕಾರ ಬಂದಲ್ಲಿ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಹೇಳಿತ್ತು. ಹೆಚ್ಚುವರಿ 10 ಕೆಜಿ ನೀಡುವುದಾಗಿ ಎಲ್ಲಿಯೂ ಕಾಂಗ್ರೆಸ್ ಹೇಳಿಕೊಂಡಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಹರೀಶ್ ಕುಮಾರ್ ಉತ್ತರಿಸಿದರು.

ಉಚಿತ ನೀಡಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಆದರೆ ಬಿಜೆಪಿ ಆಡಳಿತದಲ್ಲಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಪ್ರತಿ ಮಹಿಳೆಗೆ ತಿಂಗಳಿಗೆ 1 ಸಾವಿರ ರೂ. ಘೋಷಣೆ ಮಾಡಿರುವುದು ಬಿಟ್ಟಿ ಭಾಗ್ಯ ಅಲ್ವಾ? ಪ್ರಧಾನಿ ಹೇಳಿಕೆ ಇವರಿಗೆ ಅನ್ವಯ ಆಗುವುದಿಲ್ಲವೇ ಎಂದವರು ಪ್ರಶ್ನಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ದೇಶದಲ್ಲೇ ಮೊದಲು ಅನ್ನಭಾಗ್ಯ ಯೋಜನೆ ತಂದಿದ್ದು ಸಿದ್ಧರಾಮಯ್ಯ. ಅದಕ್ಕಾಗಿಯೇ ಅವರನ್ನು ಅನ್ನ ರಾಮಯ್ಯ ಅನ್ನುತ್ತಾರೆ ಎಂದರು.

ಅಕ್ಕಿ ಪ್ರಧಾನಿಯವರದ್ದು ಅಂತಾರೆ. ಮೋದಿ ಭತ್ತ ಬೆಳೆಸುತ್ತಾರಾ? ಫುಡ್ ಕಾರ್ಪೊರೇಶನ್ ಕಾಯ್ದೆ ತಂದಿದ್ದೇ ಯುಪಿಎ ಸರಕಾರ. ಸುಳ್ಳು ಹೇಳುವುದೇ ಬಿಜೆಪಿ ಜಾಯಮಾನ. ಅವರಿಗೆ ಎರಡು ನಾಲಗೆ. ಕಾಂಗ್ರೆಸ್‍ನ ಅನ್ನಭಾಗ್ಯ ಕನ್ನಡಿಗರಿಗೆ ಒಂದು ವರ ಎಂದು ಅಭಯಚಂದ್ರ ಜೈನ್ ಹೇಳಿದರು.

ಗೋಷ್ಠಿಯಲ್ಲಿ ಮುಖಂಡರಾದ ನವೀನ್ ಡಿಸೋಜಾ, ಶುಭೋದಯ ಆಳ್ವ, ಸಂತೋಷ್ ಶೆಟ್ಟಿ, ನೀರಜ್ ಪಾಲ್, ಉಮೇಶ್ ದಂಡೆಕೇರಿ, ಸುಭಾಷ್ ಕೊಲ್ನಾಡ್, ಚಂದ್ರಕಲಾ, ಟಿ.ಕೆ. ಸುಧೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X