Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಏಕರೂಪ ನಾಗರಿಕ ಸಂಹಿತೆಯ ಕರಡು...

ಮಂಗಳೂರು: ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರತಿ ನೀಡಲು ಕೆಥೊಲಿಕ್ ಸಭಾ ಮನವಿ

ವಾರ್ತಾಭಾರತಿವಾರ್ತಾಭಾರತಿ12 July 2023 1:57 PM IST
share
ಮಂಗಳೂರು: ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರತಿ ನೀಡಲು ಕೆಥೊಲಿಕ್ ಸಭಾ ಮನವಿ

ಮಂಗಳೂರು, ಜು. 12: 'ಕೇಂದ್ರ ಸರಕಾರ ಏಕರೂಪ ನಾಗರಿಕ ಸಂಹಿತೆ(ಯುಸಿಸಿ)ಯನ್ನು ತರುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಆದರೆ ಈ ಬಗ್ಗೆ ಪ್ರಶ್ನಾವಳಿ ನೀಡುವ ಬದಲು ಸಂಹಿತೆಯಡಿ ವೈಯಕ್ತಿಕ ಕಾನೂನುಗಳಿಗೆ ಯಾವ ರೀತಿಯಲ್ಲಿ ಪರಿಹಾರ ಒದಗಿಸಲಾಗುತ್ತದೆ ಎಂಬ ಕುರಿತಂತೆ ವಿವರವನ್ನು ಒಳಗೊಂಡ ಕರಡುಪ್ರತಿಯನ್ನು ನೀಡಿದರೆ ಈ ಬಗ್ಗೆ ಅಭಿಪ್ರಾಯ ಮಂಡಿಸಲಾ ಸಾಧ್ಯವಾಗಲಿದೆ' ಎಂದು ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಕಾನೂನು ಸಲಹೆಗಾರ ನ್ಯಾಯವಾದಿ ಪ್ರವೀಣ್ ಪಿಂಟೋ ಹೇಳಿದ್ದಾರೆ.

ಬುಧವಾರ ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ದೇಶದಲ್ಲಿ 10ಕ್ಕೂ ಹೆಚ್ಚು ಪ್ರಬಲ ಧರ್ಮಗಳು, 3 ಸಾವಿರ ಜಾತಿಗಳು, 25 ಸಾವಿರ ಉಪಜಾತಿಗಳು, ಸುಮಾರು 1109 ಪರಿಶಿಷ್ಟ ಜಾತಿಗಳು ಹಾಗೂ 744 ಪರಿಶಿಷ್ಟ ಪಂಗಡಗಳು ಇದ್ದು, ಎಲ್ಲ ಜಾತಿಗಳು ತಮ್ಮದೇ ಆದ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯಗಳನ್ನು, ಭಾಷೆ, ಪರಂಪರೆಯನ್ನು ಹೊಂದಿದೆ. ಆದರೆ ಯುಸಿಸಿ ಯಾವುದೇ ಕರಡನ್ನು ಜನರಿಗೆ ನೀಡದೆ ಅಭಿಪ್ರಾಯ ಕೇಳಿದರೆ ಹೇಗೆ' ಎಂದು ಪ್ರಶ್ನಿಸಿದರು.

'ದೇಶದಲ್ಲಿ ನಾನಾ ಮದುವೆ, ವಿಚ್ಛೇಧನ, ಉತ್ತರಾಧಿಕಾರ ದತ್ತು ಸೇರಿದಂತೆ ಎಲ್ಲಕ್ಕೂ ವೈಯಕ್ತಿಕ ಕಾನೂನುಗಳನ್ನು ಕ್ರೋಡೀಕರಿಸಲಾಗಿದೆ. ಆದರೆ ಭಾರತದ ಹೆಚ್ಚಿನ ಕಾನೂನುಗಳು ಧರ್ಮ, ಜಾತಿ, ವರ್ಗ, ಜನಾಂಗ ಇತ್ಯಾದಿಗಳ ಹೊರತಾಗಿಯೂ ಎಲ್ಲ ನಾಗರಿಕರಿಗೆ ಏಕರೂಪವಾಗಿ ಅನ್ವಯವಾಗಿದ್ದರೂ ಸಹ ಅವರ ಆಚಾರ ಮತ್ತು ಸಂಪ್ರದಾಯಗಳು ವಿಭಿನ್ನವಾಗಿದೆ. ವಿಶಿಷ್ಟ ಆಚರಣೆಗಳನ್ನು ರಕ್ಷಿಸಲು ವೈಯಕ್ತಿಕ ಕಾನೂನು ಬಹಳ ಅಗತ್ಯವಿದೆ. ಇಂತಹ ಕಾನೂನುಗಳನ್ನು ತೆಗೆದುಹಾಕುವುದು ಪದ್ದತಿ ಹಾಗೂ ಆಚರಣೆಗಳಿಗೆ ಮಾರಕವಾಗಿದೆ' ಎಂದರು.

ಸೆ. 8ರಂದು ತೆನೆ ಹಬ್ಬಕ್ಕೆ ರಜೆ ಘೋಷಣೆಗೆ ಆಗ್ರಹ: ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷ ಆಲ್ವಿನ್ ಡಿಸೋಜ ಮಾತನಾಡಿ, ದ.ಕ ಹಾಗೂ ಉಡುಪಿಯಲ್ಲಿ ಸೆ.8ರಂದು ತೆನೆ ಹಬ್ಬವನ್ನು ಅನಾದಿ ಕಾಲದಿಂದಲ್ಲೂ ಕ್ರೈಸ್ತರು ಆಚರಿಸಿಕೊಂಡು ಬರುತ್ತಿದ್ದು, ಈ ಜಿಲ್ಲೆಗಳಲ್ಲಿ ಈ ಹಬ್ಬಕ್ಕೆ ಸರಕಾರಿ ರಜೆಯನ್ನು ಘೋಷಣೆ ಮಾಡಬೇಕು. ಕ್ರೈಸ್ತ ನಿಗಮಕ್ಕೆ 100 ಕೋಟಿ ರೂ. ನೀಡಲಾಗಿದೆ. ಮುಂದೆ ಅದಕ್ಕೆ 200 ಕೋಟಿ ರೂ. ನೀಡಬೇಕು. ಮತಾಂತರ ನಿಷೇಧ ಕಾಯಿದೆಯನ್ನು ಹಿಂದಕ್ಕೆ ಪಡೆಯುವ ಕಾರ್ಯ ಮಾಡುವಂತೆ ಸರಕಾರಕ್ಕೆ ಮನಿವಿ ಮೂಲಕ ಒತ್ತಾಯಿಸಲಾಗುತ್ತದೆ ಎಂದರು.

ಕಥೋಲಿಕ್ ಸಭಾ ಮಂಗಳೂರು ಪ್ರದೇಶದ ಮಾಜಿ ಅಧ್ಯಕ್ಷ ಪಾವ್ಲ್ ರೋಲ್ಫಿ ಡಿಕೋಸ್ತ, ನಿಕಟಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೆರೋ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X