Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಂದೇ ಫ್ಲ್ಯಾಟ್‌ಗಾಗಿ ಹಲವರಿಂದ ಹಣ ಪಡೆದು...

ಒಂದೇ ಫ್ಲ್ಯಾಟ್‌ಗಾಗಿ ಹಲವರಿಂದ ಹಣ ಪಡೆದು ಮೋಸ: ಉಡುಪಿ ವಸತಿ ಸಮುಚ್ಚಯದ ನಿವಾಸಿಗಳಿಂದ ಆರೋಪ

ಒಂದು ಫ್ಲ್ಯಾಟ್‌ಗೆ ಒಂದೇ ಬ್ಯಾಂಕಿನಲ್ಲಿ ಬೇರೆ ಬೇರೆ ಹೆಸರಿನಲ್ಲಿ ಸಾಲ ಮಂಜೂರು

ವಾರ್ತಾಭಾರತಿವಾರ್ತಾಭಾರತಿ17 Jun 2023 11:17 PM IST
share
ಒಂದೇ ಫ್ಲ್ಯಾಟ್‌ಗಾಗಿ ಹಲವರಿಂದ ಹಣ ಪಡೆದು ಮೋಸ: ಉಡುಪಿ ವಸತಿ ಸಮುಚ್ಚಯದ ನಿವಾಸಿಗಳಿಂದ ಆರೋಪ

ಉಡುಪಿ, ಜೂ.17: ನಗರದ ಅಜ್ಜರಕಾಡು ವಾರ್ಡಿನ ಕಾಡಬೆಟ್ಟು ಎಂಬಲ್ಲಿರುವ ಶ್ರೀಲಕ್ಷ್ಮೀ ಇನ್ಟ್ರಾ ಸ್ಟ್ರಕ್ಚರ್‌ನ ಮಾಲಕ ಅಮೃತ್ ಶೆಣೈ ನಿರ್ಮಿಸಿರುವ 9 ಮಹಡಿಯ ವೈಜರ್ ವಸತಿ ಸಮುಚ್ಚಯದ ನಿರ್ಮಾಣ ಕಾಮಗಾರಿ ಯನ್ನು 2014ರಿಂದ ಆರಂಭಿಸಿದ್ದು, ಇದರಲ್ಲಿ ಫ್ಲ್ಯಾಟ್ ಕೊಡುವುದಾಗಿ ನಂಬಿಸಿ ಒಂದೇ ಫ್ಲ್ಯಾಟ್‌ ಗೆ ಒಂದಕ್ಕಿಂತ ಹೆಚ್ಚು ಮಂದಿಯಿಂದ ಹಣ ಪಡೆದು, ಯಾರಿಗೂ ಈವರೆಗೆ ನೋಂದಾಣಿ ಮಾಡಿ ಕೊಟ್ಟಿಲ್ಲ. ಅಲ್ಲದೆ ವಸತಿ ಸಮುಚ್ಚಯಕ್ಕೆ ಮಾಡಿರುವ ಸಾಲವನ್ನು ಮರು ಪಾವತಿಸದೆ 36 ಕುಟುಂಬಗಳನ್ನು ಬೀದಿ ಪಾಲು ಮಾಡುತ್ತಿದ್ದಾರೆ ಎಂದು ವಸತಿ ಸಮುಚ್ಚಯದ ನಿವಾಸಿಗಳು ಆರೋಪಿಸಿದ್ದಾರೆ.

ವಸತಿ ಸಮುಚ್ಚಯದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಸತಿ ಸಮುಚ್ಚಯದ ನಿವಾಸಿ, ವಕೀಲ ಗಿರೀಶ್ ಐತಾಳ್, ಈ ವಸತಿ ಸಮುಚ್ಚಯದ ಕಾಮಗಾರಿ ಇನ್ನು ಕೂಡ ಪೂರ್ಣಗೊಂಡಿಲ್ಲ. ಆದರೂ ಇಲ್ಲಿರುವ 36 ಫ್ಲ್ಯಾಟ್‌ಗಳ ಪೈಕಿ 30 ಫ್ಲ್ಯಾಟ್‌ಗಳಲ್ಲಿ ಸುಮಾರು 150 ಮಂದಿ ವಾಸ ಮಾಡಿಕೊಂಡಿದ್ದಾರೆ. ಒಂದು ಫ್ಲ್ಯಾಟ್‌ಗೆ ಎರಡು ಮೂರು ಮಂದಿಯಿಂದಲೂ ಹಣ ಪಡೆದಿರುವುದರಿಂದ ಅವರು ಬಂದು ವಾಸ ಮಾಡಬಹುದು ಎಂಬ ಭೀತಿಯಲ್ಲಿ ಇವರೆಲ್ಲ ಬಂದು ಕುಳಿತಿದ್ದಾರೆ. ಇವರು ವಿದ್ಯುತ್, ನೀರು ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಇಲ್ಲದೆ ಬದುಕು ನಡೆಸುತ್ತಿದ್ದಾರೆ ಎಂದರು.

ಒಂದು ಫ್ಲ್ಯಾಟ್‌ಗೆ ಒಂದೇ ಬ್ಯಾಂಕಿನಲ್ಲಿ ಬೇರೆ ಬೇರೆಯವರ ಹೆಸರಿನಲ್ಲಿ ಸಾಲ ಕೂಡ ಮಂಜೂರಾಗಿದೆ. ಈ ಬಗ್ಗೆ ಕೆನರಾ ಬ್ಯಾಂಕಿನ ಉಪಮಹಾಪ್ರಬಂಧಕರಿಗೂ ದೂರು ನೀಡಲಾಗಿದೆ. ಹೀಗೆ ಹಣ ಕೊಟ್ಟು ಫ್ಲ್ಯಾಟ್ ಸಿಗದವರು 10ಕ್ಕೂ ಅಧಿಕ ಮಂದಿ ಇದ್ದಾರೆ. ವಸತಿ ಸಮುಚ್ಚಯದ ಕಾಮಗಾರಿ ಇನ್ನು ಶೇ.40ರಷ್ಟು ಬಾಕಿ ಇದೆ. ಆರು ಫ್ಲ್ಯಾಟ್‌ಗಳ ಕಾಮಗಾರಿ ಇನ್ನೂ ನಡೆದಿಲ್ಲ ಎಂದು ಅವರು ದೂರಿದರು.

ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ. ಇತ್ತೀಚೆಗೆ ಅವರ ವಿರುದ್ಧ ಈ ಫ್ಲ್ಯಾಟ್‌ಗೆ ಸಂಬಂಧಿಸಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಕೂಡ ದಾಖಲಾಗಿದೆ. ಈ ನಿಟ್ಟಿನಲ್ಲಿ ಜೂ.19ರಂದು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಮತ್ತು ಕಾನೂನು ಹೋರಾಟಕ್ಕಾಗಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವುದು. ಇವರಿಂದ ಇನ್ನು ಯಾರು ಕೂಡ ಮೋಸ ಹೋಗಬಾರದು ಮತ್ತು ನಮಗೆ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸಿದರು.

ವಸತಿ ಸಮುಚ್ಚಯದ ನಿವಾಸಿಗಳಾದ ಅಬ್ದುಲ್ ರಝಾಕ್, ಪಾಂಡುರಂಗ ರಾವ್, ಜೆಸಿಂತಾ ಮೆಂಡೋನ್ಸಾ, ಜೋಷಿತಾ ಮಥಾಯಸ್ ಮೊದಲಾದವರು ತಮ್ಮ ಅಳಲನ್ನು ತೋಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X