Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರ ಜಾತಿವಾದಿ, ಕೋಮುವಾದಿ,...

ಪತ್ರಕರ್ತರ ಜಾತಿವಾದಿ, ಕೋಮುವಾದಿ, ಭ್ರಷ್ಟಾಚಾರಿಯಾಗುವುದು ಮಾಧ್ಯಮಕ್ಕೆ ಮಾಡುವ ದ್ರೋಹ: ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ1 July 2023 5:38 PM IST
share
ಪತ್ರಕರ್ತರ ಜಾತಿವಾದಿ, ಕೋಮುವಾದಿ, ಭ್ರಷ್ಟಾಚಾರಿಯಾಗುವುದು ಮಾಧ್ಯಮಕ್ಕೆ ಮಾಡುವ ದ್ರೋಹ: ಹರಿಪ್ರಸಾದ್

ಉಡುಪಿ: ಯಾವುದೇ ಸಂದರ್ಭದಲ್ಲೂ ಪತ್ರಕರ್ತರ ಜಾತಿವಾದಿ, ಕೋಮುವಾದಿ, ಭ್ರಷ್ಟಾಚಾರಿ ಆಗಬಾರದು. ಜಾತಿಯ ಆಧಾರದಲ್ಲಿ ಸುದ್ದಿಯನ್ನು ಮಾಡುವುದು ಮತ್ತು ಬೇರೆ ಧರ್ಮದ ಕಾರಣಕ್ಕೆ ವ್ಯಕ್ತಿಯನ್ನು ಟೀಕೆ ಮಾಡುವುದು ಮಾಧ್ಯಮ ಕ್ಷೇತ್ರಕ್ಕೆ ಮಾಡುವ ಮಹಾದ್ರೋಹ. ಪತ್ರಕರ್ತರ ಭ್ರಷ್ಟಾಚಾರಕ್ಕೆ ಒಳಗಾಗದರೆ ಅಂದೇ ಆತನ ಒಳಗಿರುವ ಪತ್ರಕರ್ತ ಮೌನವಾಗು ತ್ತಾನೆ ಎಂದು ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಐಎಂಎ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ರಾಜಕಾರಣಿಗಳು ಮಾಧ್ಯಮಗಳಲ್ಲಿ ಹೂಡಿಕೆ ಮಾಡುತ್ತಿರುವ ಪರಿಣಾಮ ಇಂದು ನ್ಯೂಸ್‌ಗಳು ವೀವ್ಸ್‌ಗಳಾಗಿ ಬದಲಾಗುತ್ತಿದೆ. ಆ ಮಾಧ್ಯಮದಲ್ಲಿರುವ ಪತ್ರಕರ್ತ ಆ ಪಕ್ಷದ ಪರವಾದ ಹಾಗೂ ವಿರೋಧ ಪಕ್ಷಗಳ ನೆಗೆಟಿವ್ ವೀವ್ಸ್ ಗಳನ್ನೇ ಹೇಳುತ್ತಾನೆ. ಅಲ್ಲಿ ನ್ಯೂಸ್ ಹೆಸರಿನಲ್ಲಿ ವೀವ್ಸ್ ಕೊಡುವ, ಅಭಿಪ್ರಾಯ ಹೇಳುವ ವ್ಯವಸ್ಥೆ ಬರುತ್ತದೆ ಎಂದರು.

ಇಂದು ಸಮಾಜದಲ್ಲಿ ಸತ್ಯ ಹೇಳುವುದೇ ಸತ್ಯ ಹೇಳುವುದೇ ಬಹಳ ದೊಡ್ಡ ಸವಾಲಿನ ಕೆಲಸ ಆಗಿದೆ. ಪತ್ರಕರ್ತರು ಯಾವುದೇ ಒತ್ತಡದ ಸಂದಭ ದಲ್ಲೂ ಸತ್ಯವನ್ನು ಹೇಳುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಅಂತಹ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತರ ಜವಾಬ್ದಾರಿಯಾಗಿ ದೆಂದು ಅವರು ತಿಳಿಸಿದರು.

ಪತ್ರಕರ್ತನ್ನು ಕೂಡ ರಾಷ್ಟ್ರೀಯವಾದಿ ಜರ್ನಲಿಸ್ಟ್ ಎಂದು ಕರೆಯುವ ಕಾಲ ಬಂದಿದೆ. ಪತ್ರಕರ್ತರೆಲ್ಲ ಪತ್ರಕತರ್ಕತರಾಗಿದ್ದರೆ ಸಾಕು. ರಾಷ್ಟ್ರೀಯತೆ ಎಂಬುದು ಎಲ್ಲರಲ್ಲೂ ಇದ್ದೇ ಇರುತ್ತದೆ ಎಂದ ಅವರು, ಸರಕಾರಗಳನ್ನು ಎಲ್ಲ ಕಾಲದಲ್ಲೂ ವಿಮರ್ಶೆಗೆ ಒಳಪಡಿಸಬೇಕಾಗಿರುವುದು ಪತ್ರಕರ್ತರ ಹಾಗೂ ಮಾಧ್ಯಮದ ಮುಖ್ಯ ಜವಾಬ್ದಾರಿಯಾಗಿದೆ. ಪತ್ರಕರ್ತರು ತೊಂದರೆಗೆ ಒಳಗಾದವರ ಪರವಾಗಿ ನಿಲ್ಲುವುದು ಕೂಡ ಬಹಳ ಮುಖ್ಯ ಎಂದರು.

ಸಮಾಜದ ಕನ್ನಡಿ ಆಗಿರುವ ಮಾಧ್ಯಮ ಕ್ಷೇತ್ರದಲ್ಲಿರುವ ಒತ್ತಡಗಳನ್ನು ನಿಬಾಯಿಸುವುದೇ ಪತ್ರಕರ್ತನ ಮುಂದಿರುವ ದೊಡ್ಡ ಸವಾಲು ಆಗಿದೆ. ನಾವು ಯಾವತ್ತಿಗೂ ಸತ್ಯ ಹೇಳಲು ಅಂಜಬಾರದು. ಅದಕ್ಕೆ ಅಂಜಿ ಸುಳ್ಳು ಸುದ್ದಿಯ ಪ್ರಚಾರಕರಾದರೆ ನಮಗೂ ಸುಳ್ಳು ಸುದ್ದಿಯ ಪ್ರಚಾರಕಕರಿಗೂ ಯಾವುದೇ ವ್ಯಾತ್ಯಾಸ ಇರುವುದಿಲ್ಲ. ವ್ಯವಸ್ಥೆಯ ಪರವಾಗಿ ಮಾತನಾಡುವುದು ಸುಲಭ. ಅದರಲ್ಲಿ ಯಾವುದೇ ಸವಾಲು ಇರುವುದಿಲ್ಲ. ಸರಕಾರಗಳನ್ನು ವಿಮರ್ಶೆಗೆ ಒಳಪಡಿಸಬೇಕೆ ಹೊರತು ಹೊಗಳುವ ಕೆಲಸ ಮಾಡಬಾರದು ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಮಾತನಾಡಿ, ಮಾಧ್ಯಮಗಳು ಆಡಳಿತ ವರ್ಗಕ್ಕೆ ಕಾಣದ ಸಮಾಜ ದಲ್ಲಿನ ಅಂಕುಡೊಂಕುಗಳ ದೃಷ್ಠಿಕೋನ ಕೊಡುತ್ತವೆ. ಮಾಧ್ಯಮ ಮತ್ತು ಆಡಳಿತ ವರ್ಗ ಜೊತೆಯಾಗಿ ಕೆಲಸ ಮಾಡಿದರೆ ಸಮಾಜದ ಏಳಿಗೆಗೆ ಶ್ರಮಿಸಲು ಸಾಧ್ಯ ವಾಗುತ್ತದೆ. ಪೆನ್ನಿನಲ್ಲಿ ಇರುವ ಶಕ್ತಿಯನ್ನು ಸರಿಯಾಗಿ ಬಳಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ತೋಡಿಕಾನ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ನೀಡಲಾಯಿತು. ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಅರಾಡಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು.

ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ!

ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಈ ವರ್ಷ ೧೫೦ರಿಂದ ೧೬೧ ಸ್ಥಾನಕ್ಕೆ ಕುಸಿತ ಕಂಡಿದೆ. ನಾವು ಈ ಸೂಚ್ಯಂಕದಲ್ಲಿ ನೆರೆಯ ದೇಶಗಳಿಗಿಂತಲೂ ಹಿಂದೆ ಇದ್ದೇವೆ ಎಂದು ಹರಿಪ್ರಸಾದ್ ಎ. ಹೇಳಿದರು.

ಆಳುವ ಸರಕಾರಗಳು ಇಂತಹ ಸೂಚ್ಯಂಕ ತಮ್ಮ ಪರವಾಗಿದ್ದರೆ ಒಪ್ಪಿಕೊಳ್ಳು ತ್ತದೆ. ವಿರುದ್ಧವಾಗಿದ್ದರೆ ವಿದೇಶಿ ಎನ್‌ಜಿಓಗಳು ಮಾಡಿರುವ ಸೂಚ್ಯಂಕ ಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿ ತಿರಸ್ಕರಿಸುತ್ತದೆ. ಈ ಧೋರಣೆ ಎಲ್ಲ ಕಾಲ ದಲ್ಲೂ ಸಾಮಾನ್ಯ ಎಂದು ಅವರು ತಿಳಿಸಿದರು.

ಜನಪರವಾದ ಸುದ್ದಿ ಹಾಗೂ ಸರಕಾರಗಳ ವಿರುದ್ಧ ಟೀಕೆಗಳನ್ನು ಆಳುವ ವರ್ಗ ಎಂದಿಗೂ ಸಹಿಸುವುದಿಲ್ಲ. ಈ ಪರಿಸ್ಥಿತಿ ಇಂದು ದೇಶದ ಎಲ್ಲ ಕಡೆ ಗಳಲ್ಲಿಯೂ ಇದೆ. ಈ ರೀತಿ ಕಾಲದಿಂದ ಕಾಲಕ್ಕೆ ಮಾಧ್ಯಮಗಳ ಕತ್ತು ಹಿಸುಕುವ ಪ್ರಯತ್ನ ನಡೆಯುತ್ತಿರುತ್ತದೆ. ಇದರ ಪರಿಣಾಮವಾಗಿ ಸೂಚ್ಯಂಕ ಗಳಲ್ಲಿ ಭಾರತದ ಸ್ಥಾನ ಕುಸಿಯುತ್ತಿದೆ ಎಂದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X