Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಸಿರೋಡ್ - ಸುರತ್ಕಲ್ ಟೋಲ್‌ಗೇಟ್...

ಬಿಸಿರೋಡ್ - ಸುರತ್ಕಲ್ ಟೋಲ್‌ಗೇಟ್ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು: ಹೋರಾಟ ಸಮಿತಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ15 July 2023 10:51 PM IST
share
ಬಿಸಿರೋಡ್ - ಸುರತ್ಕಲ್ ಟೋಲ್‌ಗೇಟ್ ವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು: ಹೋರಾಟ ಸಮಿತಿ ಆಕ್ರೋಶ

ಸುರತ್ಕಲ್: ಮಳೆಗಾಲದ ಮೊದಲ ತಿಂಗಳ ಮಳೆಗೆ ಬಿಸಿ ರೋಡ್ ನಿಂದ ಸುರತ್ಕಲ್ ಟೋಲ್ ಗೇಟ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಪೂರ್ತಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರಿಗೆ ಮರಣದ ಹೆದ್ದಾರಿಯಾಗಿ ಪರಿಣಮಿಸಿದೆ ಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತ ಪಡಿಸಿದೆ.

ಈ ಸಂಬಂಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಕಟಣೆ ನೀಡಿದ್ದು, ಇದು ಹೆದ್ದಾರಿ ಪ್ರಾಧಿಕಾರ ಮತ್ತು ಸಂಸದರ ನಿರ್ಲಕ್ಷ್ಯತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಹೆದ್ದಾರಿಯ ಕೆಲವು ಗುಂಡಿಗಳಂತೂ ಅರ್ಧ ಅಡಿ ಆಳ, ಕೆಲವು ಮೀಟರ್ ಗಟ್ಟಲೆ ಅಗಲ. ಮಳೆ ಸುರಿಯುತ್ತಿರುವಾಗಲಂತೂ ರಸ್ತೆಯಲ್ಲಿ ನೀರು ತುಂಬಿ ಗುಂಡಿಗಳು ಗೋಚರಿಸುವುದೇ ಇಲ್ಲ. ಕೆಲವು ಗುಂಡಿಗಳು ದಿಢೀರಾಗಿ ಎದುರುಗೊಂಡು ವಾಹನ ಸವಾರರನ್ನು ಕಕ್ಕಾಬಿಕ್ಕಿಯಾಗಿಸುದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರಂತೂ ಈ ಗುಂಡಿಗಳನ್ನು ಗಮನಿಸದಿದ್ದರೆ ಕೆಳಗೆ ಬೀಳಲೇಬೇಕು. ಕಾರು, ಟ್ರಕ್ಕುಗಳು ಗುಂಡಿಗೆ ಬಿದ್ದ ರಭಸಕ್ಕೆ ರಸ್ತೆಯಲ್ಲೆ ಕೆಟ್ಟು ನಿಲ್ಲುತ್ತಿವೆ. ಒಟ್ಟಾರೆ ಸುರತ್ಕಲ್ ಬಿ ಸಿ ರೋಡ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಈಗ ಮೃತ್ಯುವಿನೊಂದಿಗೆ ಸರಸದಂತಾಗಿದ್ದು, ಮರಣದ ಹೆದ್ದಾರಿಯಾಗಿ ಪರಿವರ್ತನೆಗೊಂಡಿದೆ. ಮಳೆಗಾಲ ಇನ್ನೂ ಮೂರು ತಿಂಗಳು ಬಾಕಿ ಇದ್ದು, ಆಗುವ ಅನಾಹುತಗಳು ಅಂದಾಜಿಗೆ ನಿಲುಕದು ಎಂದು ಹೇಳಿದ್ದಾರೆ.

ಒಟ್ಟು ಮೂವತ್ತೇಳು ಕಿ.ಮೀ. ಉದ್ದದ ಈ ರಾಷ್ಟ್ರೀಯ ಹೆದ್ದಾರಿಯ ಒಟ್ಟು ದುರವಸ್ಥೆ ಅಂದಾಜಿಗೆ ನಿಲುಕದು. ಇಷ್ಟು ಅನಾಹುತ, ಹೆದ್ದಾರಿಯಲ್ಲೇ ಮೃತ್ಯು ಕೂಪ ನಿರ್ಮಾಣಗೊಂಡಿದ್ದರೂ ಆಡಳಿತ ವಿರೋಧಿ ಅಲೆಯನ್ನೂ ಎದುರಿಸಿ ದೊಡ್ಡ ಅಂತರದಲ್ಲಿ ಗೆದ್ದ ಬಿಜೆಪಿ ಶಾಸಕರು ಸಣ್ಣ ಶಬ್ದವನ್ನೂ ಎತ್ತಿಲ್ಲ ಎಂದು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

"ಜಿಲ್ಲೆಯ ಶಾಸಕರು, ಸಂಸದರು ರಸ್ತೆ, ಚರಂಡಿಯಂತಹ ಸಣ್ಣ ವಿಚಾರಗಳ ಕುರಿತು ಪ್ರಶ್ನಿಸಬೇಡಿ ಎಂದು ಹೇಳಿಯೇ ಚುನಾವಣೆ ಗೆದ್ದವರು. ಆದ್ದರಿಂದ ಅವರು ಹೆದ್ದಾರಿ ಮೃತ್ಯು ಗುಂಡಿಗಳ ಕುರಿತು ಮಾತಾಡುವುದಿಲ್ಲ. ಅದೇನಿದ್ದರೂ ಜನಪರ ಸಂಘಟನೆಗಳ ಕೆಲಸದಂತಾಗಿದೆ. ಈಗ ಮತ್ತೆ ಹೋರಾಟಕ್ಕಿಳಿಯುವುದೇ ನಮ್ಮ ಮುಂದಿರುವ ದಾರಿ".

- ಮುನೀರ್ ಕಾಟಿಪಳ್ಳ, ಸಂಚಾಲಕರು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ












share
ವಾರ್ತಾಭಾರತಿ
ವಾರ್ತಾಭಾರತಿ
Next Story
X