Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧಾರ್ಮಿಕ ಆಚರಣೆಗಳು ನಮ್ಮನ್ನು...

ಧಾರ್ಮಿಕ ಆಚರಣೆಗಳು ನಮ್ಮನ್ನು ಒಂದುಗೂಡಿಸಬೇಕು: ಮುಹಮ್ಮದ್‌ ಕಂಞಿ

ವಾರ್ತಾಭಾರತಿವಾರ್ತಾಭಾರತಿ8 July 2023 7:15 PM IST
share
ಧಾರ್ಮಿಕ ಆಚರಣೆಗಳು ನಮ್ಮನ್ನು ಒಂದುಗೂಡಿಸಬೇಕು: ಮುಹಮ್ಮದ್‌ ಕಂಞಿ

ಉಳ್ಳಾಲ: ಧರ್ಮಗಳ ದುರ್ವಾಖ್ಯಾನ ಆಗುತ್ತಿರುವ ಕಾಲಘಟ್ಟ ಇದು, ಧರ್ಮ‌ ಅಂದರೆ ಪ್ರೀತಿ ಪ್ರೇಮ ಉಂಟು ಮಾಡುವ, ನಮ್ಮನ್ನೆಲ್ಲ ಒಂದುಗೂಡಿಸುವ ಬದಲಿಗೆ ಪರಸ್ಪರ ವಿದ್ವೇಷವನ್ನು ಉಂಟು ಮಾಡುವ, ವಿಭಜನೆಯನ್ನು ಮಾಡುವುದನ್ನು ನೋಡುತ್ತಿದ್ದೇವೆ, ಎಲ್ಲಾ ಧರ್ಮಗಳು ವಿಭಜನೆಯನ್ನು ಸೃಷ್ಟಿ ಮಾಡುವ ಕಚ್ಚಾ ವಸ್ತುವಾಗಿ ದುರುಪಯೋಗ ಆಗುತ್ತಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಕಾರ್ಯದರ್ಶಿ ಮೊಹಮ್ಮದ್ ಕುಂಞು ಅಭಿಪ್ರಾಯಿಸಿದರು.

ಉಳ್ಳಾಲ ಸದ್ಭಾವನಾ ವೇದಿಕೆ, ಪೊಸಕುರಲ್ ಬಳಗ, ಜಮಾಅತೆ ಇಸ್ಲಾಮೀ ಹಿಂದ್, ಕೆಥೋಲಿಕ್ ಸಭಾ ಪೆರ್ಮನ್ನೂರು ಘಟಕ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಲಯನ್ಸ್ ಕ್ಲಬ್ ಪೆರ್ಮನ್ನೂರು, ನವೋದಯ ಫ್ರೆಂಡ್ಸ್ ಉಳ್ಳಾಲಬೈಲ್ ಜಂಟಿ ಆಶ್ರಯದಲ್ಲಿ ತೊಕ್ಕೋಟ್ಟು ಸಂತ ಸಬೆಸ್ಟಿಯನ್ ಸಭಾಂಗಣದಲ್ಲಿ ಆಯೋಜಿಸಿದ ಈದ್ ಸೌಹಾರ್ದ ಕೂಟದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂತ ಸಬೆಸ್ಟಿಯನ್ ಧರ್ಮ ಕೇಂದ್ರದ ಪ್ರಧಾನ ಧರ್ಮಗುರು ವಂದನೀಯ ಫಾದರ್ ಸಿಪ್ರೀಯನ್ ಪಿಂಟೋ , ಉಚ್ಚಿಲ ಬೋವಿ ಶಿಕ್ಷಣ ಸಂಸ್ಥೆಯ ಸಂಚಾಲಕ ರೋಹಿತಾಶ್ವ ಉಚ್ಚಿಲ್ ಸಂದೇಶ ನೀಡಿದರು. ಉಳ್ಳಾಲ ಸದ್ಭಾವನಾ ವೇದಿಕೆಯ ಅಧ್ಯಕ್ಷ ಪ್ರಸಾದ್ ರೈ ಕಲ್ಲಿಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸದ್ಭಾವನಾ ವೇದಿಕೆ ಜೊತೆ ಕಾರ್ಯದರ್ಶಿ ಇಸಾಕ್ ಹಸನ್ ಪ್ರಾಸ್ತವಿಕವಾಗಿ ಮಾತನಾಡಿದರು. ಸಮಾಜದ ಗಣ್ಯ ಹಿರಿಯ ಸಾಧಕರು, ಉಳ್ಳಾಲ ಮೊಗವೀರ ಸಂಘದ ಮಾಜಿ ಅಧ್ಯಕ್ಷ ಸದಾನಂದ ಬಂಗೇರ, ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (ಕೆ.ಎಸ್.ಟಿ.ಎ) ಮಾಜಿ ರಾಜ್ಯಾಧ್ಯಕ್ಷ ಆನಂದ್ ಕೆ.ಎಸ್, ಕೆಥೋಲಿಕ್ ಸಭಾ ಮಂಗಳೂರು ಪ್ರಾಂತ್ಯದ ಕೇಂದ್ರೀಯ ಸಮಿತಿ ಅಧ್ಯಕ್ಷ ಆಲ್ವಿನ್ ಡಿಸೋಜ ಇವರನ್ನು ಅಭಿನಂದಿಸಲಾಯಿತು.

ಜಮಾಅತೆ ಇಸ್ಲಾಮೀ ಹಿಂದ್ ಉಳ್ಳಾಲ ವಲಯ ಅಧ್ಯಕ್ಷ ಯು.ಎ ಅಬ್ದುಲ್ ಕರೀಮ್, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ್ ಕೊಲ್ಯ, ಕೆಥೋಲಿಕ್ ಸಭಾ ಪೆರ್ಮನ್ನೂರು ಘಟಕ ಮತ್ತು ಲಯನ್ಸ್ ಕ್ಲಬ್ ಪೆರ್ಮನ್ನೂರು ಅಧ್ಯಕ್ಷ ಪ್ರಶಾಂತ್ ಡಿಸೋಜ, ನವೋದಯ ಫ್ರೆಂಡ್ಸ್ ಉಳ್ಳಾಲ ಬೈಲ್ ಗೌರವಾಧ್ಯಕ್ಷ ಪದ್ಮನಾಭ ಉಳ್ಳಾಲಬೈಲ್, ಪೆರ್ಮನ್ನೂರು ಸಂತ ಸಬೆಸ್ಟಿಯನ್ ಧರ್ಮ ಕೇಂದ್ರದ ಪಾಲನಾ ಸಮಿತಿ ಉಪಾಧ್ಯಕ್ಷ ಅರುಣ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

ಹಿರಾ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಹುಸೈನ್ ಕಾಟಿಪಳ್ಳ ಸೌಹಾರ್ದ ಗೀತೆ ಹಾಡಿದರು. ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಸ್ವಾಗತಿಸಿದರು. ಡಾ.ಮೊಹಮ್ಮದ್ ಮುಬೀನ್ ಕಾರ್ಯಕ್ರಮ ನಿರೂಪಿಸಿದರು, ಸದ್ಭಾವನಾ ವೇದಿಕೆಯ ಕೋಶಾಧಿಕಾರಿ ಮೆಲ್ವಿನ್ ಡಿಸೋಜ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X