Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಟನಾತ್ಮಕ ಸೇವೆಯಿಂದ ಸಫಲತೆ...

ಸಂಘಟನಾತ್ಮಕ ಸೇವೆಯಿಂದ ಸಫಲತೆ ಸಾಧ್ಯ-ಸೊಹೈಬ್ ಮೌಲಾನ

ಹಿದಾಯ ಫೌಂಡೇಷನ್ ಗ್ಲೋಬಲ್ ಮೀಟ್-2023

ವಾರ್ತಾಭಾರತಿವಾರ್ತಾಭಾರತಿ16 July 2023 10:07 PM IST
share
ಸಂಘಟನಾತ್ಮಕ ಸೇವೆಯಿಂದ ಸಫಲತೆ ಸಾಧ್ಯ-ಸೊಹೈಬ್ ಮೌಲಾನ

ಕಾವಳಕಟ್ಟೆ, ಜು.16: ಸಂಘಟನೆ ಕೇವಲ ಹೆಸರಿಗಷ್ಠೇ ಇದ್ದರೆ ಸಾಲದು ಅದು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು ಆಗ ಮಾತ್ರ ಅದರಲ್ಲಿ ಸಫಲತೆ ಕಾಣಬಹುದು, ತನ್ಮೂಲಕ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಂಗಳೂರು ಮಸೀದಿಯ ಖತೀಬ್ ಸೊಹೈಬ್ ಮೌಲಾನ ಹೇಳಿದರು.

ಹಿದಾಯ ಪೌಂಡೇಷನ್ ವತಿಯಿಂದ ಕಾವಲಕಟ್ಟೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾದ ಹಿದಾಯ ಫೌಂಡೇಷನ್ ಗ್ಲೋಬಲ್ ಮೀಟ್-2023 ಸಮಾರಂಭದಲ್ಲಿ ಮಾತನಾಡಿ ನಮ್ಮ ಸಮುದಾಯದಲ್ಲಿ ಬಹಳಷ್ಟು ಮಂದಿ ಹೃದಯ ಶ್ರೀಮಂತಿಕೆಯ ದಾನಿಗಳಿದ್ದಾರೆ. ಸಂಘಟನೆಗಳು ಅವರನ್ನು ಬಳಸಿಕೊಂಡು ಸಮುದಾಯದಲ್ಲಿ ಕಾಡುತ್ತಿರುವ ಹಸಿವು, ಶಿಕ್ಷಣ, ಆರೋಗ್ಯ ಸಮಸ್ಯೆಗಳಿಗೆ ಸ್ಪಂಧಿಸುವಂತಾಗಬೇಕು ಎಂದರು.

ಗ್ಲೋಬಲ್ ಮೀಟ್ ಸಂಯೋಜಕ ಝಕರಿಯಾ ಜೋಕಟ್ಟೆ ಮಂಗಳೂರುನಲ್ಲಿ ನಿರ್ಮಾಣವಾಗಲಿರುವ ಎಪಿ ಸೆಂಟರ್‌ನ ಯೋಜನಾ ವಿವರದ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿ, ಇದರ ಕಟ್ಟಡ ನಿರ್ಮಾಣ ಕಾಮಗಾರಿಗೆ ಈಗಾಗಲೇ ಶಿಲಾನ್ಯಾಸ ನೆರವೇರಿದೆ. ಈ ಯೋಜನೆಯನ್ನು ಶಿಕ್ಷಣ ಮತ್ತು ಸಮುದಾಯದ ಒಳಿತನ್ನು ಕೇಂದ್ರವಾಗಿರಿಸಿಕೊಂಡು ರೂಪಿಸಲಾಗಿದ್ದು, ಸಹೃದಯಿ ದಾನಿಗಳು ಇದಕ್ಕೆ ಕೈಜೋಡಿಸಬೇಕು ಎಂದರು.

ಕೇಂದ್ರ ಸಮಿತಿ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜಿ ಮಾತನಾಡಿ, ಹಿದಾಯ ಸಂಸ್ಥೆ ಕಳೆದ 16 ವರ್ಷಗಳಿಂದ ನಿರಂತರವಾಗಿ ಪ್ರತೀ ತಿಂಗಳು 250 ಕುಟುಂಬಕ್ಕೆ ಆಹಾರ ಪೂರೈಕೆ ಮಾಡುತ್ತಿದೆ, ಕಾವಲಕಟ್ಟೆಯಲ್ಲಿ ಹಿದಾಯ ಕಾಲೋನಿಯಲ್ಲಿ 55 ಕುಟುಂಬಗಳಿಗೆ ಮೂಲ ಸೌಕರ್ಯ ವ್ಯವಸ್ಥೆ ಮಾಡಲಾ ಗಿದ್ದು, ಅಲ್ಲಿನ 89 ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ವ್ಯವಸ್ಥೆ ಮತ್ತು 39 ವಿಕಲ ಚೇತನ ವಿದ್ಯಾರ್ಥಿಗಳಿಗೆ ವಿಶೇಷ ಶಾಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವ್ಯವಸ್ಥೆಯನ್ನು ವಿಸ್ತಾರಗೊಳಿಸುವ ಉದ್ದೇಶದೊಂದಿಗೆ ಮಂಗಳೂರುನ್ನು ಕೇಂದ್ರವಾಗಿರಿಸಿಕೊಂಡು ಎಪಿ ಸೆಂಟರ್ ಯೋಜನೆಯನ್ನು ರೂಪಿಸಲಾಗಿದ್ದು, ಇದರ ನಿರ್ಮಾಣಕ್ಕೆ ಸಹೃದಯಿ ದಾನಿಗಳ ಸಹಕಾರ ಬೇಕಾಗಿದೆ ಎಂದರು.

ಸ್ಥಾಪಕ ಅಧ್ಯಕ್ಷ ಖಾಸಿಂ ಅಹಮದ್, ಟ್ರಸ್ಟಿ ಮುಸ್ತಫಾ, ರಿಯಾದ್ ಘಟಕದ ಮಹಮ್ಮದ್ ಆಲಿ, ಜಿದ್ದಾ ಘಟಕದ ಹಮೀದ್ ಆಲಿ, ದಮಾಮ್‌ನ ಅಮ್ಜದ್ ಖಾನ್, ದುಬೈ ಘಟಕದ ಅಖ್ತರ್ ಹುಸೇನ್, ಜುಬೈಲ್ ಘಟಕದ ದ್ಯಾನಿಶ್, ಯೂತ್ ವಿಂಗ್‌ನ ಝಮೀರ್, ಮಹಿಳಾ ಘಟಕದ ನೌಶಿನ್ ರಬೀಯತ್ ತಮ್ಮ ಘಟಕಗಳ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದಲ್ಲಿ ವಿವಿಧ ಸಂಘಟನೆಗಳ ರಶೀದ್ ವಿಟ್ಲ, ಅಬೂಬಕ್ಕರ್ ಪುತ್ತ, ಮಹಮ್ಮದ್ ಅಲಿ ಬಂಟ್ವಾಳ, ಪಿ.ಎಸ್. ಅಬ್ದುಲ್ ಹಮೀದ್ ಹಾಜಿ, ಹಂಝ ಬಸ್ತಿಕ್ಕೋಡಿ, ಶಾಹಿದ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ಘಟಕದ ಪ್ರಧಾನ ಕಾರ‌್ಯದರ್ಶಿ ಆಬಿದ್ ಅಸ್ಗರ್ ವರದಿ ಮಂಡಿಸಿದರು. ಹಕೀಂ ಕಲಾಯಿ ವಂದಿಸಿದರು. ಕಾರ‌್ಯದರ್ಶಿ ಅಬ್ದುಲ್ ರಜಾಕ್, ಅಬ್ದುಲ್ ಹಮೀದ್ ಕಲ್ಲಡ್ಕ ಕಾರ‌್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X