Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲೂ ನೂರರ ಗಟಿ ದಾಟಿದ ಟೊಮೆಟೊ ದರ...

ಉಡುಪಿಯಲ್ಲೂ ನೂರರ ಗಟಿ ದಾಟಿದ ಟೊಮೆಟೊ ದರ !

ವಾರ್ತಾಭಾರತಿವಾರ್ತಾಭಾರತಿ27 Jun 2023 10:32 PM IST
share
ಉಡುಪಿಯಲ್ಲೂ ನೂರರ ಗಟಿ ದಾಟಿದ ಟೊಮೆಟೊ ದರ !

ಉಡುಪಿ, ಜೂ.27: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಟೊಮೆಟೊ, ಕೊತ್ತಂಬರಿ ಸೊಪ್ಪು, ಕಾಯಿಮೆಣಸು ಬೆಲೆ ನೂರರ ಗಟಿ ದಾಟಿದೆ.

ಜೂ.23ರಂದು ಮಾರುಕಟ್ಟೆಯಲ್ಲಿ ಕೆ.ಜಿ.ಗೆ 40-50ರೂ. ಇದ್ದ ಟೊಮೆಟೊ ಕೆ.ಜಿ ಒಂದರ ದರ ರವಿವಾರ ದಢೀರನೇ 90-100ರೂ.ಗೆ ಏರಿಕೆಯಾಗಿದೆ. ಅದೇ ರೀತಿ ಸಾಮಾನ್ಯ ವಾಗಿ ಕೆ.ಜಿ.ಗೆ 40-50ರೂ. ಇದ್ದ ಕೊತ್ತಂಬರಿ ಸೊಪ್ಪಿನ ದರ ಇದೀಗ ಕೆ.ಜಿ.ಗೆ 120ರೂ. ಆಗಿದೆ. ಮಳೆಗಾಲದಲ್ಲಿ ಯಾವುದೇ ಶುಭ ಕಾರ್ಯಗಳು ಇಲ್ಲದ ಕಾರಣ ಸಾಮಾನ್ಯವಾಗಿ ಕೊತ್ತಂಬರಿ ಸೊಪ್ಪಿನ ದರ ಕಡಿಮೆಯೇ ಇರುತ್ತದೆ. ಆದರೆ ಮಳೆಗಾಲದಲ್ಲೂ ಕೊತ್ತಂಬರಿ ಸೊಪ್ಪಿನ ದರ ನೂರರ ಗಟಿ ದಾಟಿರುವುದು ಗ್ರಾಹಕರಿಗೆ ಬರೆ ಎಳೆದಂತಾಗಿದೆ.

ಕಳೆದ ಎರಡು ಮೂರು ವರ್ಷಗಳಿಂದ ಕೆ.ಜಿ.ಗೆ 40ರೂ. ದರ ಇದ್ದ ಶುಂಠಿಗೆ ಕಳೆದ ಒಂದು ತಿಂಗಳಿನಿಂದ ಕೆ.ಜಿ.ಗೆ 240ರೂ. ಆಗಿದೆ. ವರ್ಷ ಇಡೀ ಕಾಯಿ ಮೆಣಸು ದರ ಸಾಮಾನ್ಯವಾಗಿ ಕೆ.ಜಿ.ಗೆ 40-50ರೂ. ಇರುತ್ತದೆ. ಆದರೆ ಈ ಬಾರಿ ಕೆ.ಜಿ. 100ರೂ. ಏರಿಕೆಯಾಗಿರುವುದು ಗ್ರಾಹಕರಿಗೆ ದೊಡ್ಡ ಶಾಕ್ ನೀಡಿದೆ. ಅದೇ ರೀತಿ ಬೀನ್ಸ್ ಕೆ.ಜಿ.ಗೆ 100ರೂ.(ಹಿಂದಿನ ದರ 50-60ರೂ.), ಸುವರ್ಣ ಗೆಡ್ಡೆ ಕೆ.ಜಿ.ಗೆ 80ರೂ.(ಹಿಂದಿನ ದರ 30-40ರೂ.), ಬಿಟ್ರೋಟ್ ಕೆ.ಜಿ.ಗೆ 60ರೂ. ಏರಿಕೆಯಾಗಿದೆ ಎಂದು ಉಡುಪಿಯ ತರಕಾರಿ ವ್ಯಾಪಾರಿ ಶಫೀಕ್ ತಿಳಿಸಿದ್ದಾರೆ.

‘ಈ ಬಾರಿ ಮುಂಗಾರು ಮಳೆ ಬಾರದ ಕಾರಣ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ತರಕಾರಿ ಇಳುವರಿ ಕಡಿಮೆಯಾಗಿದೆ. ಇದರಿಂದ ನಮಗೆ ತರಕಾರಿಗಳು ಪೂರೈಕೆ ಆಗುತ್ತಿಲ್ಲ. ಉಡುಪಿಗೆ ಹೆಚ್ಚಾಗಿ ಎಲ್ಲ ತರಕಾರಿಗಳು ಚಿಕ್ಕಮಗಳೂರು ಜಿಲ್ಲೆಯಿಂದ ಬರುತ್ತದೆ ಈಗ ಅಲ್ಲೇ ಟೊಮೊಟೆ ಕೆ.ಜಿ.ಗೆ 100ರೂ. ಆಗಿದೆ. ಈಗ ನಾವು ಕೋಲಾರ, ನಾಸಿಕ್, ಪೂನಾದಿಂದ ಟೊಮೆಟೊ ತರಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸಗಟು(ವೋಲ್‌ಸೇಲ್) ವ್ಯಾಪಾರದಲ್ಲಿ ಟೊಮೆಟೊ ಕೆ.ಜಿ.ಗೆ 76ರೂ.- 80ರೂ.ನಿಂದ ಬರುತ್ತಿದೆ. ಮೊದಲು ಕೆ.ಜಿ.ಗೆ 25-30ರೂ. ಸಿಗುತ್ತಿತ್ತು. ನಾವು ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ, ಶಿವಮೊಗ್ಗ, ಹಾಸನದಿಂದ ಟೋಮೊಟೋ ಮತ್ತು ತರಕಾರಿ ಬರುತ್ತದೆ. ಈಗ ಮಳೆ ಇಲ್ಲದೆ ಮಾಲು ಇಲ್ಲ. ಹಾಗಾಗಿ ದರ ಏರಿಕೆಯಾಗಿದೆ’

-ಪ್ರಕಾಶ್ ಸಜ್ಜನ್, ಸಗಟು ವ್ಯಾಪಾರಿ, ಆದಿಉಡುಪಿ

"ಸಾಮಾನ್ಯವಾಗಿ ಎಲ್ಲ ರೀತಿಯ ತರಕಾರಿಗಳಿಗೆ ಕೆ.ಜಿ.ಗೆ 30-50ರೂ. ಇರುತ್ತದೆ. ಆದರೆ ಇದೀಗ ಮಳೆಯ ಕೊರತೆಯಿಂದ ಕೆಲವು ತರಕಾರಿ ದರ ನೂರರ ಗಡಿ ದಾಟಿದೆ. ಆದರೆ ನೀರುಳ್ಳಿ ಕೆ.ಜಿ.ಗೆ 20-22ರೂ. ಮತ್ತು ಬಟಾಟೆ ಕೆ.ಜಿ. 25-30ರೂ. ಸ್ಥಿರವಾಗಿದೆ. ಸದ್ಯ ಮಳೆಗಾಲದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಹಾಗಾಗಿ ನಮಗೆ ವ್ಯಾಪಾರ ಕೂಡ ಕಡಿಮೆ ಇರುತ್ತದೆ. ಇದೀಗ ಬೆಲೆ ಕೂಡ ಏರಿಕೆಯಾಗಿರುವುದರಿಂದ ಗ್ರಾಹಕರು ತರಕಾರಿ ಖರೀದಿಸುವಾಗ ಹಿಂದೆ ಮುಂದೆ ನೋಡುತ್ತಾರೆ. ಹಾಗಾಗಿ ವ್ಯಾಪಾರ ತುಂಬಾ ಕಡಿಮೆ ಆಗಿದೆ".

-ಶಫೀಕ್, ತರಕಾರಿ ವ್ಯಾಪಾರಿ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X