Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆಂಟನಾ ಫೌಂಡೇಷನ್‌ನಿಂದ 12 ಕನ್ನಡ...

ವೆಂಟನಾ ಫೌಂಡೇಷನ್‌ನಿಂದ 12 ಕನ್ನಡ ಶಾಲೆಗಳಿಗೆ ವಿವಿಧ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ1 July 2023 9:25 PM IST
share
ವೆಂಟನಾ ಫೌಂಡೇಷನ್‌ನಿಂದ 12 ಕನ್ನಡ ಶಾಲೆಗಳಿಗೆ ವಿವಿಧ ಸೌಲಭ್ಯ

ಉಡುಪಿ, ಜು.1: ರೋಬೊಸಾಫ್ಟ್ ಟೆಕ್ನಾಲಜೀಸ್ ಹಾಗೂ 99 ಗೇಮ್ಸ್‌ನ ಸ್ಥಾಪಕ ರೋಹಿತ್ ಭಟ್ ಅವರು ಸಮಾನ ಮನಸ್ಕ ಸಹೋದ್ಯೋಗಿಗ ಳೊಂದಿಗೆ 2022ರಲ್ಲಿ ಪ್ರಾರಂಭಿಸಿದ ‘ವೆಂಟನಾ ಫೌಂಡೇಷನ್’ ಮೂಲಕ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸೇವಾ ಕಾರ್ಯಗಳನ್ನು ಮಾಡುತಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಶಿಲ್ಪಾ ಭಟ್ ತಿಳಿಸಿದ್ದಾರೆ.

ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿಲ್ಪಾ ಭಟ್, ಫೌಂಡೇಷನ್ ಕಳೆದ 18 ತಿಂಗಳಲ್ಲಿ ಸುಮಾರು 12 ಸರಕಾರಿ ಹಾಗೂ ಅನುದಾನಿತ ಕನ್ನಡ ಶಾಲೆಗಳ ಎಲ್ಲಾ ಮಕ್ಕಳಿಗೆ ಬೇಕಾದ ನೋಟ್ ಪುಸ್ತಕ, ಶಾಲಾ ಬ್ಯಾಗ್ ಹಾಗೂ ಇತರ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದೆ. ಇದರೊಂದಿಗೆ ಶಾಲೆಗಳಿಗೆ ಬೇಕಾದ ಲ್ಯಾಪ್‌ಟಾಪ್, ಪ್ರೊಜೆಕ್ಟರ್ ಹಾಗೂ ನೀರಿನ ಶುದ್ಧೀಕರಮ ಘಟಕಗಳನ್ನು ಕೂಡಾ ನೀಡಿದೆ ಎಂದರು.

ವೆಂಟನಾ ಫೌಂಡೇಷನ್ ಒಂದು ಲಾಭರಹಿತ ಸಂಸ್ಥೆಯಾಗಿದ್ದು, ಜಿಲ್ಲೆಯ ಪ್ರಕೃತಿ ಸಂರಕ್ಷಣೆ, ಸಂಸ್ಕೃತಿ, ಸಮುದಾಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಒಲವನ್ನು ಹೊಂದಿದೆ. ಈಗಾಗಲೇ ಸಂಸ್ಥೆ ಕಳೆದ 18 ತಿಂಗಳಲ್ಲಿ 60 ಲಕ್ಷರೂ.ಗಳಿಗೂ ಅಧಿಕ ಮೊತ್ತವನ್ನು ವಿವಿಧ ಸೇವಾ ಕಾರ್ಯಗಳಿಗೆ ವ್ಯಯಿಸಿದೆ ಎಂದು ಶಿಲ್ಪಾ ಭಟ್ ವಿವರಿಸಿದರು.

ಜೂನ್ ಮೊದಲ ವಾರ ಶಾಲೆಗಳು ಪುನರಾರಂಭಗೊಳ್ಳುತ್ತಿರುವಾಗಲೇ ಬೋಧನಾ ಉಪಕರಣಗಳು, ನೋಟ್ ಪುಸ್ತಕಗಳು ಹಾಗೂ ಇತರ ಸಾಮಗ್ರಿ ಗಳನ್ನು ವಿತರಿಸಲಾಗಿದೆ. 12 ಸರಕಾರಿ ಹಾಗೂ ಅನುದಾನಿತ ಕನ್ನಡ ಶಾಲೆಗಳಿಗೆ ಇದುವರೆಗೆ 12 ಲಕ್ಷರೂ. ಮೌಲ್ಯದ ವಿವಿಧ ಸಾಮಗ್ರಿಗಳು ಹಾಗೂ ಅನುದಾನವನ್ನು ವಿತರಿಸಲಾಗಿದೆ ಎಂದರು.

ವೆಂಟನಾ ಫೌಂಡೇಷನ್ ಅಧ್ಯಕ್ಷ ರೋಹಿತ್ ಭಟ್ ಮಾತನಾಡಿ, ಸಂಸ್ಥೆ ಇಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಹೆಚ್ಚು ಗಮನದಲ್ಲಿಟ್ಟು ತನ್ನ ಸೇವಾ ಕಾರ್ಯಗಳನ್ನು ಮಾಡುತ್ತಿದೆ.ಕನ್ನಡ ಶಾಲಾ ಮಕ್ಕಳಲ್ಲಿರುವ ಕೀಳರಿಮೆಯನ್ನು ಹೋಗಲಾಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲೆಯ ಪರಿಸರ ಸಂರಕ್ಷಣೆ, ಸಾಂಸ್ಕೃತಿಕ ಪುನರುಜ್ಜೀವನ, ಶಿಕ್ಷಣ ಹಾಗೂ ಸಮುದಾಯ ಸೇವೆಗಳಿಗೆ ಹೆಚ್ಚಿನ ಒತ್ತು ನೀಡುವು ದಾಗಿ ತಿಳಿಸಿದ ಅವರು, ಭವಿಷ್ಯದಲ್ಲಿ ಡಿಜಿಟಲ್ ಜಗತ್ತಿಗೆ ಅವಕಾಶದ ಬಾಗಿಲು ತೆರೆಯುವಾಗ ನಾವು ಹಿಂದಿನದನ್ನು ಕಳೆದುಕೊಳ್ಳದಂತೆ ಎಚ್ಚರ ವಹಿಸುವುದು ವೆಂಟನಾ ಫೌಂಡೇಷನ್‌ನ ಮುಖ್ಯ ಗುರಿ ಎಂದರು.

ಫೌಂಡೇಷನ್‌ನ ಮತ್ತೊಬ್ಬ ಟ್ರಸ್ಟಿ ರವೀಂದ್ರ ಕೆ. ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X