Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಪರಶುರಾಮ ಥೀಂ ಪಾರ್ಕ್‌...

ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ ಮಂಜೂರಾಗಲಿಲ್ಲ: ಕಾಂಗ್ರೆಸ್ ಆರೋಪ

ಗೋಮಾಳ ಜಮೀನಿನಲ್ಲಿ ನಿರ್ಮಾಣಗೊಂಡಿರುವ ಈ ಪಾರ್ಕಿನ ನಿರ್ವಣೆಯ ಹೊಣೆ ಯಾರಿಗೆ? ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರೆಶ್ನೆ

ವಾರ್ತಾಭಾರತಿವಾರ್ತಾಭಾರತಿ8 Aug 2023 11:59 AM IST
share
ಕಾರ್ಕಳ: ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ ಮಂಜೂರಾಗಲಿಲ್ಲ: ಕಾಂಗ್ರೆಸ್  ಆರೋಪ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಬೈಲೂರ್ ನಲ್ಲಿ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲ ಎಂದು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಎರ್ಲಪಾಡಿಯ ಉಮ್ಮಿಕಲ್ ಬೆಟ್ಟದಲ್ಲಿ ಪರಶುರಾಮನ ಪಾರ್ಕ್ ನಿರ್ಮಾಣಗೊಂಡಿರುವ ಜಮೀನು, ಗೋಮಾಳದ ಜಮೀನು ಆದ ಕಾರಣ ಮಂಜೂರಾತಿ ಪ್ರಸ್ತಾವನೆಯನ್ನು ತಿರಸ್ಕರಿಸಿ ಬಿಜೆಪಿ ಸರಕಾರವೇ ಅದೇಶ ಹೊರಡಿಸಿದೆ. ಹಾಗಾದರೆ ಪರಶುರಾಮ ಥೀಂ-ಪಾರ್ಕ್ ಕಾನೂನು ಬಾಹಿರವಾಗಿ ನಿರ್ಮಾಣಗೊಂಡಿದೆಯೇ ? ಮುಂದೆ ಅದರ ನಿರ್ವಹಣೆಯ ಜವಾಬ್ದಾರಿ ಯಾರ ಹೊಣೆ ಎಂದು ಪ್ರಶ್ನಿಸಿದ್ದಾರೆ.

ಎರ್ಲಪಾಡಿ ಗ್ರಾಮದ ಸರ್ವೆ ನಂ.329/1ರಲ್ಲಿ 1.58 ಎಕ್ರೆ ಜಮೀನು ಗೋಮಾಳದ ಜಮೀನಾಗಿದ್ದು, ಅದರಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಂ ಪಾರ್ಕ್‌ಗೆ ಆ ಜಾಗವನ್ನು ಮಂಜೂರು ಮಾಡಲು ಅವಕಾಶವಿಲ್ಲ ಎಂದು ಕಾರ್ಕಳ ತಹಶೀಲ್ದಾರ್ ಎರ್ಲಪಾಡಿ ಗ್ರಾ.ಪಂ.ಗೆ ನೀಡಿರುವ ಆದೇಶದಿಂದ ಕೋಟ್ಯಂತರ ರೂಪಾಯಿ ಸರಕಾರದ ಅನುದಾನ ಬಳಕೆ ಮಾಡಿ ನಿರ್ಮಾಣಗೊಂಡ ಥೀಂ ಪಾರ್ಕ್ ಕಾನೂನು ಬಾಹಿರ ಅಭಿವೃದ್ಧಿ ಎನ್ನುವುದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

2019 ರ ನ.8 ರಂದು ಎರ್ಲಪಾಡಿ ಗ್ರಾ.ಪಂ.ಸಾಮಾನ್ಯ ಸಭೆಯಲ್ಲಿ ಈ ಜಮೀನನ್ನು ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಮಾಡುವ ಉದ್ದೇಶಕ್ಕೆ ಕಾಯ್ದಿರಿಸುವಂತೆ ನಿರ್ಣಯ ಮಾಡಿ ಪ್ರಸ್ತಾವನೆಯನ್ನು ತಹಶೀಲ್ದಾರ್‌ಗೆ ಸಲ್ಲಿಸಿತ್ತು. ಡೀಮ್ಡ್ ಫಾರೆಸ್ಟ್, ಗೋಮಾಳ ಎನ್ನುವ ಕಾರಣಗಳಿಂದ ಗ್ರಾ.ಪಂ., ತಹಸೀಲ್ದಾರ್ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಹಾಗೂ ಸರಕಾರದ ಕಂದಾಯ ಅಧೀನ ಕಾರ್ಯದರ್ಶಿವರೆಗೂ ಪತ್ರ ವ್ಯವಹಾರ ನಡೆಯುತ್ತಲೇ ಇತ್ತು. ಆದರೆ ಇನ್ನೊಂದೆಡೆ ಯಾವುದೇ ಅನುಮೋದನೆ ಇಲ್ಲದೆ ಸರಕಾರದ ಗರಿಷ್ಠ ಪ್ರಮಾಣದ ಅನುದಾನ ಅನಧೀಕೃತವಾಗಿ ಈ ಉಮಿಕಲ್ಲ್ ಬೆಟ್ಟದ ಮೇಲೆ ಸುರಿಯಿತು. ತಮ್ಮದೇ ಸರಕಾರ, ತಾನು ಮಾಡಿದ್ದೇ ಸರಿ ಎನ್ನುವ ರೀತಿ ನಡೆದುಕೊಂಡ ಶಾಸಕರು ರಾಜ್ಯದ ಮುಖ್ಯ ಮಂತ್ರಿಯನ್ನೇ ಉದ್ಘಾಟನೆಗೆ ಕರೆಸಿ ಪ್ರಚಾರ ಗಿಟ್ಟಿಸಿಕೊಂಡರು. ಮೂರು ದಿನಗಳ ಕಾಲ ನಡೆದ ಅದ್ದೂರಿಯ ಕಾರ್ಯಕ್ರಮ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆಯಂತೆ ನಡೆಯಿತು. ಪರಶುರಾಮನ ವಿಗ್ರಹದ ದರ್ಶನಕ್ಕೆ ಲಕ್ಷಾಂತರ ಜನ ಆಗಮಿಸಿರುವುದೂ ಕಂಡು ಬಂತು. ಕೊನೇ ಕ್ಷಣದಲ್ಲಿ ಇವೆಲ್ಲವುಗಳು ಕಾನೂನು ಬಾಹಿರ ಎನ್ನುವುದು ಸಾಬೀತಾಗುತ್ತಿದ್ದಂತೆ ಕಾರ್ಕಳದ ಪ್ರಜ್ಞಾವಂತ ಜನತೆ ಮೌನಮುರಿಯುವಂತೆ ಮಾಡಿದೆ ಎಂದು ಹೇಳಿದರು.

ಸುನೀಲ್ ಕುಮಾರ್ ರವರು ಸಚಿವರಾಗಿದ್ದರೂ ಪಾರ್ಕ್ ನಿರ್ಮಾಣಕ್ಕೆ ಜಮೀನು ಕೊಡಿಸಲು ಸಾದ್ಯವಾಗದೆ ಕಾನೂನು ಬಾಹಿರ ಕಾಮಗಾರಿ ನಡೆಸಿದ ಉದ್ದೇಶವೇನು?ಜಮೀನು ಮಂಜೂರಾಗಲಿಲ್ಲ ಎಂದಾದ ಮೇಲೆ ಅಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಹೇಗೆ ಸಾಧ್ಯವಾಯಿತು?ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾಧಿಕಾರಿ ಉಡುಪಿ ಜಿಲ್ಲೆ (ಕೆಪಿಟಿಸಿಎಲ್, ಸಿಎಸ್‌ಆರ್) ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸೇರಿದಂತೆ ಒಟ್ಟು 6,71,92,943 ಕೋಟಿ ರೂ. ಬಿಡುಗಡೆಗೊಂಡಿದ್ದು, ಅನುಮೋದನೆ ಇಲ್ಲದ ಕಾಮಗಾರಿಗೆ ಸರಕಾರ ಕಾರ್ಯಾದೇಶವನ್ನು ನೀಡಲು ಸಾದ್ಯವಿದೆಯೇ? ಸರಕಾರದ ಯಾವುದೇ ಕಾರ್ಯದೇಶವಿಲ್ಲದೆ ನಿರ್ಮಿತಿ ಕೇಂದ್ರ ಇಷ್ಟೇಲ್ಲಾ ಕಾಮಗಾರಿಗಳನ್ನು ಯಾವ ಆಧಾರದ ಮೇಲೆ ಮಾಡಿದೆ? ಮತ್ತು ಗುತ್ತಿಗೆದಾರರಿಗೆ ಹಣ ಪಾವತಿ ಹೇಗೆ ಸಾದ್ಯವಾಯಿತು? ಸರಕಾರದ ಅಧೀನಕಾರ್ಯದರ್ಶಿ ಮತ್ತು ಜಿಲ್ಲಾದಿಕಾರಿಯವರ ಆದೇಶ ಇದ್ದರೂ, ಪಾರ್ಕಿನಲ್ಲಿ ಕಾಮಗಾರಿ ನಡೆಯಲಿದೆ ಹಾಗಾಗಿ ಬೇಟಿಯನ್ನು ನಿರ್ಭಂದಿಸಿದ್ದೇವೆ ಎಂದು ತಾಹಶೀಲ್ದಾರರು ಪತ್ರಿಕಾ ಹೇಳಿಕೆಯನ್ನು ನೀಡಿ ಮತ್ತೆ ಅವರೆ ಗ್ರಾಂ.ಪಂ ಪಿಡಿಓ ಗೆ ಅದೇಶ ಹೊರಡಿಸಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಲ್ಲವೇ?ಪರಶುರಾಮ ಥೀಂ ಪಾರ್ಕ್ ಹಿಂದುಗಳ ಧಾರ್ಮಿಕ ಭಾವನೆಯ ಪ್ರತಿಬಿಂಬ ಇಂತಹ ಸ್ಥಳದಲ್ಲಿ ಇಷ್ಟು ದೊಡ್ಡ ಗೊಂದಲ ಸೃಷ್ಟಿಯಾಗಿರುವುದು ಪರಶುರಾಮನಿಗೆ ಮಾಡಿದ ಅವಮಾನವಲ್ಲವೆ? ಮುಂದೆ ಅವರ ಹೆಸರಿನಲ್ಲಿ ಸಂಘರ್ಷದ ದಿನಗಳಿಗಾಗಿ ಎದುರು ನೋಡುತ್ತಿದ್ದಾರೆಯೇ? ಗೋಮಾಳ ಜಮೀನು ಆಗಿರುವುದರಿಂದ ಮೊದಲಿನಿಂದಲೂ ಅಕ್ಷೇಪ ವ್ಯಕ್ತಪಡಿಸುತ್ತಿದ್ದ ಅರಣ್ಯ ಇಲಾಖೆಯ ಮುಂದಿನ ನಡೆ ಏನಿರಬಹುದು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ ಎಂದರು.

ಪರಶುರಾಮ ಥೀಂ-ಪಾರ್ಕ್ ನಿರ್ಮಾಣಕ್ಕೆ ನಮ್ಮ ವಿರೋಧವಾಗಲಿ, ಆಕ್ಷೇಪವಾಗಲಿ ಇಲ್ಲ. ಆದರೆ ಮುಚ್ಚಿಟ್ಟಿರುವ ಸತ್ಯವನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ ಅದನ್ನು ಮಾಡಿದ್ದೇವೆ. ಶಾಸಕರು ಕೂಡ ಈ ಬಗ್ಗೆ ಸತ್ಯಾಸತ್ಯತೆಯನ್ನು ಜನತೆಗೆ ತಿಳಿಸುವಂತೆ ಆಗ್ರಹಿಸುತ್ತೇನೆ ಎಂದು ಶುಭದರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಉಪಾಧ್ಯಕ್ಷ ಅಜಿತ್ ಹೆಗ್ಡೆ, ಕಾರ್ಯದರ್ಶಿ ವಿವೇಕಾನಂದ ಶೆಣೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X