Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಾತೃಭಾಷೆ ಕೊಂಕಣಿಯಾದ ಕಾರಣಕ್ಕೆ...

ಮಾತೃಭಾಷೆ ಕೊಂಕಣಿಯಾದ ಕಾರಣಕ್ಕೆ ಕಾಸರಗೋಡಿನ ವಿದ್ಯಾರ್ಥಿನಿಗೆ ಉನ್ನತ ಶಿಕ್ಷಣ ನಿರಾಕರಣೆ

ಐವನ್ ಡಿಸೋಜಾರಿಂದ ಪರಿಷತ್ ಕಲಾಪದಲ್ಲಿ ಪ್ರಸ್ತಾಪ

ವಾರ್ತಾಭಾರತಿವಾರ್ತಾಭಾರತಿ16 July 2024 3:05 PM IST
share
ಮಾತೃಭಾಷೆ ಕೊಂಕಣಿಯಾದ ಕಾರಣಕ್ಕೆ ಕಾಸರಗೋಡಿನ ವಿದ್ಯಾರ್ಥಿನಿಗೆ ಉನ್ನತ ಶಿಕ್ಷಣ ನಿರಾಕರಣೆ

ಮಂಗಳೂರು, ಜು. 16: ಕಾಸರಗೋಡಿನಲ್ಲಿ 1ರಿಂದ 10 ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತ ಕಾಸರಗೋಡಿನ ವಿದ್ಯಾರ್ಥಿನಿ ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಿಇಟಿ ಬರೆದು ಉತ್ತೀರ್ಣಳಾಗಿದ್ದರೂ ಸೀಟು ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆನ್ನುವ ವಿಚಾರವನ್ನು ವಿಧಾನ ಪರಿಷತ್‌ನ ಕಸಾಪದ ಶೂನ್ಯ ವೇಳೆಯಲ್ಲಿ ಸದಸ್ಯರಾದ ಐವನ್ ಡಿಸೋಜಾ ಪ್ರಸ್ತಾಪಿಸಿದ್ದಾರೆ.

ಶಾಲಾ ಪ್ರಮಾಣ ಪತ್ರದಲ್ಲಿ ವಿದ್ಯಾರ್ಥಿನಿಯ ಮಾತೃಭಾಷೆ ಕೊಂಕಣಿ ಎಂದು ದಾಖಲಾಗಿರುವ ಕಾರಣ ಆಕೆಗೆ ಪ್ರವೇಶ ನಿರಾಕರಿಸಲಾಗಿದೆ. ಹೈಯರ್ ಸೆಕೆಂಡರಿಯಲ್ಲಿ ದ್ವಿತೀಯ ಭಾಷೆಯಾಗಿ ಕನ್ನಡವನ್ನೇ ಆಯ್ದುಕೊಂಡಿದ್ದಳು. ಹೈಯರ್ ಸೆಕೆಂಡರಿಯಲ್ಲಿ ಶೇ. 80 ಅಂಕಗಳನ್ನು ಪಡೆದು ಕರ್ನಾಟಕ ಸಿಇಟಿಯಲ್ಲಿ ಉತ್ತೀರ್ಣರಾಗಿ ಬಿಎಸ್ಸಿ (ನರ್ಸಿಂಗ್)ಗೆ ಅರ್ಹತೆ ಪಡೆದಿದ್ದರು.ಆದರೆ ಪ್ರಮಾಣ ಪತ್ರ ಪರಿಶೀಲನೆ ವೇಳೆ ವಿದ್ಯಾರ್ಥಿನಿಯ ಮಾತೃಭಾಷೆ ಕೊಂಕಣಿ ಎಂದು ದಾಖಲಾಗಿರುವುದನ್ನು ಕಾರಣವಾಗಿಸಿ ಆಕೆಗೆ ಸೀಟು ನಿರಾಕರಿಸಲಾಗಿದೆ.

ಸಿಇಟಿ ಪರೀಕ್ಷೆಗೆ ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿಯೂ ವಿದ್ಯಾರ್ಥಿನಿ ಉತ್ತೀರ್ಣರಾಗಿದ್ದಾರೆ. ಗಡಿನಾಡು ಕಾಸರಗೋಡಿನ ಕನ್ನಡ ವಿದ್ಯಾರ್ಥಿನಿ ಎಂಬ ಪ್ರಮಾಣ ಪತ್ರ ಸಲ್ಲಿಸಿದರೂ ಅಧಿಕಾರಿಗಳು ಗಣನೆಗೆ ತೆಗೆದುಕೊಂಡಿಲ್ಲ. ಕನ್ನಡ, ತುಳು, ಕೊಡವ ಅಥವಾ ಬ್ಯಾರಿ ಭಾಷೆಗಳು ಮಾತೃಭಾಷೆಯಾಗಿದ್ದರೆ ಮಾತ್ರವೇ ಕರ್ನಾಟಕದಲ್ಲಿ ಸೀಟು ಲಭಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಸಿಇಟಿ ಅರ್ಹತಾ ಮಾನದಂಡ- 2024ರಲ್ಲಿ ಮಾತೃಭಾಷೆ ಕನ್ನಡ, ತುಳು ಮತ್ತು ಕೊಡವ ಎಂದು ಮಾತ್ರ ನಮೂದಿಸಲಾಗಿದೆ. ಕ್ರೈಸ್ತರು ಕೊಂಕಣಿ ಭಾಷೆ ಮಾತನಾಡುವವರು. ಕಾಸರಗೋಡಿನ ಗಡಿನಾಡು ಪ್ರದೇಶದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. ಆದ್ದರಿಂದ ಕೊಂಕಣಿ ಭಾಷೆ ಸೇರಿಸಿ ಉನ್ನತ ಶಿಕ್ಷಣ ಸಚಿವರು ಆದೇಶ ಹೊರಡಿಸಬೇಕು ಎಂದು ಐವನ್ ಡಿಸೋಜಾರವರು ಶೂನ್ಯ ವೇಳೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X