Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು | ಸಂಗೀತ ರಸಮಂಜರಿ...

ಕಾಸರಗೋಡು | ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ; ಕನಿಷ್ಠ 15 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ23 Nov 2025 11:43 PM IST
share
ಕಾಸರಗೋಡು | ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ; ಕನಿಷ್ಠ 15 ಮಂದಿಗೆ ಗಾಯ
ನಿರೀಕ್ಷೆಗೂ ಮೀರಿ ಸೇರಿದ್ದ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ.

ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡು ಫ್ಲೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಪ್ರಭಾವಿ, ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸಾವಿರಾರು ಮಂದಿ ಸೇರಿದ್ದರು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡಲಾಗಿತ್ತು. ಟಿಕೆಟ್ ಪಡೆದವರ ಜೊತೆ ಟಿಕೆಟ್ ಇಲ್ಲದವರೂ ಪ್ರಮುಖ ಗಾಯಕರನ್ನು ನೋಡುವ ಉತ್ಸಾಹದಲ್ಲಿ ಮೈದಾನಕ್ಕೆ ಒಳನುಗ್ಗಲು ಯತ್ನಿಸಿದಾಗ ಗೊಂದಲ ಸೃಷ್ಟಿಯಾಗಿ, ಹಲವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದರು ಎನ್ನಲಾಗಿದೆ. ಪೊಲೀಸರು ನೀಡಿದ್ದ ಎಚ್ಚರಿಕೆಯನ್ನೂ ನಿರ್ಲಕ್ಷಿಸಿದ್ದರು ಎಂದು ಆರೋಪಿಸಲಾಗಿದೆ.

ಆ ಬಳಿಕ ಗುಂಪನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಕಾರ್ಯಕ್ರಮದ ಆರಂಭಕ್ಕೂ ಮೊದಲೇ ಜಮಾಯಿಸಿದ್ದ ಜನಸಂದಣಿಯಿಂದ ಸಂಚಾರವೂ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು ಎಂದು ತಿಳಿದು ಬಂದಿದೆ.

ಹನಾನ್ ಷಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮಾಹಿತಿ ಹರಡುತ್ತಿದ್ದಂತೆ ಜನರ ಸಂಖ್ಯೆ ಹೆಚ್ಚಾಯಿತು ಎಂದು ಮೂಲಗಳು ತಿಳಿಸಿವೆ. ನಿರೀಕ್ಷೆಗೂ ಅಧಿಕ ಜನರು ಆಗಮಿಸಿದ್ದ ಕಾರಣ ಆಯೋಜಕರು ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ ವೇದಿಕೆಯೇರಿ ಕಾರ್ಯಕ್ರಮ ಸ್ಥಗಿತವಾಗಿರುವ ಮಾಹಿತಿ ನೀಡಿದರು. ಕಾರ್ಯಕ್ರಮದ ನಿರ್ವಾಹಕರು ತುರ್ತು ನಿರ್ಗಮನಗಳನ್ನು ತೆರೆದು ಜನರನ್ನು ಹೊರಗೆ ಕಳುಹಿಸುವಂತೆ ಮೈಕ್ ಮೂಲಕ ಮನವಿ ಮಾಡಿಕೊಂಡರು. ಆ ಬಳಿಕ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮೈದಾನ ಅಲ್ಲದೆ ಹೊರಗಡೆ ಜನರಿಂದ ಆಂಬುಲೆನ್ಸ್ ಸೇರಿದಂತೆ ಅಗತ್ಯ ಸೇವೆಗಳಿಗೆ ಪೊಲೀಸರು ಪರದಾಡುವಂತಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X