Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಜ್ಞಾನವೆಂಬ ಆಯುಧವೇ ಸಮಸ್ತದ ಯಶಸ್ಸು:...

ಜ್ಞಾನವೆಂಬ ಆಯುಧವೇ ಸಮಸ್ತದ ಯಶಸ್ಸು: ಪಾಣಕ್ಕಾಡ್ ಶಿಹಾಬ್ ತಂಙಳ್

ವಾರ್ತಾಭಾರತಿವಾರ್ತಾಭಾರತಿ4 Feb 2026 10:52 PM IST
share
ಜ್ಞಾನವೆಂಬ ಆಯುಧವೇ ಸಮಸ್ತದ ಯಶಸ್ಸು: ಪಾಣಕ್ಕಾಡ್ ಶಿಹಾಬ್ ತಂಙಳ್
ಸಮಸ್ತ ಶತಾಬ್ದಿ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಕಾಸರಗೋಡು: ಭಯೋತ್ಪಾದನೆಯ ಮೂಲಕ ಉದಯಿಸಿದ ಯಾವುದೇ ಚಳವಳಿಗೂ ದೀರ್ಘಕಾಲಿಕ ಸ್ಥಿರತೆ ಸಾಧಿಸಲು ಸಾಧ್ಯವಿಲ್ಲ. ಜ್ಞಾನವನ್ನು ಆಯುಧವನ್ನಾಗಿ ಮಾಡಿಕೊಂಡಿರುವುದೇ ಸಮಸ್ತದ ಯಶಸ್ಸು. ಆದ್ದರಿಂದಲೇ ಸಮಸ್ತವು ಮುಸ್ಲಿಂ ಸಮುದಾಯದ ನಂಬಿಕೆಯ ಪ್ರತಿರೂಪವಾಗಿದೆ ಎಂದು ಪಾಣಕ್ಕಾಡ್ ಸೈಯದ್ ಸ್ವಾದಿಖಲಿ ಶಿಹಾಬ್ ತಂಙಳ್ ಹೇಳಿದರು.

ಕಾಸರಗೋಡಿನ ಕುನಿಯದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಸಮಸ್ತ ಶತಮಾನೋತ್ಸವ ಮಹಾ ಸಮ್ಮೇಳನವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.


ಸಮಸ್ತ ಕೋಶಾಧಿಕಾರಿ ಪಿ.ಪಿ. ಉಮರ್ ಮುಸ್ಲಿಯಾರ್ ಕೊಯ್ಯೋಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೈಯದ್ ಅಲಿ ತಂಙಳ್ ಕುಂಬೋಳ್ ದುಆಗೈದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೈರೋ ಇಸ್ಲಾಮಿಕ್ ರಿಸರ್ಚ್ ಅಸೆಂಬ್ಲಿ ಕ್ಯಾಬಿನೆಟ್ ಸಚಿವ ಡಾ. ಮುಹಮ್ಮದ್ ಅಬ್ದು ದಾಇಂ ಅಲ್ ಜುಂದಿ ಶುಭ ಹಾರೈಸಿದರು.‌


ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಇಸ್ಲಾಂ ಧರ್ಮ ಶಿಕ್ಷಣ ಬೋರ್ಡ್ ಪ್ರಧಾನ ಕಾರ್ಯದರ್ಶಿ ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್ ಮುಖ್ಯ ಭಾಷಣಗೈದರು. ಶಾಸಕರಾದ ಎನ್.ಎ. ನೆಲ್ಲಿಕುನ್ನ್, ಎ.ಕೆ.ಎಂ. ಅಶ್ರಫ್, ಶಾಸಕ ಸಿ.ಎಚ್. ಕುಂಞಂಬು, ಎಂ. ರಾಜಗೋಪಾಲ್, ಇ. ಚಂದ್ರಶೇಖರನ್, ಮುಶಾವರ ಸದಸ್ಯರಾದ ಕೆ. ಹೈದರ್ ಫೈಝಿ ಪನಂಗಾಂಗರ, ಡಾ. ಬಹಾವುದ್ದೀನ್ ಮುಹಮ್ಮದ್ ನದ್ವಿ, ಬಿ.ಕೆ. ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಸಮಸ್ತ ಕೇಂದ್ರ ಮುಶಾವರ ಸದಸ್ಯರ ಸಹಿತ ಹಿರಿಯ ಉಲಮಾಗಳು, ಧಾರ್ಮಿಕ, ಸಾಮಾಜಿಕ ನಾಯಕರು ಉಪಸ್ಥಿತರಿದ್ದರು.


ಸಮಸ್ತ ಕಾರ್ಯದರ್ಶಿ ಕೆ. ಉಮರ್ ಫೈಝಿ ಮುಕ್ಕಂ ಸ್ವಾಗತಿಸಿದರು. ಕಾಸರಗೋಡು ಜಿಲ್ಲಾ ಸ್ವಾಗತ ಸಮಿತಿ ವರ್ಕಿಂಗ್ ಕನ್ವೀನರ್ ಅಬ್ದುಲ್ಲ ಫೈಝಿ ಚೆಂಗಳ ವಂದಿಸಿದರು.

*ಸಮಸ್ತವು ಜಾತ್ಯತೀತೆಯ ಕಾವಲು ಶಕ್ತಿ: ಜಿಫ್ರಿ ತಂಙಳ್

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಸ್ತ ಅಧ್ಯಕ್ಷ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಮಾತನಾಡಿ, ಸಮಸ್ತವು ಕಳೆದೊಂದು ಶತಮಾನಗಳ ಕಾಲ ಧಾರ್ಮಿಕ ಚಟುವಟಿಕೆಗಳಿಗೆ ನೇತೃತ್ವ ನೀಡುವುದರ ಜೊತೆಗೆ ಈ ದೇಶದ ಜಾತ್ಯತೀತೆಯ ಕಾವಲು ಶಕ್ತಿಯಾಗಿ ನಿಂತಿದೆ. ಧರ್ಮದ ಮೂಲ ತತ್ವಗಳಿಗೆ ಯಾವುದೇ ಚ್ಯುತಿ ಬಾರದೆ ಆದರ್ಶಗಳಿಗೆ ಬದ್ಧವಾಗಿ ಚಳುವಳಿಯನ್ನು ಮುಂದುವರೆಸಿಕೊಂಡು ಬಂದಿದೆ ಎಂದರು.

*ಶತಾಬ್ದಿ ಸ್ಮಾರಕ ಗ್ರಂಥ ಬಿಡುಗಡೆ

ಶತಾಬ್ದಿ ಸ್ಮಾರಕ ಗ್ರಂಥವನ್ನು ಸೈಯದ್ ಅಬ್ಬಾಸಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಅವರು ಕುನಿಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್ ಸ್ಥಾಪಕಾಧ್ಯಕ್ಷ ಇಬ್ರಾಹಿಂ ಅಹ್ಮದ್ ಅಲಿ ಹಾಜಿ ಕುನಿಯ ಅವರುಗೆ ಹಸ್ತಾಂತರಿಸಿ ಬಿಡುಗಡೆಗೊಳಿಸಿದರು.

ಶತಾಬ್ದಿ ಸ್ಮಾರಕ ಗ್ರಂಥವನ್ನು ಸಂಪಾದಕ ಅನ್ವರ್ ಸ್ವಾದಿಕ್ ಫೈಝಿ ತಾನೂರು ಪರಿಚಯಿಸಿದರು. ಶತಮಾನೋತ್ವದ ಅಂಗವಾಗಿ ಹೊರ ತಂದ ಪ್ರಮುಖ ಪುಸ್ತಕವನ್ನು ಕೇರಳ ಬಂದರು ಮತ್ತು ಪುರಾತತ್ವ ಇಲಾಖೆ ಸಚಿವ ರಾಮಚಂದ್ರನ್ ಕಡನ್ನಪ್ಪಳ್ಳಿ ಅವರು ಅಬ್ದುಲ್ ಮಜೀದ್ ಹಾಜಿ ಕುಟ್ಟಿಕೋಲ್ ಅವರಿಗೆ ಹಸ್ತಾಂತರಿಸಿದರು.

ಶತಾಬ್ದಿ ವಿಶೇಷ ಸಂಚಿಕೆಯನ್ನು ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಅವರು ಹದಾಬಾ ಗ್ರೂಪ್ ಆಫ್ ಕಂಪನೀಸ್, ಜಿದ್ದಾ ಸ್ಥಾಪಕಧ್ಯಕ್ಷ ಡಾ. ಇಸ್ಸುದ್ದೀನ್ ಹಾಜಿ ಕುಂಬಳ ಅವರಿಗೆ ಹಸ್ತಾಂತರಿಸಿ ಬಿಡುಗಡೆಗೊಳಿಸಿದರು.


100 ಪತಾಕೆಗಳ ಧ್ವಜಾರೋಹಣ

ಬುಧವಾರ ಮಧ್ಯಾಹ್ನ ತಳಂಗರ ಮಾಲಿಕ್ ದಿನಾರ್ ನಿಂದ ಕುಣಿಯಾ ವರಕ್ಕಲ್ ಮುಲ್ಲಕ್ಕೋಯ ತಂಙಳ್ ನಗರ ವರೆಗೆ ವಿಖಾಯ ತಂಡದ ಜಾಥದೊಂದಿಗೆ ಘೋಷಯಾತ್ರೆ ನಡೆಯಿತು. ಸಂಜೆ ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ಅಧ್ಯಕ್ಷ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ ಸಮಸ್ತ ಮುಶಾವರ ಸದಸ್ಯರು, ಸಾದಾತುಗಳು, ಪೋಷಕ ಸಂಘಟನೆಗಳ ನಾಯಕರ ಸಹಿತ ಗಣ್ಯರು 100 ಧ್ವಜಗಳನ್ನು ಧ್ವಜಾರೋಹಣ ಮಾಡಿದರು. ಈ ಸಂದರ್ಭ ಕುಂಬೋಳ್ ಕುಂಞಿ ಕೋಯ ತಂಙಳ್, ಸಮಸ್ತ ಪ್ರಧಾನ ಕಾರ್ಯದರ್ಶಿ ಶೈಖುನಾ ಆಲಿಕುಟ್ಟಿ ಉಸ್ತಾದ್ ಮತ್ತಿತರರು ಉಪಸ್ಥಿತರಿದ್ದರು.

















Tags

KnowledgeweaponsuccessPanakkad Shihab Tangal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X