ಮಲಪ್ಪುರಂನಲ್ಲಿ ರಸ್ತೆ ಅಪಘಾತ: ವರ್ಕಾಡಿಯ ಯುವಕ ಮೃತ್ಯು

ಕಾಸರಗೋಡು: ಮಲಪ್ಪುರಂ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ತೋಕೆ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಮೃತರನ್ನು ತೋಕೆ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಬದ್ರುಲ್ ಹಫೀಝ್(24) ಎಂದು ಗುರುತಿಸಲಾಗಿದೆ.
ಮಲಪ್ಪುರಂನಲ್ಲಿ ಜ್ಯೂಸ್ ಅಂಗಡಿ ನಡೆಸುತ್ತಿದ್ದ ಹಫೀಝ್, ಸೋಮವಾರ ನಡೆಯಲಿರುವ ಕುಟುಂಬದ ಮದುವೆಯೊಂದರಲ್ಲಿ ಭಾಗಿಯಾಗುವ ಉದ್ದೇಶದಿಂದ ಶನಿವಾರ ಬೈಕಿನಲ್ಲಿ ಊರಿಗೆ ಹೊರಟಿದ್ದರು. ಈ ಸಂದರ್ಭ ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಹಫೀಝ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತದೇಹ ಇಂದು (ಜೂ.21) ಸಂಜೆ ಊರಿಗೆ ತಲುಪಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story






