Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಮಂಜೇಶ್ವರ: ಹೊಸಂಗಡಿಯಲ್ಲಿ ಕರ್ನಾಟಕ ಮೂಲದ...

ಮಂಜೇಶ್ವರ: ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ಕಾರ್ಮಿಕನ ಕೊಲೆ

ವಾರ್ತಾಭಾರತಿವಾರ್ತಾಭಾರತಿ5 Sept 2026 1:01 PM IST
share
ಮಂಜೇಶ್ವರ: ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ಕಾರ್ಮಿಕನ ಕೊಲೆ

ಕಾಸರಗೋಡು: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿ ಸಮೀಪದ ಅಂಗಡಿಪದವಿನಲ್ಲಿ ಕರ್ನಾಟಕ ಮೂಲದ ಕಾರ್ಮಿಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ.

ಉತ್ತರ ಕರ್ನಾಟಕದ ವಿಜಯನಗರ (ಹೊಸಪೇಟೆ) ಜಿಲ್ಲೆಯ ಲಿಂಗನಾಯಕನಹಳ್ಳಿ ನಿವಾಸಿ ರಮೇಶ್ ಯಾನೆ ಸತೀಶ್ (38) ಕೊಲೆಯಾದ ವ್ಯಕ್ತಿ.

ಅಂಗಡಿಪದವಿನ ನರಸಿಂಹ ಮೂರ್ತಿ ಎಂಬವರಿಗೆ ಸೇರಿದ ಹಳೆಯ ಎರಡು ಅಂತಸ್ತಿನ ಮನೆಯ ಕೋಣೆಯಲ್ಲಿ ಈ ಕೃತ್ಯ ನಡೆದಿದೆ. ಈ ಹಳೆಯ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಕೃಷ್ಣಪ್ಪ ಎಂಬವರು ಅಡುಗೆ ಕೋಣೆಗೆ ತೆರಳಿದಾಗ ರಮೇಶ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ವಿಷಯ ತಿಳಿದ ತಕ್ಷಣ ಎಎಸ್ಪಿ ಅಶೋಕ್ ಅಚ್ಯುತ್ ಹಾಗೂ ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಎಂ.ವಿ. ವಿಷ್ಣುಪ್ರಸಾದ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದೆ.

ಮೃತನ ತಲೆ ಸಂಪೂರ್ಣ ಜಜ್ಜಿದ ಸ್ಥಿತಿಯಲ್ಲಿದ್ದು, ದೇಹದ ಇತರೆಡೆಗಳಲ್ಲೂ ತೀವ್ರವಾದ ಗಾಯಗಳಾಗಿವೆ. ಅಡುಗೆ ಕೋಣೆಯಲ್ಲಿದ್ದ ತೂಕದ ರುಬ್ಬುವ ಕಲ್ಲಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದು, ಇದೇ ಕಲ್ಲಿನಿಂದ ತಲೆಗೆ ಜಜ್ಜಿ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆಯಾದ ರಮೇಶ್ ಬೇರೆಡೆಯೇ ವಾಸವಿದ್ದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. ಒಂದು ತಿಂಗಳ ಹಿಂದೆಯಷ್ಟೇ ಅವರು ಊರಿಗೆ ಹೋಗಿ ಮರಳಿದ್ದರು ಎನ್ನಲಾಗಿದೆ. ಆದರೆ, ಘಟನೆ ನಡೆದ ದಿನ ರಮೇಶ್ ಅವರನ್ನು ಈ ಮನೆಗೆ ಕರೆದುಕೊಂಡು ಬಂದಿದ್ದ ಕರ್ನಾಟಕ ಮೂಲದ ಮತ್ತೊಬ್ಬ ವ್ಯಕ್ತಿ ಪ್ರಸ್ತುತ ನಾಪತ್ತೆಯಾಗಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸತೀಶ್ ಈ ಮನೆಗೆ ಬರಲು ಕಾರಣವೇನು ಹಾಗೂ ಕೊಲೆಗೆ ನಿಖರವಾದ ಹಿನ್ನೆಲೆ ಏನು ಎಂಬುದು ತನಿಖೆಯಿಂದಷ್ಟೇ ಹೊರಬರಬೇಕಿದೆ.

ಪೊಲೀಸರು ಸ್ಥಳ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags

ManjeshwarMurderworkerKarnatakaHosangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X