Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಮಸ್ತ ನೂರನೇ ವರ್ಷದ ಸಂಭ್ರಮ: ಕಾಸರಗೋಡಿನ...

ಸಮಸ್ತ ನೂರನೇ ವರ್ಷದ ಸಂಭ್ರಮ: ಕಾಸರಗೋಡಿನ ಕುಣಿಯದಲ್ಲಿ ಭರದ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ25 Jan 2026 9:39 PM IST
share
ಸಮಸ್ತ ನೂರನೇ ವರ್ಷದ ಸಂಭ್ರಮ: ಕಾಸರಗೋಡಿನ ಕುಣಿಯದಲ್ಲಿ ಭರದ ಸಿದ್ಧತೆ

ಕುಣಿಯ (ಕಾಸರಗೋಡು): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ನೂರನೇ ವರ್ಷದ ಸಂಭ್ರಮದ ಪ್ರಯುಕ್ತ ಆಯೋಜಿಸಲಾಗಿರುವ ಬೃಹತ್ ಅಂತರಾಷ್ಟ್ರೀಯ ಮಹಾಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕುಣಿಯದಲ್ಲಿ ನಿರ್ಮಿಸಲಾಗಿರುವ 'ವರಕ್ಕಲ್ ಮುಲ್ಲಕ್ಕೋಯ ತಂಙಳ್ ನಗರ'ದಲ್ಲಿ ಫೆ. 4 ರಿಂದ 8 ರವರೆಗೆ ನಡೆಯಲಿದೆ. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಕೇರಳ, ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳು, ಲಕ್ಷದ್ವೀಪ ಹಾಗೂ ವಿದೇಶಗಳಿಂದ ಗಣ್ಯರು, ನಾಯಕರು ಮತ್ತು ಲಕ್ಷಾಂತರ ಕಾರ್ಯಕರ್ತರು ಆಗಮಿಸಲಿದ್ದಾರೆ.


ಜಾಗತಿಕ ಎಕ್ಸ್ಪೋ ಮತ್ತು ಮಹಿಳೆಯರಿಗೆ ಅವಕಾಶ:-

ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ 'ಗ್ಲೋಬಲ್ ಎಕ್ಸ್ಪೋ' ಜ.30ರ ಸಂಜೆ ಉದ್ಘಾಟನೆಗೊಳ್ಳಲಿದೆ. ಎಕ್ಸ್ಪೋ ವೀಕ್ಷಣೆಗಾಗಿ ಆನ್ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ವಿಶೇಷವೆಂದರೆ, ಜನವರಿ 31 ಮತ್ತು ಫೆಬ್ರವರಿ 1 ರಂದು ಮಹಿಳೆಯರಿಗೆ ಮಾತ್ರ ಎಕ್ಸ್ಪೋ ವೀಕ್ಷಿಸಲು ಅವಕಾಶ ನೀಡಲಾಗಿದ್ದು, ಆ ದಿನಗಳಲ್ಲಿ ಸಂಪೂರ್ಣ ಪೆವಿಲಿಯನ್ ಮಹಿಳಾ ಸ್ವಯಂಸೇವಕರ ನಿಯಂತ್ರಣದಲ್ಲಿರಲಿದೆ. ಫೆಬ್ರವರಿ 2 ರಿಂದ 8 ರವರೆಗೆ ಪುರುಷರಿಗೆ ಪ್ರವೇಶವಿರುತ್ತದೆ.

100 ಧ್ವಜಗಳ ಮೆರವಣಿಗೆ:-

ಈಜಿಪ್ಟ್ ಸೇರಿದಂತೆ ವಿವಿಧ ದೇಶಗಳು ಮತ್ತು ಭಾರತದ ವಿವಿಧ ರಾಜ್ಯಗಳಿಂದ ತರಲಾದ 100 ಧ್ವಜಗಳು ಫೆಬ್ರವರಿ 4 ರಂದು ಕುಣಿಯ ತಲುಪಲಿವೆ. ಕೋಝಿಕೋಡ್ ನ ವರಕ್ಕಲ್ ನಲ್ಲಿರುವ ಶಂಸುಲ್ ಉಲಮಾ ಇ.ಕೆ. ಅಬೂಬಕ್ಕರ್ ಮುಸ್ಲಿಯಾರ್ ಅವರ ಮಖಾಮಿನಿಂದ ದ ತರಲಾಗುವ ಈ ಧ್ವಜಗಳನ್ನು ತಳಂಗರೆಯ ಮಲಿಕ್ ಇಬ್ನು ದೀನಾರ್ ಮಖಾಮಿಗೆ ತಲುಪಿಸಿ, ಅಲ್ಲಿಂದ ಭವ್ಯ ಮೆರವಣಿಗೆಯ ಮೂಲಕ ಸಮ್ಮೇಳನ ನಗರಿಗೆ ತರಲಾಗುವುದು. ಧ್ವಜಾರೋಹಣದೊಂದಿಗೆ ಕ್ಯಾಂಪ್ ಸೆಷನ್ಗಳಿಗೆ ಚಾಲನೆ ಸಿಗಲಿದೆ.


ಬೃಹತ್ ಪ್ರತಿನಿಧಿ ಶಿಬಿರ:-

* ಆನ್ಲೈನ್ ಮೂಲಕ ಆಯ್ಕೆಯಾದ 33,313 ಪ್ರತಿನಿಧಿಗಳು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

* ಫೆಬ್ರವರಿ 4 ರಿಂದ 6ರವರೆಗೆ 10,000 ಪ್ರತಿನಿಧಿಗಳಿಗೆ 'ದಾಈ' ಶಿಬಿರ.

* ಫೆಬ್ರವರಿ 6 ರಿಂದ 8ರವರೆಗೆ 23,313 ಪ್ರತಿನಿಧಿಗಳನ್ನೊಳಗೊಂಡ ಜನರಲ್ ಕ್ಯಾಂಪ್.

ವಿವಿಧ ವಿಷಯಗಳ ಕುರಿತು ಪ್ರಮುಖ ವಿದ್ವಾಂಸರು ತರಗತಿಗಳನ್ನು ನಡೆಸಿಕೊಡಲಿದ್ದಾರೆ. ಇದರೊಂದಿಗೆ ಸಮ್ಮೇಳನ ನಗರಿಯ ಹಾಲ್ಗಳಲ್ಲಿ ಅಂತರಾಷ್ಟ್ರೀಯ ಸೆಮಿನಾರ್ ಗಳು ನಡೆಯಲಿವೆ.

ಸುಸಜ್ಜಿತ ವ್ಯವಸ್ಥೆ ಮತ್ತು ಭದ್ರತೆ:-

ಆರೋಗ್ಯ ಸೇವೆ: ಸಮ್ಮೇಳನ ನಗರಿಯಲ್ಲಿ 30 ಹಾಸಿಗೆಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರ, ವೈದ್ಯರು ಮತ್ತು ಸಿಬ್ಬಂದಿ ಲಭ್ಯವಿರುತ್ತಾರೆ. ತುರ್ತು ಚಿಕಿತ್ಸೆಗಾಗಿ 20 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.

ಅಗ್ನಿಶಾಮಕ ದಳ: ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಮೊಕ್ಕಾಂ ಹೂಡಲಿವೆ.

ಊಟೋಪಚಾರ: ಶಿಬಿರದ ಪ್ರತಿನಿಧಿಗಳಿಗೆ ನುರಿತ ತಜ್ಞರ ಮೇಲ್ವಿಚಾರಣೆಯಲ್ಲಿ ಸಿದ್ಧಪಡಿಸಿದ ಆಹಾರ ಮತ್ತು ಕುಡಿಯುವ ನೀರನ್ನು ಪೂರೈಸಲಾಗುವುದು.

ಸ್ವಯಂಸೇವಕರು: ಸುಗಮ ಸಂಚಾರ ಮತ್ತು ಜನದಟ್ಟಣೆ ನಿಯಂತ್ರಿಸಲು 3,313 'ವಿಖಾಯ' ಸ್ವಯಂಸೇವಕರು ಹಾಗೂ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಸಮಸ್ತದ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಗೂ ಸ್ಥಳೀಯ ಸ್ವಾಗತ ಸಮಿತಿಯವರು ಹಗಲಿರುಳು ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿಶೇಷವೆಂದರೆ, ಜಾತಿ-ಮತ ಮತ್ತು ರಾಜಕೀಯ ಭೇದವಿಲ್ಲದೆ ಕುಣಿಯದ ಸುತ್ತಮುತ್ತಲಿನ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿದ್ದಾರೆ.

ವರದಿ : ಯೂಸುಫ್ ಮುಂಡೋಲೆ



Tags

SamastaCentenaryCelebrations
share
ವಾರ್ತಾಭಾರತಿ
ವಾರ್ತಾಭಾರತಿ
Next Story
X