Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ವಿರಾಜಪೇಟೆ : ಸದ್ಭಾವನಾ ಮಂಚ್ ನಿಂದ...

ವಿರಾಜಪೇಟೆ : ಸದ್ಭಾವನಾ ಮಂಚ್ ನಿಂದ ಸೌಹಾರ್ದ ಸಂಗಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Sept 2025 3:13 PM IST
share
ವಿರಾಜಪೇಟೆ : ಸದ್ಭಾವನಾ ಮಂಚ್ ನಿಂದ ಸೌಹಾರ್ದ ಸಂಗಮ ಕಾರ್ಯಕ್ರಮ

ವಿರಾಜಪೇಟೆ: ಧರ್ಮಗಳು ಮೂಲಭೂತವಾಗಿ ಜಗತ್ತಿನ ಸೃಷ್ಟಿಕರ್ತ ಒಬ್ಬನೇ ಎಂಬ ಸತ್ಯವನ್ನು ಬೋಧಿಸುತ್ತವೆ. ಕುರ್ ಆನಿನ ಬೋಧನೆಯಂತೆ ಪ್ರಪಂಚದಲ್ಲಿರುವ ಎಲ್ಲಾ ಮನುಷ್ಯರೂ ಒಂದೇ ತಂದೆ ತಾಯಿಯ ಮಕ್ಕಳು' ಎಂದು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಜತೆ ಕಾರ್ಯದರ್ಶಿ ರಿಯಾಝ್ ಅಹ್ಮದ್ ಹೇಳಿದ್ದಾರೆ.

ಅವರು ವಿರಾಜಪೇಟೆಯಲ್ಲಿ ಸದ್ಭಾವನಾ ಮಂಚ್ ಏರ್ಪಡಿಸಿದ್ದ 'ಸೌಹಾರ್ದ ಸಂಗಮ'ದಲ್ಲಿ ದಿಕ್ಕೂಚಿ ಭಾಷಣ ಮಾಡಿದರು.

'ಧರ್ಮಗಳ ಹೆಸರಿನಲ್ಲಿ ಮನುಷ್ಯನು ಕಟ್ಟಿಕೊಂಡಿರುವ ಗೋಡೆಗಳನ್ನು ಸೌಹಾರ್ದದ ಮೂಲಕ ಕೆಡವಿ ಹಾಕಬೇಕಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಮಾಜದಲ್ಲಿ ರಾಜಕೀಯ ಲಾಭಕ್ಕಾಗಿ ಜಾತಿ, ವರ್ಣ, ಧರ್ಮಗಳ ಹೆಸರಿನಲ್ಲಿ ಒಡಕು ಉಂಟು ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಮಾಜದ ನೈತಿಕ ಮೌಲ್ಯಗಳ ಅಧಃಪತನ ಇಂದು ನಾವು ಎದುರಿಸುತ್ತಿರುವ ದೊಡ್ಡ ಸಮಸ್ಯೆಯಾಗಿದೆ. ಮಾನವ ಸಮಾಜವು ಆಧುನಿಕತೆಯ ಭರಾಟೆಯಲ್ಲಿ ಧರ್ಮದಿಂದ ದೂರವಾಗಿರುವುದೇ ಇದಕ್ಕೆ ಕಾರಣ. ಎಲ್ಲಾ ಸಮಸ್ಯೆಗಳಿಗೆ ಧರ್ಮವೇ ಕಾರಣ ಎಂಬುದು ತಪ್ಪು ಕಲ್ಪನೆಯಾಗಿದೆ. ನೈಜ ಸೃಷ್ಟಿಕರ್ತನಲ್ಲಿ ವಿಶ್ವಾಸವಿಟ್ಟು ಅವನ ಆದೇಶದಂತೆ ಸಂಪೂರ್ಣ ಜೀವನವನ್ನು ದೇವನ ಅನುಸರಣೆಯಂತೆ ಸಾಗಿಸುವುದು ಇಂದಿನ ಅಗತ್ಯ” ಎಂದರು.

ಸೌಹಾರ್ದ ಸಂಗಮವನ್ನು ಉದ್ಘಾಟಿಸಿದ ಅರಮೇರಿ ಶ್ರೀ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, 'ಹಬ್ಬಗಳು ಧಾರ್ಮಿಕ ಹಿನ್ನೆಲೆಯಲ್ಲಿಯೇ ಆಚರಿಸಿಕೊಂಡು ಬರುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಹಬ್ಬಗಳ ಪಾವಿತ್ರ್ಯತೆಗೆ ಕುಂದು ಉಂಟಾಗುವ ಕೆಲಸಗಳು ನಡೆಯುತ್ತಿರುವುದು ವಿಷಾದನೀಯ. ಧರ್ಮಗಳ ಮೂಲ ವಿಶ್ವಾಗಳಲ್ಲಿರುವ ಭಿನ್ನತೆಗಳನ್ನು ಬದಿಗಿರಿಸಿ ಹಬ್ಬಗಳನ್ನು ಒಟ್ಟುಗೂಡಿ ಆಚರಿಸುವಂತಾಗಬೇಕು' ಎಂದು ಹೇಳಿದರು. ಹೊಣೆಗಾರಿಕೆಯರಿಯದ ಉತ್ತರದಾಯಿತ್ವವಿಲ್ಲದ ಸಮಾಜದಿಂದ ಆರಾಜಕತೆ ಉಂಟಾಗುತ್ತವೆ. ಮನುಷ್ಯನಿಗೆ ಹೊಣೆಗಾರಿಕೆಯ ಅರಿವು ಮೂಡಿಸುವುದು ಮತ್ತು ಅವನನ್ನು ಸರಿದಾರಿಗೆ ತರುವಂತಹ ಕೆಲಸ ಧರ್ಮಗಳು ನಿರ್ವಹಿಸುತ್ತವೆ. ಧಾರ್ಮಿಕ ವಿಶ್ವಾಸ ಎಲ್ಲಾ ಸಮಸ್ಯೆಗಳಿಗೂ ಪರಿಹಾರವಾಗಿದೆ" ಎಂದು ಅವರು ಹೇಳಿದರು.

ನಿವೃತ್ತ ಪ್ರಾಂಶುಪಾಲ ಪ್ರೊ.ಪಟ್ಟಡ ಪೂವಣ್ಣ ಮಾತನಾಡಿ, 'ಸಾಮಾಜಿಕ ಪಿಡುಗುಗಳಾದ ವರದಕ್ಷಿಣೆ, ಭ್ರಷ್ಟಾಚಾರ, ಹೆಣ್ಣು ಭ್ರೂಣಹತ್ಯೆ, ಮದ್ಯಪಾನ, ತಂಬಾಕು ಸೇವನೆ, ಅಸ್ಪೃಶ್ಯತೆ ಇವುಗಳ ಬಗ್ಗೆ ಎಲ್ಲಾ ಧರ್ಮೀಯರು ಒಟ್ಟು ಸೇರಿ ಜನಾಭಿಪ್ರಾಯ ರೂಪಿಸಬೇಕು. ಸರ್ವಧರ್ಮೀಯರೂ ವೈಚಾರಿಕ ಮನೋಭಾವದೊಂದಿಗೆ ಜೊತೆಗೂಡಿ ಜೀವನದ ವಿವಿಧ ಕ್ಷೇತ್ರಗಳಲ್ಲಿ ಮೌಲ್ಯಗಳನ್ನು ಪುನಃಸ್ಥಾಪಿಸಬೇಕಾಗಿದೆ." ಎಂದರು.

ಸಂತ ಅನ್ನಮ್ಮ ಶಿಕ್ಷಣ ಸಂಸ್ಥೆಗಳ ಪ್ರಧಾನ ವ್ಯವಸ್ಥಾಪಕ ರೆ.ಫಾ.ಮದಲೈಮುತ್ತು, ವಿರಾಜಪೇಟೆ ಪುರಸಭಾ ಅಧ್ಯಕ್ಷ ಎಂ.ಕೆ.ದೇಚಮ್ಮ, ವಕೀಲರ ಸಂಘದ ಅಧ್ಯಕ್ಷ ಸಿ.ಕೆ.ಪೂವಣ್ಣ ಮಾತನಾಡಿದರು.

ಈ ಸಂದರ್ಭದಲ್ಲಿ ಕೊಡವ ಸಮಾಜದ ನೂತನ ಅಧ್ಯಕ್ಷರೂ ಸದ್ಭಾವನಾ ಮಂಚ್ ಕಾರ್ಯಾಧ್ಯಕ್ಷರೂ ಆದ ಅಮ್ಮುಣಿಚಂಡ ರವಿ ಉತ್ತಪ್ಪರನ್ನು ಸನ್ಮಾನಿಸಲಾಯಿತು. ಸದ್ಭಾವನಾ ಮಂಚ್ ಸ್ಥಾನೀಯ ಅಧ್ಯಕ್ಷ ಡಾ.ಎಂ.ಸಿ.ಕಾರ್ಯಪ್ಪ ಅಧ್ಯಕ್ಷತೆ ವಹಿಸಿದ್ದರು.

ಸದಸ್ಯರಾದ ಕೆ.ಪಿ.ಕುಂಞಿ ಮುಹಮ್ಮದ್, ಪುಷ್ಪರಾಜ್ ಜೈನ್, ಚೋಪಿ ಜೋಸೆಫ್, ಕೆ.ಪಿ.ರಶೀದ್ ವೇದಿಕೆಯಲ್ಲಿದ್ದರು.

ಕಾರ್ಯದರ್ಶಿ ಪಿ.ಕೆ.ಅಬ್ದುಲ್ ರಹ್ಮಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿಕ್ಷೇಪ್ ಚೈನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X